AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿಯುವ ನೀರಿಗೆ ಸಂಕಷ್ಟ ಮುನ್ಸೂಚನೆ: ಮಾರ್ಗಸೂಚಿ ಬಿಡುಗಡೆ ಮಾಡಿದ ಚಿಕ್ಕಮಗಳೂರು ಜಿಲ್ಲಾಡಳಿತ

ಮಲೆನಾಡು ಭಾಗದಲ್ಲಿ ವರುಣ ಕೈ ಕೊಟ್ಟ ಪರಿಣಾಮ ಜಲಕ್ಷಾಮದ ಆತಂಕ ಎದುರಾಗಿದೆ. ಕುಡಿಯುವ ನೀರಿಗೆ ಸಂಕಷ್ಟದ ಮುನ್ಸೂಚನೆ ಸಿಕ್ಕ ಬೆನ್ನಲ್ಲೇ ಎಚ್ಚೆತ್ತ ಚಿಕ್ಕಮಗಳೂರು ಜಿಲ್ಲಾಡಳಿತ, ಮಾರ್ಗಸೂಚಿ ಬಿಡುಗಡೆ ಮಾಡಿದೆ. ಜಲ ಮೂಲಗಳಿಂದ ಕೃಷಿಗೆ ನೀರನ್ನ ಉಪಯೋಗಿಸದಂತೆ ಸೂಚನೆ ನೀಡಲಾಗಿದೆ.

ಕುಡಿಯುವ ನೀರಿಗೆ ಸಂಕಷ್ಟ ಮುನ್ಸೂಚನೆ: ಮಾರ್ಗಸೂಚಿ ಬಿಡುಗಡೆ ಮಾಡಿದ ಚಿಕ್ಕಮಗಳೂರು ಜಿಲ್ಲಾಡಳಿತ
ಕುಡಿಯುವ ನೀರಿಗೆ ಸಂಕಷ್ಟ ಮುನ್ಸೂಚನೆ: ಮಾರ್ಗಸೂಚಿ ಬಿಡುಗಡೆ ಮಾಡಿದ ಚಿಕ್ಕಮಗಳೂರು ಜಿಲ್ಲಾಡಳಿತ Image Credit source: iStock Photo
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: Rakesh Nayak Manchi|

Updated on:Mar 08, 2024 | 9:37 AM

Share

ಚಿಕ್ಕಮಗಳೂರು, ಮಾ.8: ಮಲೆನಾಡು ಭಾಗದಲ್ಲಿ ವರುಣ ಕೈ ಕೊಟ್ಟ ಪರಿಣಾಮ ಜಲಕ್ಷಾಮದ ಆತಂಕ ಎದುರಾಗಿದೆ. ಕುಡಿಯುವ ನೀರಿಗೆ (Drinking Water) ಸಂಕಷ್ಟದ ಮುನ್ಸೂಚನೆ ಸಿಕ್ಕ ಬೆನ್ನಲ್ಲೇ ಎಚ್ಚೆತ್ತ ಚಿಕ್ಕಮಗಳೂರು (Chikkamagaluru) ಜಿಲ್ಲಾಡಳಿತ, ಮಾರ್ಗಸೂಚಿ ಬಿಡುಗಡೆ ಮಾಡಿದೆ. ಜಲ ಮೂಲಗಳಿಂದ ಕೃಷಿಗೆ ನೀರನ್ನ ಉಪಯೋಗಿಸದಂತೆ ಸೂಚನೆ ನೀಡಲಾಗಿದೆ.

