AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸಿಗರ ಗಮನಕ್ಕೆ: ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜ ಚಾರಣಕ್ಕೆ ನಿಷೇಧ!

ರಾಜ್ಯದ ವಿವಿಧ ಚಾರಣ ಪಥಗಳಲ್ಲಿ ಆನ್ ಲೈನ್ ಟಿಕೆಟ್ ವ್ಯವಸ್ಥೆ ಮಾಡಿ, ಪ್ರವಾಸಿಗರ ಸಂಖ್ಯೆಯನ್ನು ಸೀಮಿತಗೊಳಿಸುವವರೆಗೆ ಎಲ್ಲ ಚಾರಣಪಥಗಳಲ್ಲಿ ತಾತ್ಕಾಲಿಕವಾಗಿ ಚಾರಣಿಗರ ಪ್ರವೇಶವನ್ನು ಸರ್ಕಾರ ನಿರ್ಬಂಧಿಸಿದೆ. ಅದರಂತೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುಳ್ಳಯ್ಯನಗಿರಿ ಮತ್ತು ಎತ್ತಿನಭುಜ ಚಾರಣಕ್ಕೆ ನಿಷೇಧಿಸಲಾಗಿದೆ.

ಪ್ರವಾಸಿಗರ ಗಮನಕ್ಕೆ: ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜ ಚಾರಣಕ್ಕೆ ನಿಷೇಧ!
ಮುಳ್ಳಯ್ಯನಗಿರಿ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Jun 22, 2024 | 10:09 AM

Share

ಚಿಕ್ಕಮಗಳೂರು, ಜೂನ್​ 22: ಮೂಡಿಗೆರೆ (Mudigere) ತಾಲೂಕಿನ ಪ್ರಸಿದ್ಧ ಪ್ರಾಕೃತಿಕ ತಾಣ ಮುಳ್ಳಯ್ಯನಗಿರಿ (Mullayangiri) ಹಾಗೂ ಎತ್ತಿನಭುಜದಲ್ಲಿ (Ettinabhuja) ಚಾರಣಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ. ಮುಂಗಾರು ಸಮಯದಲ್ಲಿ ಚಿಕ್ಕಮಗಳೂಋಇನ ಸೌಂದರ್ಯ ದುಪಟ್ಟಾಗಿರುತ್ತದೆ. ನೆರೆ ಜಿಲ್ಲೆ ಅಲ್ಲದೇ ರಾಜ್ಯದ ಮೂಮೆ ಮೂಲೆಯಿಂದ ಪ್ರವಾಸಿಗರು ಚಿಕ್ಕಮಗಳೂರಿಗೆ ಆಗಮಿಸುತ್ತಾರೆ. ಪ್ರಕೃತಿಕ ಸಂದರ್ಯದಿಂದ ಸಮೃದ್ಧಿವಾಗಿರುವ ಕಾಫಿನಾಡಿಗೆ ಸೊಬಗಿಗೆ ಪ್ರವಾಸಿಗರು ಫಿದಾ ಆಗಿದ್ದು ದಿನದಿಂದ ದಿನಕ್ಕೆ ಸಂಖ್ಯೆ ಹೆವಚ್ಚುತ್ತಲೇ ಇದೆ.

ಸದ್ಯ ಚಿಕ್ಕಮಗಳೂರಿನಲ್ಲಿ ಜೋರು ಮಳೆ, ಗಾಳಿ ಪ್ರಾರಂಭವಾಗಿದೆ. ಈ ಸಮಯದಲ್ಲಿ ಚಾರಣಕ್ಕೆ ಹೋಗುವುದು ಅಪಾಯ. ಆದರೂ ಕೂಡ ಜನರು ಈ ಪ್ರದೇಶದಲ್ಲಿ ಚಾರಣಕ್ಕೆ ತೆರಳುತ್ತಿದ್ದು, ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮೂಡಿಗೆರೆ ವಲಯ ಅರಣ್ಯ ಇಲಾಖೆ ತಾತ್ಕಾಲಿಕವಾಗಿ ಚಾರಣ ನಿಷೇಧಿಸಿದೆ.

ರಾಜ್ಯದ ವಿವಿಧ ಚಾರಣ ಪಥಗಳಲ್ಲಿ ಆನ್ ಲೈನ್ ಟಿಕೆಟ್ ವ್ಯವಸ್ಥೆ ಮಾಡಿ, ಪ್ರವಾಸಿಗರ ಸಂಖ್ಯೆಯನ್ನು ಸೀಮಿತಗೊಳಿಸುವವರೆಗೆ ಎಲ್ಲ ಚಾರಣಪಥಗಳಲ್ಲಿ ತಾತ್ಕಾಲಿಕವಾಗಿ ಚಾರಣಿಗರ ಪ್ರವೇಶ ನಿರ್ಬಂಧಿಸಿತ್ತು. ಆದರೂ ಕೂಡ ಹಲವು ಚಾರಣಪಥಗಳಲ್ಲಿ ಅನಿರ್ಬಂಧಿತವಾಗಿ ಪ್ರವಾಸಿಗರು ಓಡಾಡುತ್ತಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಾಬಾಬುಡನ್ ಗಿರಿ ಅರ್ಚಕರಿಗಿಲ್ಲ ಸಂಬಳ; ಭಿಕ್ಷಾಟನೆ ಮಾಡಿ ಹಣ ಸಂಗ್ರಹಿಸಲು ಬಿಜೆಪಿ ಚಿಂತನೆ

ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಜೂನ್ 15, 16 ಮತ್ತು 17ರಂದು ರಜೆ ಇದ್ದ ಕಾರಣ ಚಿಕ್ಕಮಗಳೂರು ಜಿಲ್ಲೆ ಮುಳ್ಳಯ್ಯನಗಿರಿ, ಎತ್ತಿನಭುಜದಲ್ಲಿ ಸಾವಿರಾರು ಚಾರಣಿಗರು ಬಂದು ಹೋಗಿರುವುದಾಗಿ ಚಿತ್ರ, ವಿಡಿಯೋ ಸಹಿತ ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಮಾಧ್ಯಮಗಳಲ್ಲಿ ವರದಿ ಆಗಿವೆ.

ತಾತ್ಕಾಲಿಕವಾಗಿ ಚಾರಣವನ್ನು ನಿರ್ಬಂಧಿಸಿದ್ದರೂ, ಪ್ರವಾಸಿಗರು ಚಾರಣ ಮಾಡಲು ಅವಕಾಶ ನೀಡಿರುವ ಬಗ್ಗೆ ಪರಿಶೀಲಿಸಿ, ತಪ್ಪಿತಸ್ಥ ಸಿಬ್ಬಂದಿಯ ವಿರುದ್ಧ ನಿಯಮಾನುಸಾರ ಶಿಸ್ತುಕ್ರಮ ಜರುಗಿಸುವಂತೆ ಪ್ರವಾಸೋದ್ಯಮ ಖಾತೆ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಿಂದ ಎತ್ತಿನ ಭುಜವು ಸುಮಾರು 25 ಕಿಮೀ ದೂರದಲ್ಲಿದೆ. ಪಶ್ಚಿಮ ಘಟ್ಟಗಳ ಪರ್ವತದ ಶಿಖರವಾಗಿದೆ. ಇದು 4,265 ಅಡಿ ಎತ್ತರವನ್ನು ಹೊಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು