AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಗೇರಮರಡಿ ಗ್ರಾಮದಲ್ಲಿ ದಲಿತರ ಪ್ರತಿಭಟನೆ ತೀವ್ರ, ಉದ್ವಿಗ್ನ ಪರಿಸ್ಥಿತಿ

ದಲಿತ ಯುವಕರ ಪ್ರತಿಭಟನೆ ತೀವ್ರಗೊಂಡಿರುವುದರಿಂದ ಹಳ್ಳಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ತಹಶೀಲ್ದಾರ್, ಪಿ.ಎಸ್.ಐ. ದಲಿತ ಮುನ್ನೆಚ್ಚರಿಕಾ ಕ್ರಮಗಳ ನೇತೃತ್ವ ವಹಿಸಿಕೊಂಡಿದ್ದಾರೆ.

ಚಿಕ್ಕಮಗಳೂರು: ಗೇರಮರಡಿ ಗ್ರಾಮದಲ್ಲಿ ದಲಿತರ ಪ್ರತಿಭಟನೆ ತೀವ್ರ, ಉದ್ವಿಗ್ನ ಪರಿಸ್ಥಿತಿ
ಗೇರಮರಡಿ ಗ್ರಾಮದಲ್ಲಿ ದಲಿತರ ಪ್ರತಿಭಟನೆ ತೀವ್ರ, ಉದ್ವಿಗ್ನ ಪರಿಸ್ಥಿತಿ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Jan 02, 2024 | 2:14 PM

Share

ಚಿಕ್ಕಮಗಳೂರು, ಜನವರಿ 2: ಚಿಕ್ಕಮಗಳೂರು (Chikkamagaluru) ಜಿಲ್ಲೆ ತರೀಕೆರೆ ತಾಲೂಕಿನ ಗೇರಮರಡಿ ಗ್ರಾಮದ ಗೊಲ್ಲರ ಬೀದಿಯಲ್ಲಿ ಹೊಸ ವರ್ಷದಂದು ದಲಿತ ಯುವಕನ (Dalit Youth) ಮೇಲೆ ಹಲ್ಲೆ ನಡೆದಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಭಟನೆ ತೀವ್ರಗೊಂಡಿದೆ. ಇದೇ ವೇಳೆ ದೇವಸ್ಥಾನಕ್ಕೆ ನುಗ್ಗಲು ದಲಿತ ಯುವಕರ ಯತ್ನಿಸಿ ಕೆಲ ಕಾಲ ಉದ್ವಿಗ್ನ ವಾತಾವರಣ ಸೃಷ್ಟಿಯಾಯಿತು.

ದಲಿತ ಸಂಘಟನೆ ಕಾರ್ಯಕರ್ತರು ಊರಿನ ತುಂಬಾ ಮೆರವಣಿಗೆ ನಡೆಸಿದರು. ಗೊಲ್ಲರಹಟ್ಟಿ ತುಂಬಾ ಓಡಾಡಿದ ದಲಿತ ಯುವಕರು ಬಳಿಕ ದೇವಸ್ಥಾನಕ್ಕೆ ಹೋಗಲೇಬೇಕು ಎಂದು ದಲಿತ ಯುವಕರು ಪಟ್ಟು ಹಿಡಿದಿದ್ದಲ್ಲದೆ, ಒಳ ಪ್ರವೇಶಿಸಲು ಮುಂದಾದರು. ಆದರೆ, ದೇವಸ್ಥಾನ ಪ್ರವೇಶಕ್ಕೆ ದಲಿತರಿಂದಲೇ ವಿರೋಧ ವ್ಯಕ್ತವಾಯಿತು. ಬಾಗಿಲು ಹಾಕಿದೆ ಬೇಡ, ಇನ್ನೊಮ್ಮೆ ಬರೋಣ ಎಂದು ಕೆಲವರು ಮನವಿ ಮಾಡಿದರು. ಆದಾಗ್ಯೂ ಕೆಲ ದಲಿತ ಯುವಕರು ದೇವಸ್ಥಾನಕ್ಕೆ ಹೋಗಲೇ ಬೇಕು ಅಂತ ಪಟ್ಟು ಹಿಡಿದರು. ಬಳಿಕ ತಹಶೀಲ್ದಾರ್, ಪೊಲೀಸರ ಮಧ್ಯ ಪ್ರವೇಶದಿಂದ ವಾತಾವರಣ ತಿಳಿಯಾಯಿತು.

ದಲಿತ ಯುವಕರ ಪ್ರತಿಭಟನೆ ತೀವ್ರಗೊಂಡಿರುವುದರಿಂದ ಹಳ್ಳಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ತಹಶೀಲ್ದಾರ್, ಪಿ.ಎಸ್.ಐ. ದಲಿತ ಮುನ್ನೆಚ್ಚರಿಕಾ ಕ್ರಮಗಳ ನೇತೃತ್ವ ವಹಿಸಿಕೊಂಡಿದ್ದಾರೆ.

ಊರೊಳಗೆ ಬಂದಿದ್ದಕ್ಕೆ ದಲಿತ ಯುವಕನ ಮೇಲೆ ಗೊಲ್ಲರಹಟ್ಟಿ ಜನ ಹಲ್ಲೆ ಮಾಡಿದ್ದರು. ದೇವರಿಗೆ ಮೈಲಿಗೆ ಆಗಿದೆ‌ ಎಂದು ಹಲ್ಲೆಗೈದಿದ್ದರು. ಇದರಿಂದ ದಲಿತ ಯುವಕರ ಆಕ್ರೋಶ ಕಟ್ಟೆ ಒಡೆದಿದೆ.

ಇದನ್ನೂ ಓದಿ: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ, ಗೊಲ್ಲರ ಬೀದಿಗೆ ಕೆಲಸಕ್ಕೆ ಬಂದ ದಲಿತ ಯುವಕನ ಮೇಲೆ ಹಲ್ಲೆ

ಗೇರಮರಡಿ ಗ್ರಾಮದ ಗೊಲ್ಲರ ಬೀದಿಯಲ್ಲಿ ನಡೆದಿದ್ದೇನು?

ದಲಿತ ಯುವಕ ಮಾರುತಿ ಗೊಲ್ಲರ ಬೀದಿಗೆ ಜೆಸಿಬಿ ಜೊತೆ ಕೆಲಸಕ್ಕೆ ಬಂದಿದ್ದ. ಮಾರುತಿ ದಲಿತ ಯುವಕ ಎಂದು ತಿಳಿಯುತ್ತಿದ್ದಂತೆ ಗೊಲ್ಲರ ಬೀದಿ ನಿವಾಸಿಗಳು ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಯುವಕನಿಗೆ ತರೀಕೆರೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?