AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾರಿ ಸಮೇತ ಕೋಟ್ಯಂತರ ರೂ ಮೌಲ್ಯದ ಅಡಿಕೆಯೊಂದಿಗೆ ಚಾಲಕ ಪರಾರಿ

ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಿಂದ 1 ಕೋಟಿಗೂ ಅಧಿಕ ಮೌಲ್ಯದ 335 ಚೀಲ ಅಡಿಕೆ ಕಳ್ಳತನವಾಗಿದೆ. ಬೆಂಗಳೂರಿನಲ್ಲಿ ಐವರು ಅಂತರ್ ರಾಜ್ಯ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 1 ಕೋಟಿಗೂ ಅಧಿಕ ಮೌಲ್ಯದ ಅಡಿಕೆ, ಲಾರಿ ಮತ್ತು ನಗದು ವಶಪಡಿಸಿಕೊಳ್ಳಲಾಗಿದೆ. ಈ ಕಳ್ಳರು ಹಲವು ಜಿಲ್ಲೆಗಳಲ್ಲಿ ಕಳ್ಳತನ ಮಾಡಿರುವುದು ತಿಳಿದುಬಂದಿದೆ.

ಲಾರಿ ಸಮೇತ ಕೋಟ್ಯಂತರ ರೂ ಮೌಲ್ಯದ ಅಡಿಕೆಯೊಂದಿಗೆ ಚಾಲಕ ಪರಾರಿ
ಲಾರಿ ಸಮೇತ ಕೋಟ್ಯಂತರ ರೂ. ಮೌಲ್ಯದ ಅಡಿಕೆಯೊಂದಿಗೆ ಚಾಲಕ ಪರಾರಿ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Jan 15, 2025 | 6:36 PM

Share

ಚಿಕ್ಕಮಗಳೂರು, ಜನವರಿ 15: ಲಾರಿ ಸಮೇತ ಕೋಟ್ಯಂತರ ಮೌಲ್ಯದ ಅಡಿಕೆ (Areca Nut) ಕಳ್ಳತನ ಮಾಡಿದ್ದ ಐವರು ಅಂತರ್ ರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. 10552500 ಮೌಲ್ಯದ 335 ಚೀಲ ಅಡಿಕೆ ಕಳ್ಳತನ ಮಾಡಿದ್ದರು. ಹಮ್ಜ, ಮೊಹಮ್ಮದ್ ಗೌಸ್ ಖಾನ್, ಮೊಹಮ್ಮದ್ ಸುಭಾನ್, ಮೊಹಮ್ಮದ್ ಫಯಾಜ್ ಮತ್ತು ಮೊಹಮ್ಮದ್ ಸಾದಿಕ್ ಬಂಧಿತರು. ಬಂಧಿತರಿಂದ 1 ಕೋಟಿ ರೂ. ಗೂ ಅಧಿಕ ಮೌಲ್ಯದ ಅಡಕೆ, 12 ಚಕ್ರದ ಲಾರಿ ಮತ್ತು 2.30 ಲಕ್ಷ ರೂ ನಗದು ವಶಕ್ಕೆ ಪಡೆಯಲಾಗಿದೆ. ಬೀರೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನ ದುಲಾರಾಮ್ ಎಂಬುವವರಿಗೆ ಅಡಕೆ ಸೇರಿತ್ತು. ಬೀರೂರಿನಿಂದ ಲಾರಿಯಲ್ಲಿ ಗುಜರಾತ್​ಗೆ 335 ಚೀಲ ಅಡಿಕೆ ಹೋಗಬೇಕಿತ್ತು. ಆದರೆ ಈ ಮಧ್ಯೆ ಲಾರಿ ಸಮೇತ ಚಾಲಕ ಎಸ್ಕೇಪ್ ಆಗಿದ್ದ. 335 ಚೀಲ‌ದ 24,500 ಕೆ.ಜಿ ಅಡಕೆಯನ್ನು ಕಳ್ಳರು ಕಳ್ಳತನ ಮಾಡಿದ್ದರು. ಬಳಿಕ ಗುಜರಾತ್ ಬದಲು ಹೊಳಲ್ಕೆರೆಯಲ್ಲಿ ಅನ್​ಲೌಡ್ ಮಾಡಿ ಎಸ್ಕೇಪ್ ಆಗಿದ್ದಾರೆ.

ಇದನ್ನೂ ಓದಿ: ಮಕ್ಕಳನ್ನ ಕಾಲುವೆಗೆ ಎಸೆದು ತಾನೂ ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದ ಮಹಿಳೆ ವಿರುದ್ಧ ಕೇಸ್ ಬುಕ್

ಬೀರೂರು ಪೊಲೀಸರಿಂದ ಕಾರ್ಯಾಚರಣೆ ಮಾಡಿ ಬೆಂಗಳೂರಿನಲ್ಲಿ ಲಾರಿ ಚಾಲಕ ಸೇರಿ ಐವರನ್ನು ಬಂಧಿಸಿದ್ದಾರೆ. ಹಾಸನ, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ವಿಜಯನಗರ, ಬೆಂಗಳೂರು ಸೇರಿದಂತೆ ಹೊರ ರಾಜ್ಯಗಳಲ್ಲೂ ಆರೋಪಿಗಳು ಕಳ್ಳತನ ಮಾಡಿದ್ದರು.

ಬರ್ತ್ ಡೇ ದಿನವೇ ಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸ್​

ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಹುಟ್ಟು ಹಬ್ಬದ ದಿನವೇ ಬಂಧಿಸಿದ್ದಾರೆ. ಆನಂದ್ ಬಂಧಿತ ಆರೋಪಿ. ಬಂಧಿತನಿಂದ 15 ಕ್ಕೂ ಹೆಚ್ಚು ಬೈಕ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಮನೆಯಿಂದ ಡ್ಯೂಟಿಗೆ ಹೋಗುವಂತೆ ರೆಡಿಯಾಗಿ ಹೋಗುತ್ತಿದ್ದ.

ಇದನ್ನೂ ಓದಿ: ಮಗಳಿಗೆ ಸಂಕ್ರಾಂತಿ ಹಬ್ಬದ ಬುತ್ತಿ ಕೊಡಲು ಬಂದ ಅತ್ತೆಯನ್ನೇ ಕೊಂದ ಅಳಿಯ, ಕಾರಣವೇನು?

ಮನೆಯವರು ಕೆಲಸಕ್ಕೆ ಹೋಗುತ್ತಾನೆ ಎಂದು ಭಾವಿಸಿದ್ದರು. ಆದರೆ ಈತನ ಕೃತ್ಯ ಮಾತ್ರ ಬೈಕ್ ಕಳ್ಳತನ. ಹಗಲಿನಲ್ಲೇ ಮನೆ ಮುಂದೆ ಹಾಗೂ ಪಾರ್ಕ್ ಬಳಿ ಬೈಕ್ ಕಳವು ಮಾಡುತ್ತಿದ್ದ. ಕಾರ್ಯಾಚರಣೆ ನಡೆಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ರಾಜಗೋಪಾಲನಗರ, ನೆಲಮಂಗಲ ಸೇರಿದಂತೆ ಹಲವು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