AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ರಾಜೀನಾಮೆ ವಾಪಸ್ ಪಡೆದು ಕಣ್ಮರೆ, ಆಪರೇಷನ್ ಹಸ್ತಕ್ಕೆ ಇಳಿದ ಕಾಂಗ್ರೆಸ್

ಚಿಕ್ಕಮಗಳೂರು ನಗರಸಭೆಯ ಬಿಜೆಪಿ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಅವರು ಪಕ್ಷದ ನಾಯಕರ ಸೂಚನೆ ಮೇರೆಗೆ ಎಡರನೇ ಬಾರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೀಗ ರಾಜೀನಾಮೆ ವಾಪಸ್ ಪಡೆದು ಯಾರ ಕಣ್ಣಿಗೆ ಬೀಳದೆ ಕಣ್ಮರೆಯಾಗಿದ್ದಾರೆ. ಹೀಗಾಗಿ ಇವರ ವಿರುದ್ಧ ಶಿಸ್ತುಕ್ರಮಕ್ಕೆ ಬಿಜೆಪಿ ಮುಂದಾಗಿದೆ. ಇತ್ತ, ಆಪರೇಷನ್ ಹಸ್ತದ ಮೂಲಕ ನಗರಸಭೆಯನ್ನು ತಮ್ಮ ತೆಕ್ಕೆಗೆ ಹಾಕಿಕೊಳ್ಳಲು ಕಾಂಗ್ರೆಸ್ ನಾಯಕರು ಪ್ಲ್ಯಾನ್ ಮಾಡುತ್ತಿದ್ದಾರೆ.

ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ರಾಜೀನಾಮೆ ವಾಪಸ್ ಪಡೆದು ಕಣ್ಮರೆ, ಆಪರೇಷನ್ ಹಸ್ತಕ್ಕೆ ಇಳಿದ ಕಾಂಗ್ರೆಸ್
ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ರಾಜೀನಾಮೆ ವಾಪಸ್ ಪಡೆದು ಕಣ್ಮರೆಯಾಗಿದ್ದು, ಸಿಟಿ ರವಿಗೆ ಮುಜುಗರ ತಂದಿದೆ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: Rakesh Nayak Manchi|

Updated on:Oct 15, 2023 | 10:17 AM

Share

ಚಿಕ್ಕಮಗಳೂರು, ಅ.15: ನಗರಸಭೆಯಲ್ಲಿ ಬಿಜೆಪಿ ಹೈಡ್ರಾಮೇ ನಡೆಯುತ್ತಿದೆ. ಬಿಜೆಪಿ ನಾಯಕರ ಸೂಚನೆಯಂತೆ ಎರಡನೇ ಬಾರಿ ರಾಜೀನಾಮೆ ಕೊಟ್ಟಿದ್ದ ನಗರಸಭೆ (Chikkamagalur City Council) ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಅವರು ರಾಜೀನಾಮೆ ವಾಪಸ್ ಪಡೆದು ಯಾರ ಕಣ್ಣಿಗೂ ಬೀಳದಂತೆ ಕಣ್ಮರೆಯಾಗಿದ್ದಾರೆ. ಇದರಿಂದ ಮಾಜಿ ಸಚಿವ ಸಿಟಿ ರವಿಗೆ (CT Ravi) ಮುಜುಗರ ಉಂಟಾಗಿದ್ದು, ವೇಣುಗೋಪಾಲ್ ವಿರುದ್ಧ ಶಿಸ್ತು ಕ್ರಮಕ್ಕೆ ಬಿಜೆಪಿ ಮುಂದಾಗಿದೆ. ಇದನ್ನೇ ಬಂಡವಳವನ್ನಾಗಿಸಿಕೊಂಡು ನಗರಸಭೆಯನ್ನು ತಮ್ಮ ತೆಕ್ಕೆಗೆ ಹಾಕಿಕೊಳ್ಳಲು ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತಕ್ಕೆ ಇಳಿದಿದ್ದಾರೆ.

