Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾರಿ ಸಮೇತ ಕೋಟ್ಯಂತರ ರೂ ಮೌಲ್ಯದ ಅಡಿಕೆಯೊಂದಿಗೆ ಚಾಲಕ ಪರಾರಿ

ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಿಂದ 1 ಕೋಟಿಗೂ ಅಧಿಕ ಮೌಲ್ಯದ 335 ಚೀಲ ಅಡಿಕೆ ಕಳ್ಳತನವಾಗಿದೆ. ಬೆಂಗಳೂರಿನಲ್ಲಿ ಐವರು ಅಂತರ್ ರಾಜ್ಯ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 1 ಕೋಟಿಗೂ ಅಧಿಕ ಮೌಲ್ಯದ ಅಡಿಕೆ, ಲಾರಿ ಮತ್ತು ನಗದು ವಶಪಡಿಸಿಕೊಳ್ಳಲಾಗಿದೆ. ಈ ಕಳ್ಳರು ಹಲವು ಜಿಲ್ಲೆಗಳಲ್ಲಿ ಕಳ್ಳತನ ಮಾಡಿರುವುದು ತಿಳಿದುಬಂದಿದೆ.

ಲಾರಿ ಸಮೇತ ಕೋಟ್ಯಂತರ ರೂ ಮೌಲ್ಯದ ಅಡಿಕೆಯೊಂದಿಗೆ ಚಾಲಕ ಪರಾರಿ
ಲಾರಿ ಸಮೇತ ಕೋಟ್ಯಂತರ ರೂ. ಮೌಲ್ಯದ ಅಡಿಕೆಯೊಂದಿಗೆ ಚಾಲಕ ಪರಾರಿ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on: Jan 15, 2025 | 6:36 PM

ಚಿಕ್ಕಮಗಳೂರು, ಜನವರಿ 15: ಲಾರಿ ಸಮೇತ ಕೋಟ್ಯಂತರ ಮೌಲ್ಯದ ಅಡಿಕೆ (Areca Nut) ಕಳ್ಳತನ ಮಾಡಿದ್ದ ಐವರು ಅಂತರ್ ರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. 10552500 ಮೌಲ್ಯದ 335 ಚೀಲ ಅಡಿಕೆ ಕಳ್ಳತನ ಮಾಡಿದ್ದರು. ಹಮ್ಜ, ಮೊಹಮ್ಮದ್ ಗೌಸ್ ಖಾನ್, ಮೊಹಮ್ಮದ್ ಸುಭಾನ್, ಮೊಹಮ್ಮದ್ ಫಯಾಜ್ ಮತ್ತು ಮೊಹಮ್ಮದ್ ಸಾದಿಕ್ ಬಂಧಿತರು. ಬಂಧಿತರಿಂದ 1 ಕೋಟಿ ರೂ. ಗೂ ಅಧಿಕ ಮೌಲ್ಯದ ಅಡಕೆ, 12 ಚಕ್ರದ ಲಾರಿ ಮತ್ತು 2.30 ಲಕ್ಷ ರೂ ನಗದು ವಶಕ್ಕೆ ಪಡೆಯಲಾಗಿದೆ. ಬೀರೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನ ದುಲಾರಾಮ್ ಎಂಬುವವರಿಗೆ ಅಡಕೆ ಸೇರಿತ್ತು. ಬೀರೂರಿನಿಂದ ಲಾರಿಯಲ್ಲಿ ಗುಜರಾತ್​ಗೆ 335 ಚೀಲ ಅಡಿಕೆ ಹೋಗಬೇಕಿತ್ತು. ಆದರೆ ಈ ಮಧ್ಯೆ ಲಾರಿ ಸಮೇತ ಚಾಲಕ ಎಸ್ಕೇಪ್ ಆಗಿದ್ದ. 335 ಚೀಲ‌ದ 24,500 ಕೆ.ಜಿ ಅಡಕೆಯನ್ನು ಕಳ್ಳರು ಕಳ್ಳತನ ಮಾಡಿದ್ದರು. ಬಳಿಕ ಗುಜರಾತ್ ಬದಲು ಹೊಳಲ್ಕೆರೆಯಲ್ಲಿ ಅನ್​ಲೌಡ್ ಮಾಡಿ ಎಸ್ಕೇಪ್ ಆಗಿದ್ದಾರೆ.

ಇದನ್ನೂ ಓದಿ: ಮಕ್ಕಳನ್ನ ಕಾಲುವೆಗೆ ಎಸೆದು ತಾನೂ ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದ ಮಹಿಳೆ ವಿರುದ್ಧ ಕೇಸ್ ಬುಕ್

ಬೀರೂರು ಪೊಲೀಸರಿಂದ ಕಾರ್ಯಾಚರಣೆ ಮಾಡಿ ಬೆಂಗಳೂರಿನಲ್ಲಿ ಲಾರಿ ಚಾಲಕ ಸೇರಿ ಐವರನ್ನು ಬಂಧಿಸಿದ್ದಾರೆ. ಹಾಸನ, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ವಿಜಯನಗರ, ಬೆಂಗಳೂರು ಸೇರಿದಂತೆ ಹೊರ ರಾಜ್ಯಗಳಲ್ಲೂ ಆರೋಪಿಗಳು ಕಳ್ಳತನ ಮಾಡಿದ್ದರು.

ಬರ್ತ್ ಡೇ ದಿನವೇ ಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸ್​

ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಹುಟ್ಟು ಹಬ್ಬದ ದಿನವೇ ಬಂಧಿಸಿದ್ದಾರೆ. ಆನಂದ್ ಬಂಧಿತ ಆರೋಪಿ. ಬಂಧಿತನಿಂದ 15 ಕ್ಕೂ ಹೆಚ್ಚು ಬೈಕ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಮನೆಯಿಂದ ಡ್ಯೂಟಿಗೆ ಹೋಗುವಂತೆ ರೆಡಿಯಾಗಿ ಹೋಗುತ್ತಿದ್ದ.

ಇದನ್ನೂ ಓದಿ: ಮಗಳಿಗೆ ಸಂಕ್ರಾಂತಿ ಹಬ್ಬದ ಬುತ್ತಿ ಕೊಡಲು ಬಂದ ಅತ್ತೆಯನ್ನೇ ಕೊಂದ ಅಳಿಯ, ಕಾರಣವೇನು?

ಮನೆಯವರು ಕೆಲಸಕ್ಕೆ ಹೋಗುತ್ತಾನೆ ಎಂದು ಭಾವಿಸಿದ್ದರು. ಆದರೆ ಈತನ ಕೃತ್ಯ ಮಾತ್ರ ಬೈಕ್ ಕಳ್ಳತನ. ಹಗಲಿನಲ್ಲೇ ಮನೆ ಮುಂದೆ ಹಾಗೂ ಪಾರ್ಕ್ ಬಳಿ ಬೈಕ್ ಕಳವು ಮಾಡುತ್ತಿದ್ದ. ಕಾರ್ಯಾಚರಣೆ ನಡೆಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ರಾಜಗೋಪಾಲನಗರ, ನೆಲಮಂಗಲ ಸೇರಿದಂತೆ ಹಲವು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