Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಗಾದ ಮೇಲೆ ದಾಳಿ: 5ಕ್ಕೂ ಹೆಚ್ಚು ದತ್ತಮಾಲಾಧಾರಿಗಳ ವಿರುದ್ಧ ಎಫ್​ಐಆರ್​​​ ದಾಖಲು

ದರ್ಗಾದ ಮೇಲೆ ದಾಳಿ ಮಾಡಿದ್ದ ದತ್ತಮಾಲಾಧಾರಿಗಳ ವಿರುದ್ಧ ಚಿಕ್ಕಮಗಳೂರು ತಾಲೂಕಿನ ಲಿಂಗದಹಳ್ಳಿ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ. 5ಕ್ಕೂ ಹೆಚ್ಚು ಜನರ ವಿರುದ್ಧ ಎಫ್​ಐಆರ್​​​ ದಾಖಲಿಸಿರುವ ಪೊಲೀಸರು, ಸಿಸಿಟಿವಿ ವಿಡಿಯೋ ಆಧಾರದ ಮೇಲೆ ತನಿಖೆ ನಡೆಸುತ್ತಿದ್ದಾರೆ.

ದರ್ಗಾದ ಮೇಲೆ ದಾಳಿ: 5ಕ್ಕೂ ಹೆಚ್ಚು ದತ್ತಮಾಲಾಧಾರಿಗಳ ವಿರುದ್ಧ ಎಫ್​ಐಆರ್​​​ ದಾಖಲು
ದರ್ಗಾ ಮೇಲೆ ದಾಳಿ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on:Dec 26, 2023 | 4:16 PM

ಚಿಕ್ಕಮಗಳೂರು, ಡಿಸೆಂಬರ್​ 26: ದರ್ಗಾದ ಮೇಲೆ ದಾಳಿ ಮಾಡಿದ್ದ ದತ್ತಮಾಲಾಧಾರಿಗಳ ವಿರುದ್ಧ ಚಿಕ್ಕಮಗಳೂರು ತಾಲೂಕಿನ ಲಿಂಗದಹಳ್ಳಿ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ. 5ಕ್ಕೂ ಹೆಚ್ಚು ಜನರ ವಿರುದ್ಧ ಎಫ್​ಐಆರ್​​​ ದಾಖಲಿಸಿರುವ ಪೊಲೀಸರು, ಸಿಸಿಟಿವಿ ವಿಡಿಯೋ ಆಧಾರದ ಮೇಲೆ ತನಿಖೆ ನಡೆಸುತ್ತಿದ್ದಾರೆ. ಶಾಂತವೇರಿ ಗ್ರಾಮದ ರಸ್ತೆ ಬದಿಯ ದರ್ಗಾ ಮೇಲೆ ಶಿವಮೊಗ್ಗ ನೋಂದಣಿಯ ವಾಹನದಲ್ಲಿದ್ದ ದತ್ತಮಾಲಾಧಾರಿಗಳು ದಾಳಿ ಮಾಡಿದ್ದರು.

ದತ್ತಜಯಂತಿ ಕೊನೆಯ ದಿನವಾದ ಇಂದು ದತ್ತ ಪಾದುಕೆ ದರ್ಶನದ ವೇಳೆ ದರ್ಗಾದಲ್ಲಿದ್ದ ಗೋರಿಗಳ ಮೇಲೆ ಗುಂಪೊಂದು ದಾಂದಲೆ ನಡೆಸಿದೆ. ದರ್ಗಾದ ಮೇಲಿದ್ದ ಬಟ್ಟೆ ತೆಗೆದು, ವಸ್ತುಗಳನ್ನು ಎಸೆದುಹೋಗಲಾಗಿದೆ. ಜಿಲ್ಲೆಯ ತರೀಕೆರೆ ತಾಲೂಕಿನ ಶಾಂತವೇರಿ ಗ್ರಾಮದಲ್ಲಿ ಘಟನೆ ಕಂಡುಬಂದಿದೆ. ಶಿವಮೊಗ್ಗ ಜಿಲ್ಲೆ ನೋಂದಣಿಯ ವಾಹನಗಳಲ್ಲಿ ದತ್ತಪೀಠಕ್ಕೆ ತೆರಳುತ್ತಿದ್ದಾಗ ಯುವಕರ ಗುಂಪು ದಾಂದಲೆ ನಡೆಸಿದೆ.

ಇದನ್ನೂ ಓದಿ: ಚಿಕ್ಕಮಗಳೂರಿನ ಶಾಂತವೇರಿ ದರ್ಗಾದಲ್ಲಿ ದಾಂಧಲೆ ನಡೆಸಿದ ಯುವಕರ ಗುಂಪು

ಪ್ರಶ್ನಿಸಲು ಬಂದ ಪೊಲೀಸರ ಮೇಲೂ ಹಲ್ಲೆ ಯತ್ನಿಸಿದ ಆರೋಪ ಕೇಳಿಬಂದಿತ್ತು. ಸ್ಥಳೀಯರು, ಪೊಲೀಸರು ಬರುತ್ತಿದ್ದಂತೆ ಪುಂಡರ ಗುಂಪು ಕಾಲ್ಕಿತ್ತಿದೆ. ಸದ್ಯ ಶಾಂತವೇರಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಪ್ರತಿ ವಾಹನಗಳ ತಪಾಸಣೆ

ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಇಂದು ದತ್ತಪಾದುಕೆ ದರ್ಶನ ಹೋಮ ಪೂಜೆ ಹಿನ್ನೆಲೆ ರಾಜ್ಯದ ಮೂಲೆ ಮೂಲೆಗಳಿಂದ ದತ್ತಮಾಲಾ ಧಾರಿಗಳು ಆಗಮಿಸಿದ್ದಾರೆ. ಹೀಗಾಗಿ ಚಿಕ್ಕಮಗಳೂರು ಪೊಲೀಸರು ಹೈ ಅಲರ್ಟ್ ಆಗಿದ್ದು, ದರ್ಗಾಕ್ಕೆ ತೆರಳುತ್ತಿರುವ ಪ್ರತಿ ವಾಹನ ತಪಾಸಣೆ ಮಾಡಲಾಗುತ್ತಿದೆ.

ಇದನ್ನೂ ಓದಿ: ಚಿಕ್ಕಮಗಳೂರು: ನಾಗೇಹನಹಳ್ಳಿಯಲ್ಲಿ 144 ಸೆಕ್ಷನ್​ ಜಾರಿ, ಶ್ರೀರಾಮ ಸೇನೆ ಮುಖಂಡ ರಂಜಿತ್ ಶೆಟ್ಟಿ ಅರೆಸ್ಟ್​

ಸಾವಿರಾರು ಸಂಖ್ಯೆಯಲ್ಲಿ ದತ್ತಮಾಲಾ ಧಾರಿಗಳು ಆಗಮಿಸುತ್ತಿದ್ದಾರೆ. ತಪಾಸಣೆ ನಡೆಸಿ ವಾಹನಗಳನ್ನ ಪೊಲೀಸರು ಬಿಡುತ್ತಿದ್ದಾರೆ. ಚಂದ್ರದ್ರೋಣ ಪರ್ವತದ ಕೈ ಮರ ಚೆಕ್ಪೋಸ್ಟ್ ಬಳಿ ತಪಾಸಣೆ ಮಾಡಲಾಗುತ್ತಿದೆ. ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾಕ್ಕೆ ತೆರಳುವ ಮಾರ್ಗದಲ್ಲಿ ಪೊಲೀಸ್ ನಿಯೋಜನೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:06 pm, Tue, 26 December 23

ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