AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ವಸತಿ ಶಾಲೆಯ ಶಿಕ್ಷಕಿಯಿಂದ ಮಕ್ಕಳಿಗೆ ಚಿತ್ರಹಿಂಸೆ ಆರೋಪ; ಪೋಷಕರಿಂದ ಆಕ್ರೋಶ

ಚಿಕ್ಕಮಗಳೂರು ನಗರದಲ್ಲಿ ಕಾಫಿ ಗೋಡನ್​ನಲ್ಲಿರುವ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಶಿಕ್ಷಕಿಯಿಂದ ಮಕ್ಕಳಿಗೆ ಚಿತ್ರಹಿಂಸೆ ನೀಡಿದ ಗಂಭೀರ ಆರೋಪ ಕೇಳಿಬಂದಿದೆ. ಕಾರಣವೇ ಇಲ್ಲದೆ ಶಿಕ್ಷಕಿ ದೀಪಾ ಎಂಬುವವರು ಮಕ್ಕಳ ಮೇಲೆ ಹಲ್ಲೆ ಮಾಡುತ್ತಿದ್ದರಂತೆ, ಇದರಿಂದ ಗಾಯಗೊಂಡಿರುವ ಮಕ್ಕಳು ಶಾಲೆಯಲ್ಲಿ ಕಣ್ಣೀರು ಹಾಕುತ್ತಿದ್ದು, ಶಿಕ್ಷಕಿ ವಿರುದ್ಧ 40 ಮಕ್ಕಳು ಮೇಲಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಚಿಕ್ಕಮಗಳೂರು: ವಸತಿ ಶಾಲೆಯ ಶಿಕ್ಷಕಿಯಿಂದ ಮಕ್ಕಳಿಗೆ ಚಿತ್ರಹಿಂಸೆ ಆರೋಪ; ಪೋಷಕರಿಂದ ಆಕ್ರೋಶ
ಚಿಕ್ಕಮಗಳೂರಿನ ವಸತಿ ಶಾಲೆಯ ಶಿಕ್ಷಕಿಯಿಂದ ಮಕ್ಕಳಿಗೆ ಚಿತ್ರಹಿಂಸೆ ಆರೋಪ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Mar 05, 2024 | 3:23 PM

Share

ಚಿಕ್ಕಮಗಳೂರು, ಮಾ.05: ವಸತಿ ಶಾಲೆಯ ಶಿಕ್ಷಕಿಯಿಂದ ಮಕ್ಕಳಿಗೆ ಚಿತ್ರಹಿಂಸೆ ನೀಡಿದ ಗಂಭೀರ ಆರೋಪ ಚಿಕ್ಕಮಗಳೂರಿನ ಅಂಬೇಡ್ಕರ್ ವಸತಿ ಶಾಲೆ(Ambedkar Residential school)ಯಲ್ಲಿ ಕೇಳಿಬಂದಿದೆ. ಈ ಹಿನ್ನಲೆ ಪೋಷಕರಿಂದ ಶಿಕ್ಷಕಿ ದೀಪಾ ವಿರುದ್ಧ ಗಂಭೀರ ಆಕ್ರೋಶ ವ್ಯಕ್ತವಾಗಿದೆ. ಕಾರಣವೇ ಇಲ್ಲದೆ ಶಿಕ್ಷಕಿ ದೀಪಾ ಎಂಬುವವರು ಮಕ್ಕಳ ಮೇಲೆ ಹಲ್ಲೆ ಮಾಡುತ್ತಿದ್ದರಂತೆ, ಇದರಿಂದ ಗಾಯಗೊಂಡಿರುವ ಮಕ್ಕಳು ಶಾಲೆಯಲ್ಲಿ ಕಣ್ಣೀರು ಹಾಕುತ್ತಿದ್ದು, ಶಿಕ್ಷಕಿ ವಿರುದ್ಧ 40 ಮಕ್ಕಳು ಸೇರಿದಂತೆ ಪೋಷಕರು ಲಿಖಿತ ದೂರು ನೀಡಿದ್ದಾರೆ.

