Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: 13 ವರ್ಷಗಳ ನಂತರ ರೈತನಿಗೆ ಬಂತು ಬರೋಬ್ಬರಿ 3 ಲಕ್ಷ ರೂ. ವಿದ್ಯುತ್ ಬಿಲ್!

ಇಂಧನ ಸಚಿವ ಜಾರ್ಜ್ ಅವರು ಉಸ್ತುವಾರಿ ವಹಿಸಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಫಿ ಬೆಳೆಗಾರರೊಬ್ಬರಿಗೆ ಬರೋಬ್ಬರಿ 13 ವರ್ಷಗಳ ನಂತರ ಮೂರು ಲಕ್ಷ ರೂಪಾಯಿಗೂ ಹೆಚ್ಚು ವಿದ್ಯುತ್ ಬಿಲ್ ಪಾವತಿಸುವಂತೆ ಮೆಸ್ಕಾಂ ನೋಟಿಸ್ ನೀಡಿದೆ. ಈ ನಡೆಗೆ ಇದೀಗ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಚಿಕ್ಕಮಗಳೂರು: 13 ವರ್ಷಗಳ ನಂತರ ರೈತನಿಗೆ ಬಂತು ಬರೋಬ್ಬರಿ 3 ಲಕ್ಷ ರೂ. ವಿದ್ಯುತ್ ಬಿಲ್!
ರೈತ ಉಮೇಶ್ ಹಾಗೂ ವಿದ್ಯುತ್ ಬಿಲ್ ನೋಟಿಸ್
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: Ganapathi Sharma

Updated on: Feb 26, 2025 | 9:34 AM

ಚಿಕ್ಕಮಗಳೂರು, ಫೆಬ್ರವರಿ 26: ಇಂಧನ ಸಚಿವ ಕೆಜೆ ಜಾರ್ಜ್ ಉಸ್ತುವಾರಿ ಜಿಲ್ಲೆಯಲ್ಲೇ ರೈತರಿಗೆ ಮೆಸ್ಕಾಂ ಶಾಕ್ ನೀಡಿದೆ. ಚಿಕ್ಕಮಗಳೂರು ತಾಲೂಕಿನ ಬಿಕ್ಕರಣೆ ಗ್ರಾಮದ ಉಮೇಶ್ ಎಂಬ ರೈತ ಮೆಸ್ಕಾಂ ಬಿಲ್ ನೋಡಿ ಕಂಗಾಲಾಗಿದ್ದಾರೆ. ಇದಕ್ಕೆ ಕಾರಣ, ಅವರಿಗೆ ಬರೋಬ್ಬರಿ 3,20,076 ರೂಪಾಯಿ ಬಿಲ್ ಬಂದಿದೆ. 10 ಎಚ್​ಪಿ ಮೋಟರ್ ಬಳಕೆಗೆ ಮೆಸ್ಕಾಂ ಬಿಲ್ ನೀಡಿದೆ. ಒಟ್ಟು 13 ವರ್ಷ 4 ತಿಂಗಳ ಬಳಿಕ 3 ಲಕ್ಷಕ್ಕೂ ಹೆಚ್ಚು ರೂಪಾಯಿ ಬಿಲ್ ಬಂದಿದೆ.

ಕೃಷಿ ಉದ್ದೇಶಕ್ಕೆ 10 ಎಚ್​ಪಿ ಮೋಟರ್ ಬಳಕೆಗೆ ವಿದ್ಯುತ್ ಉಚಿತವಾಗಿ ನೀಡಲಾಗುತ್ತಿದೆ. ಬಂಗಾರಪ್ಪ ಸಿಎಂ ಆಗಿದ್ದಾಗ ವಿದ್ಯುತ್ ಉಚಿತ ಎಂದು ಘೋಷಣೆ ಮಾಡಿದ್ದರು. ಮುಖ್ಯಮಂತ್ರಿ ಬಂಗಾರಪ್ಪ ಕಾಲದಿಂದಲೂ ಉಚಿತ ವಿದ್ಯುತ್ ಪೂರೈಕೆಯಾಗಿತ್ತಿದ್ದು, ಈಗ ಏಕಾಏಕಿ ಮೆಸ್ಕಾಂ ಬಿಲ್ ನೀಡಿದೆ.

ಮೆಸ್ಕಾಂ ಅಧಿಕಾರಿಗಳು ಹೇಳುವುದೇನು?

