AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ರಾಜೀನಾಮೆ ವಾಪಸ್ ಪಡೆದು ಕಣ್ಮರೆ, ಆಪರೇಷನ್ ಹಸ್ತಕ್ಕೆ ಇಳಿದ ಕಾಂಗ್ರೆಸ್

ಚಿಕ್ಕಮಗಳೂರು ನಗರಸಭೆಯ ಬಿಜೆಪಿ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಅವರು ಪಕ್ಷದ ನಾಯಕರ ಸೂಚನೆ ಮೇರೆಗೆ ಎಡರನೇ ಬಾರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೀಗ ರಾಜೀನಾಮೆ ವಾಪಸ್ ಪಡೆದು ಯಾರ ಕಣ್ಣಿಗೆ ಬೀಳದೆ ಕಣ್ಮರೆಯಾಗಿದ್ದಾರೆ. ಹೀಗಾಗಿ ಇವರ ವಿರುದ್ಧ ಶಿಸ್ತುಕ್ರಮಕ್ಕೆ ಬಿಜೆಪಿ ಮುಂದಾಗಿದೆ. ಇತ್ತ, ಆಪರೇಷನ್ ಹಸ್ತದ ಮೂಲಕ ನಗರಸಭೆಯನ್ನು ತಮ್ಮ ತೆಕ್ಕೆಗೆ ಹಾಕಿಕೊಳ್ಳಲು ಕಾಂಗ್ರೆಸ್ ನಾಯಕರು ಪ್ಲ್ಯಾನ್ ಮಾಡುತ್ತಿದ್ದಾರೆ.

ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ರಾಜೀನಾಮೆ ವಾಪಸ್ ಪಡೆದು ಕಣ್ಮರೆ, ಆಪರೇಷನ್ ಹಸ್ತಕ್ಕೆ ಇಳಿದ ಕಾಂಗ್ರೆಸ್
ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ರಾಜೀನಾಮೆ ವಾಪಸ್ ಪಡೆದು ಕಣ್ಮರೆಯಾಗಿದ್ದು, ಸಿಟಿ ರವಿಗೆ ಮುಜುಗರ ತಂದಿದೆ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: Rakesh Nayak Manchi|

Updated on:Oct 15, 2023 | 10:17 AM

Share

ಚಿಕ್ಕಮಗಳೂರು, ಅ.15: ನಗರಸಭೆಯಲ್ಲಿ ಬಿಜೆಪಿ ಹೈಡ್ರಾಮೇ ನಡೆಯುತ್ತಿದೆ. ಬಿಜೆಪಿ ನಾಯಕರ ಸೂಚನೆಯಂತೆ ಎರಡನೇ ಬಾರಿ ರಾಜೀನಾಮೆ ಕೊಟ್ಟಿದ್ದ ನಗರಸಭೆ (Chikkamagalur City Council) ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಅವರು ರಾಜೀನಾಮೆ ವಾಪಸ್ ಪಡೆದು ಯಾರ ಕಣ್ಣಿಗೂ ಬೀಳದಂತೆ ಕಣ್ಮರೆಯಾಗಿದ್ದಾರೆ. ಇದರಿಂದ ಮಾಜಿ ಸಚಿವ ಸಿಟಿ ರವಿಗೆ (CT Ravi) ಮುಜುಗರ ಉಂಟಾಗಿದ್ದು, ವೇಣುಗೋಪಾಲ್ ವಿರುದ್ಧ ಶಿಸ್ತು ಕ್ರಮಕ್ಕೆ ಬಿಜೆಪಿ ಮುಂದಾಗಿದೆ. ಇದನ್ನೇ ಬಂಡವಳವನ್ನಾಗಿಸಿಕೊಂಡು ನಗರಸಭೆಯನ್ನು ತಮ್ಮ ತೆಕ್ಕೆಗೆ ಹಾಕಿಕೊಳ್ಳಲು ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತಕ್ಕೆ ಇಳಿದಿದ್ದಾರೆ.

