AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿ.ಟಿ.ರವಿ ಅಪ್ತನಿಂದಲೇ ಮುಖಭಂಗ, ಚಿಕ್ಕಮಗಳೂರು ನಗರಸಭೆಯಲ್ಲಿ ಅವಿಶ್ವಾಸ ಮಂಡನೆಯಲ್ಲಿ ಬಿಜೆಪಿಗೆ ಸೋಲು

ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ವಿರುದ್ಧ ಇಂದು ಬಿಜೆಪಿ ಅವಿಶ್ವಾಸ ಮಂಡನೆ ಮಾಡಿತು. ಆದರೆ, ಒಂದೇ ಒಂದು ಮತ ಕೂಡ ಅವಿಶ್ವಾಸಕ್ಕೆ ಬೀಳದ ಹಿನ್ನೆಲೆ ವೇಣುಗೋಪಾಲ್ ಅವರು ವಿಶ್ವಾಸಮತ ಗೆದ್ದು ಬೀಗಿದರು. ಇದು ಬಿಜೆಪಿಗೆ ತೀವ್ರ ಮುಖಭಂಗ ಉಂಟು ಮಾಡಿದೆ.

ಸಿ.ಟಿ.ರವಿ ಅಪ್ತನಿಂದಲೇ ಮುಖಭಂಗ, ಚಿಕ್ಕಮಗಳೂರು ನಗರಸಭೆಯಲ್ಲಿ ಅವಿಶ್ವಾಸ ಮಂಡನೆಯಲ್ಲಿ ಬಿಜೆಪಿಗೆ ಸೋಲು
ವಿಶ್ವಾಸಮತ ಗೆದ್ದ ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ (ಎಡಚಿತ್ರ), ಕಚೇರಿ ಮುಂದೆ ಬಿಜೆಪಿ ಪ್ರತಿಭಟನೆ (ಬಲಚಿತ್ರ)
Follow us
TV9 Web
| Updated By: Rakesh Nayak Manchi

Updated on:Nov 10, 2023 | 1:31 PM

ಚಿಕ್ಕಮಗಳೂರು, ನ.10: ನಗರಸಭೆ (Chikkamagaluru City Municipal Council) ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ (Varasiddhi Venugopal) ವಿರುದ್ಧ ಇಂದು ಬಿಜೆಪಿ ಅವಿಶ್ವಾಸ ಮಂಡನೆ ಮಾಡಿತು. ಆದರೆ, ಒಂದೇ ಒಂದು ಮತ ಕೂಡ ಅವಿಶ್ವಾಸಕ್ಕೆ ಬೀಳದ ಹಿನ್ನೆಲೆ ವೇಣುಗೋಪಾಲ್ ಅವರು ವಿಶ್ವಾಸಮತ ಗೆದ್ದು ಬೀಗಿದರು. ಇದು ಬಿಜೆಪಿಗೆ ತೀವ್ರ ಮುಖಭಂಗ ಉಂಟು ಮಾಡಿದೆ.

ಸ್ವಪಕ್ಷದದಿಂದಲೇ‌ ಎದುರಾದ ಅವಿಶ್ವಾಸ ನಿರ್ಣಯದಲ್ಲಿ ಹಾಲಿ ಅಧ್ಯಕ್ಷ ವೇಣುಗೋಪಾಲ್ ಅವರು ಗೆದ್ದಿದ್ದಾರೆ. ಮೂರು ತಿಂಗಳಿನಿಂದ ನಾನಾ ರೀತಿಯ ಹೈಡ್ರಾಮಕ್ಕೆ ನಗರಸಭೆ ಸಾಕ್ಷಿಯಾಗಿತ್ತು. ಎರಡು ಬಾರಿ ರಾಜೀನಾಮೆ ನೀಡಿ ಬಳಿಕ ವಾಪಸ್ ಪಡೆದಿದ್ದ ವೇಣುಗೋಪಾಲ್ ಅವರನ್ನು ಪಕ್ಷದಿಂದ ಬಿಜೆಪಿ ಅಮಾನತು ಮಾಡಿದೆ.

