ಚಿಕ್ಕಮಗಳೂರು ನಗರ ಠಾಣೆಯಲ್ಲಿ ವಕೀಲನ ಮೇಲೆ ಹಲ್ಲೆ ಪ್ರಕರಣ: PSI ಸೇರಿ 6 ಸಿಬ್ಬಂದಿ ಅಮಾನತು

ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಹೆಲ್ಮೆಟ್ ವಿಚಾರವಾಗಿ ವಕೀಲರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿತ್ತು. ಇದರಿಂದ ಕೆರಳಿದ ವಕೀಲರು, ಠಾಣೆ ಮುಂದೆ ಜಮಾಯಿಸಿ ಕ್ರಮಕ್ಕೆ ಒತ್ತಾಯಿಸಿದ್ದರು. ಸ್ಥಳಕ್ಕೆ ಆಗಮಿಸಿದ ಎಸ್​ಪಿ ವಿಕ್ರಂ ಅಮ್ಟೆ, ಠಾಣೆಯ ಪಿಎಸ್​ಐ ಸೇರಿದಂತೆ ಆರು ಮಂದಿ ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದಾರೆ.

ಚಿಕ್ಕಮಗಳೂರು ನಗರ ಠಾಣೆಯಲ್ಲಿ ವಕೀಲನ ಮೇಲೆ ಹಲ್ಲೆ ಪ್ರಕರಣ: PSI ಸೇರಿ 6 ಸಿಬ್ಬಂದಿ ಅಮಾನತು
ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಮುಂದೆ ವಕೀಲರ ಪ್ರತಿಭಟನೆ
Follow us
| Updated By: Rakesh Nayak Manchi

Updated on: Dec 01, 2023 | 6:56 AM

ಚಿಕ್ಕಮಗಳೂರು, ಡಿ.1: ಹೆಲ್ಮೆಟ್ ವಿಚಾರವಾಗಿ ವಕೀಲರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಸಂಬಂಧ ಚಿಕ್ಕಮಗಳೂರು (Chikkamagaluru) ನಗರ ಪೊಲೀಸ್ ಠಾಣೆಯ ಪಿಎಸ್​ಐ ಮಹೇಶ್ ಪೂಜಾರಿ ಸೇರಿದಂತೆ ಆರು ಮಂದಿ ಸಿಬ್ಬಂದಿಯನ್ನು ಅಮಾನತುಗೊಳಿಸಿ ಎಸ್​ಪಿ ವಿಕ್ರಂ ಅಮ್ಟೆ ಆದೇಶಿಸಿದ್ದಾರೆ.

ಹೆಲ್ಮೆಟ್ ವಿಚಾರವಾಗಿ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ವಕೀಲ ಪ್ರೀತಮ್​​ ಮೇಲೆ ಹಲ್ಲೆ ನಡೆಸಲಾಗಿತ್ತು. ಠಾಣೆಯಲ್ಲಿ ವಕೀಲ ಪ್ರೀತಮ್​​ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆ ಠಾಣೆ ಮುಂದೆ ಜಮಾಯಿಸಿದ್ದ ವಕೀಲರು ಆಕ್ರೋಶ ಹೊರಹಾಕಿದ್ದರು. ಸ್ಥಳಕ್ಕೆ ಆಗಮಿಸಿದ ಎಸ್​ಪಿ ವಿಕ್ರಂ, ವಿಚಾರಣೆ ನಡೆಸಿದ್ದರು.

ಇದನ್ನೂ ಓದಿ: ಹಾಸನ: ಕಾಡಾನೆಗಳ ಉಪಟಳ, ಎಚ್ಚರಿಕೆ ನೀಡಲು ಬಂದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಗ್ರಾಮಸ್ಥರಿಂದ ಹಲ್ಲೆ

ಪಿಎಸ್​ಐ ಸೇರಿದಂತೆ ಆರು ಸಿಬ್ಬಂದಿಯನ್ನು ಅಮಾನತು ಮಾಡಿದ್ದಾರೆ. ಹಲ್ಲೆ ಮಾಡಿದ ಪೊಲೀಸರನ್ನ ಬಂಧಿಸುವಂತೆ ಪಟ್ಟು ಹಿಡಿದ ವಕೀಲರು, ಠಾಣೆಯಿಂದ ಎಸ್​ಪಿ ತೆರಳದಂತೆ ಅಡ್ಡ ಕುಳಿತಿದ್ದರು. ಹಲ್ಲೆ ಪ್ರಕರಣ ಸಂಬಂಧ ಆರು ಮಂದಿ ವಿರುದ್ಧ ಐಪಿಸಿ ಸೆಕ್ಷನ್​​​​​​ 307, 324, 506, 504ರ ಅಡಿ ಪ್ರಕರಣ ದಾಖಲಾಗಿದೆ. ಇನ್ನು, ಪೊಲೀಸರ ದೌರ್ಜನ್ಯ ಖಂಡಿಸಿ ಚಿಕ್ಕಮಗಳೂರು ಬಾರ್​​ ಕೌನ್ಸಿಲ್​ ಸದಸ್ಯರು ನಗರದಲ್ಲಿ ಇಂದು ಪ್ರತಿಭಟನೆಗೆ ಕರೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