ವೇಣುಗೋಪಾಲ್ ಅವರು ಸಿಟಿ ರವಿ ಅವರ ಆಪ್ತರಾಗಿದ್ದು, ಇವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚನೆ ನೀಡಲಾಗಿತ್ತು. ಅದರಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್​ ಅವರಿಗೆ ವೇಣುಗೋಪಾಲ್ ಅವರು ರಾಜೀನಾಮೆ ನೀಡಿದ್ದರು. ಪಕ್ಷದ ಒಪ್ಪಂದದಂತೆ ರಾಜೀನಾಮೆ ನೀಡಿದ್ದ ವೇಣುಗೋಪಾಲ್ ಇದೀಗ ಯು ಟರ್ನ್ ಹೊಡೆದಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು: ಅನ್ನದಾತನ ಆತ್ಮಹತ್ಯೆ, ಕಳೆದ 40 ದಿನಗಳಲ್ಲಿ ಐವರು ರೈತರು ನೇಣಿಗೆ ಶರಣು

ಬಿಜೆಪಿ ಪಕ್ಷದ ಮುಖಂಡರಿಗೆ ಮಾಹಿತಿ ನೀಡದೆ ಶುಕ್ರವಾರದಂದು ರಾಜೀನಾಮೆ ಹಿಂಪಡೆದ ವೇಣುಗೋಪಾಲ್ ಯಾರ ಕಣ್ಣಿಗೂ ಬೀಳದೆ ಕಣ್ಮರೆಯಾಗಿದ್ದಾರೆ. ಅದರಂತೆ ಈ ಹಿಂದೆಯೂ ವರಸಿದ್ಧಿ ವೇಣುಗೋಪಾಲ್ ಅವರು ರಾಜೀನಾಮೆ ನೀಡಿ ವಾಪಸ್ ಪಡೆದಿದ್ದರು. ಒಟ್ಟು ಮೂರು ತಿಂಗಳಿನಲ್ಲಿ ಎರಡು ಬಾರಿ ರಾಜೀನಾಮೆ ನೀಡಿ ಹಿಂಪಡೆದಿದ್ದಾರೆ. ಕಾಂಗ್ರೆಸ್ ಶಾಸಕ ಎಚ್.ಡಿ ತಮ್ಮಯ್ಯ ಸೂಚನೆ ಮೇರೆಗೆ ರಾಜೀನಾಮೆ ವಾಪಸ್ ಪಡೆದಿರುವ ಸಾಧ್ಯತೆ ಇದೆ.

35 ಸಂಖ್ಯಾಬಲದ ನಗರಸಭೆಯಲ್ಲಿ ಬಿಜೆಪಿ 18 ವಾರ್ಡ್​ಗಳನ್ನು ಗೆದ್ದಿದೆ. ಸತತ ನಾಲ್ಕು ಬಾರಿ ನಗರಸಭೆಯನ್ನು ವಶಕ್ಕೆ ಪಡೆದಿರುವ ಬಿಜೆಪಿಗೆ ಇದು ಪ್ರತಿಷ್ಠೆಯ ನಗರಸಭೆಯಾಗಿದೆ. ಆದರೆ ಆಪರೇಷನ್ ಹಸ್ತದ ಕಾಂಗ್ರೆಸ್ ಮೂಲಕ ನಗರ ಸಭೆ ವಶಪಡಿಸಿಕೊಳ್ಳಲು ಕಾಂಗ್ರೆಸ್ ಶಾಸಕ ಎಚ್.ಡಿ ತಮ್ಮಯ್ಯ ಪ್ಲ್ಯಾನ್ ಮಾಡಿಕೊಂಡಿದ್ದಾರೆ.

ಇತ್ತ, ವರಸಿದ್ಧಿ ವೇಣುಗೋಪಾಲ್ ಹೈಡ್ರಾಮದಿಂದಾಗಿ ಸಿಟಿ ರವಿ ಅವರು ಮುಜುಗರಕ್ಕೊಳಗಾಗಿದ್ದು, ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲು ಜಿಲ್ಲಾ ಬಿಜೆಪಿ ಸಿದ್ಧತೆ ನಡೆಸುತ್ತಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:16 am, Sun, 15 October 23

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!