AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾರಿ ಸಮೇತ ಕೋಟ್ಯಂತರ ರೂ ಮೌಲ್ಯದ ಅಡಿಕೆಯೊಂದಿಗೆ ಚಾಲಕ ಪರಾರಿ

ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಿಂದ 1 ಕೋಟಿಗೂ ಅಧಿಕ ಮೌಲ್ಯದ 335 ಚೀಲ ಅಡಿಕೆ ಕಳ್ಳತನವಾಗಿದೆ. ಬೆಂಗಳೂರಿನಲ್ಲಿ ಐವರು ಅಂತರ್ ರಾಜ್ಯ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 1 ಕೋಟಿಗೂ ಅಧಿಕ ಮೌಲ್ಯದ ಅಡಿಕೆ, ಲಾರಿ ಮತ್ತು ನಗದು ವಶಪಡಿಸಿಕೊಳ್ಳಲಾಗಿದೆ. ಈ ಕಳ್ಳರು ಹಲವು ಜಿಲ್ಲೆಗಳಲ್ಲಿ ಕಳ್ಳತನ ಮಾಡಿರುವುದು ತಿಳಿದುಬಂದಿದೆ.

ಲಾರಿ ಸಮೇತ ಕೋಟ್ಯಂತರ ರೂ ಮೌಲ್ಯದ ಅಡಿಕೆಯೊಂದಿಗೆ ಚಾಲಕ ಪರಾರಿ
ಲಾರಿ ಸಮೇತ ಕೋಟ್ಯಂತರ ರೂ. ಮೌಲ್ಯದ ಅಡಿಕೆಯೊಂದಿಗೆ ಚಾಲಕ ಪರಾರಿ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Jan 15, 2025 | 6:36 PM

Share

ಚಿಕ್ಕಮಗಳೂರು, ಜನವರಿ 15: ಲಾರಿ ಸಮೇತ ಕೋಟ್ಯಂತರ ಮೌಲ್ಯದ ಅಡಿಕೆ (Areca Nut) ಕಳ್ಳತನ ಮಾಡಿದ್ದ ಐವರು ಅಂತರ್ ರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. 10552500 ಮೌಲ್ಯದ 335 ಚೀಲ ಅಡಿಕೆ ಕಳ್ಳತನ ಮಾಡಿದ್ದರು. ಹಮ್ಜ, ಮೊಹಮ್ಮದ್ ಗೌಸ್ ಖಾನ್, ಮೊಹಮ್ಮದ್ ಸುಭಾನ್, ಮೊಹಮ್ಮದ್ ಫಯಾಜ್ ಮತ್ತು ಮೊಹಮ್ಮದ್ ಸಾದಿಕ್ ಬಂಧಿತರು. ಬಂಧಿತರಿಂದ 1 ಕೋಟಿ ರೂ. ಗೂ ಅಧಿಕ ಮೌಲ್ಯದ ಅಡಕೆ, 12 ಚಕ್ರದ ಲಾರಿ ಮತ್ತು 2.30 ಲಕ್ಷ ರೂ ನಗದು ವಶಕ್ಕೆ ಪಡೆಯಲಾಗಿದೆ. ಬೀರೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನ ದುಲಾರಾಮ್ ಎಂಬುವವರಿಗೆ ಅಡಕೆ ಸೇರಿತ್ತು. ಬೀರೂರಿನಿಂದ ಲಾರಿಯಲ್ಲಿ ಗುಜರಾತ್​ಗೆ 335 ಚೀಲ ಅಡಿಕೆ ಹೋಗಬೇಕಿತ್ತು. ಆದರೆ ಈ ಮಧ್ಯೆ ಲಾರಿ ಸಮೇತ ಚಾಲಕ ಎಸ್ಕೇಪ್ ಆಗಿದ್ದ. 335 ಚೀಲ‌ದ 24,500 ಕೆ.ಜಿ ಅಡಕೆಯನ್ನು ಕಳ್ಳರು ಕಳ್ಳತನ ಮಾಡಿದ್ದರು. ಬಳಿಕ ಗುಜರಾತ್ ಬದಲು ಹೊಳಲ್ಕೆರೆಯಲ್ಲಿ ಅನ್​ಲೌಡ್ ಮಾಡಿ ಎಸ್ಕೇಪ್ ಆಗಿದ್ದಾರೆ.

ಇದನ್ನೂ ಓದಿ: ಮಕ್ಕಳನ್ನ ಕಾಲುವೆಗೆ ಎಸೆದು ತಾನೂ ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದ ಮಹಿಳೆ ವಿರುದ್ಧ ಕೇಸ್ ಬುಕ್

ಬೀರೂರು ಪೊಲೀಸರಿಂದ ಕಾರ್ಯಾಚರಣೆ ಮಾಡಿ ಬೆಂಗಳೂರಿನಲ್ಲಿ ಲಾರಿ ಚಾಲಕ ಸೇರಿ ಐವರನ್ನು ಬಂಧಿಸಿದ್ದಾರೆ. ಹಾಸನ, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ವಿಜಯನಗರ, ಬೆಂಗಳೂರು ಸೇರಿದಂತೆ ಹೊರ ರಾಜ್ಯಗಳಲ್ಲೂ ಆರೋಪಿಗಳು ಕಳ್ಳತನ ಮಾಡಿದ್ದರು.

ಬರ್ತ್ ಡೇ ದಿನವೇ ಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸ್​

ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಹುಟ್ಟು ಹಬ್ಬದ ದಿನವೇ ಬಂಧಿಸಿದ್ದಾರೆ. ಆನಂದ್ ಬಂಧಿತ ಆರೋಪಿ. ಬಂಧಿತನಿಂದ 15 ಕ್ಕೂ ಹೆಚ್ಚು ಬೈಕ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಮನೆಯಿಂದ ಡ್ಯೂಟಿಗೆ ಹೋಗುವಂತೆ ರೆಡಿಯಾಗಿ ಹೋಗುತ್ತಿದ್ದ.

ಇದನ್ನೂ ಓದಿ: ಮಗಳಿಗೆ ಸಂಕ್ರಾಂತಿ ಹಬ್ಬದ ಬುತ್ತಿ ಕೊಡಲು ಬಂದ ಅತ್ತೆಯನ್ನೇ ಕೊಂದ ಅಳಿಯ, ಕಾರಣವೇನು?

ಮನೆಯವರು ಕೆಲಸಕ್ಕೆ ಹೋಗುತ್ತಾನೆ ಎಂದು ಭಾವಿಸಿದ್ದರು. ಆದರೆ ಈತನ ಕೃತ್ಯ ಮಾತ್ರ ಬೈಕ್ ಕಳ್ಳತನ. ಹಗಲಿನಲ್ಲೇ ಮನೆ ಮುಂದೆ ಹಾಗೂ ಪಾರ್ಕ್ ಬಳಿ ಬೈಕ್ ಕಳವು ಮಾಡುತ್ತಿದ್ದ. ಕಾರ್ಯಾಚರಣೆ ನಡೆಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ರಾಜಗೋಪಾಲನಗರ, ನೆಲಮಂಗಲ ಸೇರಿದಂತೆ ಹಲವು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್