ರೈತನಿಗೆ ಬರೋಬ್ಬರಿ ವಿದ್ಯುತ್ ಬಿಲ್ ನೀಡಿದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೆಸ್ಕಾಂ ಅಧಿಕಾರಿಗಳು, ಕಾಫಿ ಬೆಳೆಗಾರರಿಗೆ ವಿದ್ಯುತ್ ಉಚಿತ ಇಲ್ಲ ಎಂದು ಹೇಳುತ್ತಿದ್ದಾರೆ. ಆದರೆ, 13 ವರ್ಷಕ್ಕೂ ಹೆಚ್ಚು ಕಾಲ ಬಿಲ್ ನೀಡದೆ ಈಗ ಏಕಾಏಕಿ ಬಿಲ್ ನೀಡಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ.

ಲಕ್ಷಾಂತರ ರೂಪಾಯಿ ಬಿಲ್ ನೋಡಿ ರೈತ ಉಮೇಶ್ ಇದೀಗ ಕಂಗಾಲಾಗಿದ್ದಾರೆ. 15 ದಿನಗಳ ಒಳಗೆ ಹಣ ಪಾವತಿ ಮಾಡುವಂತೆ ಅವರಿಗೆ ನೋಟಿಸ್ ನೀಡಲಾಗಿದ್ದು, ಬಿಲ್ ಪಾವತಿ ಮಾಡದಿದ್ದರೆ ವಿದ್ಯುತ್ ಕಡಿತ ಮಾಡುವ ಎಚ್ಚರಿಕೆ ನೀಡಲಾಗಿದೆ. ಆಲ್ದೂರು ಮೆಸ್ಕಾಂ ಉಪ ವಿಭಾಗದಿಂದ ನೋಟಿಸ್ ನೀಡಲಾಗಿದೆ.

ಇದನ್ನೂ ಓದಿ: ಚಿಕ್ಕಮಗಳೂರು: ಸರ್ಕಾರಿ ಶಾಲೆಗೆ 2.18 ಕೋಟಿ ರೂ. ದೇಣಿಗೆ ನೀಡಿದ ಕಾಫಿ ಉದ್ಯಮಿ!

ಉಚಿತ ವಿದ್ಯುತ್ ವಿತರಿಸುವ ಕಾಂಗ್ರೆಸ್ ಸರ್ಕಾರದ ಗೃಹಜ್ಯೋತಿ ಯೋಜನೆಯು ಎಸ್ಕಾಂಗಳಿಗೆ ಹೊರೆಯಾಗಿ ಪರಿಣಮಿಸುತ್ತಿದ್ದು, ವಿದ್ಯುತ್ ಬಿಲ್ ಹಣವನ್ನು ಸರ್ಕಾರ ಮುಂಗಡವಾಗಿ ಪಾವತಿ ಮಾಡಬೇಕು. ಇಲ್ಲವಾದರೆ ಗ್ರಾಹಕರಿಂದಲೇ ಬಿಲ್ ವಸೂಲಿ ಮಾಡಲು ಅವಕಾಶ ನೀಡಬೇಕು ಎಂದು ಎಸ್ಕಾಂಗಳು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ ಎಂದು ಇತ್ತೀಚೆಗೆ ವರದಿಯಾಗಿತ್ತು. ಆದರೆ ಈ ವರದಿಯನ್ನು ವಿದ್ಯುಚ್ಛಕ್ತಿ ನಿಯಂತ್ರಣ ಪ್ರಾಧಿಕಾರ ಅಲ್ಲಗಳದಿದ್ದು, ಆ ರೀತಿ ಯಾವುದೇ ಪ್ರಸ್ತಾವನೆ ಸಲ್ಲಿಕೆ ಆಗಿಲ್ಲ ಎಂದು ಸ್ಪಷ್ಟಪಡಿಸಿತ್ತು. ಆದರೆ ಇದೀಗ 13 ವರ್ಷಗಳಿಂದ ಬಿಲ್ ನೀಡದೆ ಏಕಾಏಕಿ ಲಕ್ಷಾಂತರ ರೂಪಾಯಿ ಬಿಲ್ ರೈತನಿಗೆ ನೀಡಿರುವುದು ಹಲವಾರು ಅನುಮಾನಗಳನ್ನು ಹುಟ್ಟು ಹಾಕಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್