ಇದನ್ನೂ ಓದಿ: ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮಹಿಳೆ ಸಾವು, ಮೃತರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡಲು ಸಿದ್ದರಾಮಯ್ಯ ಸೂಚನೆ

ಅಲ್ಲದೆ, ಇಂದು ಅವಿಶ್ವಾಸ ಮಂಡನೆ ಮಾಡಿದ ಬಿಜೆಪಿಗೆ ಮುಖಭಂಗ ಉಂಟಾಗಿದೆ. 30 ತಿಂಗಳ ಆಡಳಿತಕ್ಕೆ ಬಿಜೆಪಿಯು 18-12 ತಿಂಗಳಿಗೆ ಅಧಿಕಾರ ಹಂಚಿಕೆ ಮಾಡಿಕೊಂಡಿತ್ತು. ಮೊದಲ ಅವಧಿಗೆ ವೇಣುಗೋಪಾಲ್ ಅಧ್ಯಕ್ಷರಾಗಿದ್ದರು. ಈಗ ರಾಜೀನಾಮೆ ನೀಡದೆ ವೇಣುಗೋಪಾಲ್ ಅವರು ಆಟ ಆಡಿಸುತ್ತಿದ್ದಾರೆ.

ಇತ್ತ, ಸೋಲಿನ ಮುನ್ಸೂಚನೆ ಹಿನ್ನೆಲೆ ಸಂಸದೆ ಶೋಭಾ ಕರಂದ್ಲಾಜೆ, ವಿಧಾನಪರಿಷತ್ ಸದಸ್ಯ ಪ್ರಾಣೇಶ್ ಅವರು ಜಿಲ್ಲಾ ಕೇಂದ್ರದಲ್ಲಿ ನೆಲೆಸಿದ್ದಾರೆ. ಆ ಮೂಲಕ ಅವಿಶ್ವಾಸ ಮತ ಚಲಾವಣೆಗೆ ಗೈರಾಗಿದ್ದಾರೆ. ಇತ್ತ ಕಾಂಗ್ರೆಸ್​ನ ನಗರಸಭಾ ಸದಸ್ಯರು, ಹಾಲಿ ಶಾಸಕ ಹೆಚ್.ಡಿ. ತಮ್ಮಯ್ಯ ಭಾಗಿಯಾಗಿದ್ದಾರೆ.

ಒಟ್ಟು 35 ಸದಸ್ಯ ಬಲದ ನಗರಸಭೆಯಲ್ಲಿ ಬಿಜೆಪಿ 17, ಜೆಡಿಎಸ್ 3, ಎಸ್​ಡಿಪಿಐ 1, ಕಾಂಗ್ರೆಸ್ 12, ಪಕ್ಷಾಂತರ 1, ಶಾಸಕರು 1, ಬಂಡಾಯ ಅಧ್ಯಕ್ಷರ 1 ಮತ ಇದ್ದು, ಅವಿಶ್ವಾಸ ಮತಗಳ ವಿರುದ್ಧ ಒಂದು ಮತವೂ ಬೀಳದ ಹಿನ್ನೆಲೆ ಅಧ್ಯಕ್ಷ ವೇಣುಗೋಪಾಲ್ ಅವರು ವಿಶ್ವಾಸ ಮತ ಗೆದ್ದಿದ್ದಾರೆ.

ಇತ್ತ, ತೀವ್ರ ಮುಖಭಂಗ ಅನುಭವಿಸಿದ ಬಿಜೆಪಿ, ವರಸಿದ್ಧಿ ವೇಣುಗೋಪಾಲ್ ಕಚೇರಿ ಮುಂದೆ ಕುಳಿತು ಪ್ರತಿಭಟನೆ ನಡೆಸಿ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿತು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:30 pm, Fri, 10 November 23

ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