ಇನ್ನು ಗಂಭೀರ ದೂರು ಹಿನ್ನೆಲೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಯೋಗೀಶ್ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಜೊತೆಗೆ ಶಿಕ್ಷಕಿ ಅಮಾನತ್ತಿಗೆ ಮೇಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಮತ್ತೊಂದು ಕಡೆ ಮೂಲಭೂತ ಸೌಕರ್ಯವಿಲ್ಲದೆ ಮಕ್ಕಳು ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ಒಂದೇ ಕೊಠಡಿಯಲ್ಲಿ 130ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ತಮ್ಮ ಸಾಮಗ್ರಿಗಳ ಜೊತೆ ಚಾಪೆಯ ಮೇಲೆ ಮಲಗುತ್ತಿದ್ದಾರೆ.

ಇದನ್ನೂ ಓದಿ:ಹೋಮ್ ವರ್ಕ್ ಮಾಡದ್ದಕ್ಕೆ ಶಿಕ್ಷೆ; ಮುಸ್ಲಿಂ ಬಾಲಕನಿಗೆ ಮಕ್ಕಳಲ್ಲಿ ಹೊಡೆಯುವಂತೆ ಹೇಳಿದ ಉತ್ತರ ಪ್ರದೇಶದ ಶಿಕ್ಷಕಿಯಿಂದ ಸಮರ್ಥನೆ

ಕಾಫಿ ಗೋಡೋನ್ ನಲ್ಲಿ ಮೂಲಭೂತ ಸೌಕರ್ಯಗಳು ಮಕ್ಕಳಿಗೆ ಮರೀಚಿಕೆ

ವಸತಿ ಶಾಲೆ ನಡೆಸಲು ಅಧಿಕಾರಿಗಳು, ಕಾಫಿ ಗೋಡೋನ್​ನನ್ನು ತಿಂಗಳಿಗೆ 1.93 ಲಕ್ಷಕ್ಕೆ ಬಾಡಿಗೆ ಪಡೆದಿದ್ದಾರೆ. ಆದರೆ, ಇಲ್ಲಿ ಮೂಲಭೂತ ಸೌಕರ್ಯಗಳು ಮಕ್ಕಳಿಗೆ ಮರೀಚಿಕೆ ಆಗಿದೆ. ಈ ಮಧ್ಯೆ ವಿದ್ಯಾರ್ಥಿಗಳಿಗೆ  ಶಿಕ್ಷಕಿಯಿಂದ ಹಲ್ಲೆ, ಇದರಿಂದ ಮೂಲಭೂತ ಸೌಕರ್ಯ ಸೇರಿದಂತೆ ಹಲ್ಲೆ ಮಾಡಿರುವ ಶಿಕ್ಷಕಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿದೆ. ಹಲ್ಲೆ ಸಂಬಂಧಿಸಿದಂತೆ ಶಿಕ್ಷಕಿ ವಿರುದ್ಧ ವಾರ್ಡನ್ ಚಿಕ್ಕಮಗಳೂರು ನಗರ ಪೊಲೀಸ್ ‌ಠಾಣೆಯಲ್ಲಿ ದೂರು ನೀಡಿದ್ದಾರೆ.

ಅಂಬೇಡ್ಕರ್ ಶಾಲೆಯ ಶಿಕ್ಷಕಿ ಮತ್ತು ಸಿಬ್ಬಂದಿ ನಡುವೇ ಕಿತ್ತಾಟ

ವಿದ್ಯಾರ್ಥಿಗಳಿಗೆ ಶಿಕ್ಷಕಿಯಿಂದ ಚಿತ್ರಹಿಂಸೆಯ ಆರೋಪಕ್ಕೆ ಟ್ವೀಸ್ಟ್​ ಸಿಕ್ಕಿದೆ. ಶಿಕ್ಷಕಿ ದೀಪಾ ವರ್ಸಸ್ ರೇಖಾ ನಡುವಿನ ಗಲಾಟೆಗೆ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ಸಹಾಯಕ ವಾರ್ಡನ್ ರೇಖಾ ಎಂಬುವವರೊಂದಿಗೆ ಆತ್ಮೀಯವಾಗಿರುವ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾತ್ರ ಶಿಕ್ಷಕಿ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:37 pm, Tue, 5 March 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್