ವೇಣುಗೋಪಾಲ್ ಅವರು ಸಿಟಿ ರವಿ ಅವರ ಆಪ್ತರಾಗಿದ್ದು, ಇವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚನೆ ನೀಡಲಾಗಿತ್ತು. ಅದರಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್​ ಅವರಿಗೆ ವೇಣುಗೋಪಾಲ್ ಅವರು ರಾಜೀನಾಮೆ ನೀಡಿದ್ದರು. ಪಕ್ಷದ ಒಪ್ಪಂದದಂತೆ ರಾಜೀನಾಮೆ ನೀಡಿದ್ದ ವೇಣುಗೋಪಾಲ್ ಇದೀಗ ಯು ಟರ್ನ್ ಹೊಡೆದಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು: ಅನ್ನದಾತನ ಆತ್ಮಹತ್ಯೆ, ಕಳೆದ 40 ದಿನಗಳಲ್ಲಿ ಐವರು ರೈತರು ನೇಣಿಗೆ ಶರಣು

ಬಿಜೆಪಿ ಪಕ್ಷದ ಮುಖಂಡರಿಗೆ ಮಾಹಿತಿ ನೀಡದೆ ಶುಕ್ರವಾರದಂದು ರಾಜೀನಾಮೆ ಹಿಂಪಡೆದ ವೇಣುಗೋಪಾಲ್ ಯಾರ ಕಣ್ಣಿಗೂ ಬೀಳದೆ ಕಣ್ಮರೆಯಾಗಿದ್ದಾರೆ. ಅದರಂತೆ ಈ ಹಿಂದೆಯೂ ವರಸಿದ್ಧಿ ವೇಣುಗೋಪಾಲ್ ಅವರು ರಾಜೀನಾಮೆ ನೀಡಿ ವಾಪಸ್ ಪಡೆದಿದ್ದರು. ಒಟ್ಟು ಮೂರು ತಿಂಗಳಿನಲ್ಲಿ ಎರಡು ಬಾರಿ ರಾಜೀನಾಮೆ ನೀಡಿ ಹಿಂಪಡೆದಿದ್ದಾರೆ. ಕಾಂಗ್ರೆಸ್ ಶಾಸಕ ಎಚ್.ಡಿ ತಮ್ಮಯ್ಯ ಸೂಚನೆ ಮೇರೆಗೆ ರಾಜೀನಾಮೆ ವಾಪಸ್ ಪಡೆದಿರುವ ಸಾಧ್ಯತೆ ಇದೆ.

35 ಸಂಖ್ಯಾಬಲದ ನಗರಸಭೆಯಲ್ಲಿ ಬಿಜೆಪಿ 18 ವಾರ್ಡ್​ಗಳನ್ನು ಗೆದ್ದಿದೆ. ಸತತ ನಾಲ್ಕು ಬಾರಿ ನಗರಸಭೆಯನ್ನು ವಶಕ್ಕೆ ಪಡೆದಿರುವ ಬಿಜೆಪಿಗೆ ಇದು ಪ್ರತಿಷ್ಠೆಯ ನಗರಸಭೆಯಾಗಿದೆ. ಆದರೆ ಆಪರೇಷನ್ ಹಸ್ತದ ಕಾಂಗ್ರೆಸ್ ಮೂಲಕ ನಗರ ಸಭೆ ವಶಪಡಿಸಿಕೊಳ್ಳಲು ಕಾಂಗ್ರೆಸ್ ಶಾಸಕ ಎಚ್.ಡಿ ತಮ್ಮಯ್ಯ ಪ್ಲ್ಯಾನ್ ಮಾಡಿಕೊಂಡಿದ್ದಾರೆ.

ಇತ್ತ, ವರಸಿದ್ಧಿ ವೇಣುಗೋಪಾಲ್ ಹೈಡ್ರಾಮದಿಂದಾಗಿ ಸಿಟಿ ರವಿ ಅವರು ಮುಜುಗರಕ್ಕೊಳಗಾಗಿದ್ದು, ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲು ಜಿಲ್ಲಾ ಬಿಜೆಪಿ ಸಿದ್ಧತೆ ನಡೆಸುತ್ತಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:16 am, Sun, 15 October 23

Follow Us
Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