ಜಲ ಮೂಲಗಳಿಂದ ಕೃಷಿಗೆ ನೀರನ್ನ ಉಪಯೋಗಿಸದಂತೆ ಸೂಚನೆ ನೀಡಿದ ಜಿಲ್ಲಾಡಳಿತವು ಕೆರೆ, ಹಳ್ಳ ಬಾವಿಗಳಿಂದ ಕೃಷಿಗೆ ನೀರನ್ನ ಬಳಸದಂತೆ ಎಚ್ಚರಿಕೆ ನೀಡಿದೆ. ಪಾಂಪ್‌ ಸೆಟ್ ಮೂಲಕ ಕೃಷಿ ಚಟುವಟಿಕೆಗಳಿಗೆ ನೀರು ಬಳಸದಂತೆ ಆದೇಶಿಸಿದೆ.

ಸಹಾಯವಾಣಿ ಆರಂಭಿಸಿದ ಚಿಕ್ಕಮಗಳೂರು ಜಿಲ್ಲಾಡಳಿತ

ಕುಡಿಯುವ ನೀರಿಗೆ ಹಾಹಾಕಾರ ಉಂಟಾಗುವ ಸಾಧ್ಯತೆ ಹಿನ್ನೆಲೆ ಜಿಲ್ಲಾಡಳಿತವು ಚಿಕ್ಕಮಗಳೂರು ತಾಲೂಕು ಕಚೇರಿಯಲ್ಲಿ ಸಹಾಯವಾಣಿ ತೆರೆದಿದೆ. ನೀರಿನ ಸಮಸ್ಯೆ ಇದ್ದರೆ 08262_228181 ನಂಬರ್​ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 7 ಗಂಟೆಯ ವರೆಗೂ ಈ ಸೇವೆ ಲಭ್ಯವಿರಲಿದೆ.

ಇದನ್ನೂ ಓದಿ: Bengaluru Water Crisis: ಬೆಂಗಳೂರಿನಲ್ಲಿ ಟ್ಯಾಂಕರ್ ಕಳ್ಳಾಟಕ್ಕೆ ಬ್ರೇಕ್, ಕೊನೆಗೂ ಟ್ಯಾಂಕರ್ ನೀರಿಗೆ ದರ ಫಿಕ್ಸ್: ಇಲ್ಲಿದೆ ದರ ವಿವರ

ಇದೆ ಮೊದಲ ಬಾರಿಗೆ ಚಿಕ್ಕಮಗಳೂರು ತಾಲೂಕಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದ್ದಿದೆ. ಚಿಕ್ಕಮಗಳೂರು ನಗರ ಸೇರಿದಂತೆ ತಾಲೂಕಿನಲ್ಲಿ ಜಲಕ್ಷಾಮ ಉಂಟಾಗಿದೆ. ನಗರದ ಪ್ರಮುಖ ಕೆರೆಗಳು ಸಂಪೂರ್ಣವಾಗಿ ಬರಿದಾಗಿದೆ. ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುವ ಆತಂಕ ಹಿನ್ನೆಲೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಟ್ಯಾಂಕರ್ ಮಾಲೀಕರಿಗೆ ‘ನೊಂದಣಿ’ ಸೂಚನೆ

ಟ್ಯಾಂಕರ್ ಮಾಲೀಕರಿಗೆ ನೊಂದಣಿ ಮಾಡಲು ಸೂಚನೆ ನೀಡಲಾಗಿದ್ದು, ನೋಂದಣಿಗೆ ಮಾರ್ಚ್ 11 ಕೊನೆಯ ದಿನವಾಗಿದೆ. ಮಳೆ ಕೈ ಕೊಟ್ಟ ಹಿನ್ನೆಲೆ ಮಲೆನಾಡಿನಲ್ಲಿ ಹನಿಹನಿ ನೀರಿಗೂ ಸಂಕಷ್ಟ ಎದುರಾಗಿದ್ದು, ಯಗಚಿ ಜಲಾಶಯದಲ್ಲಿ ನೀರಿನ ಮಟ್ಟದಲ್ಲಿ ಭಾರೀ ಇಳಿಕೆಯಾಗಿದೆ. ಚಿಕ್ಕಮಗಳೂರು ನಗರದಲ್ಲಿ ಕುಡಿಯುವ ನೀರಿಗೆ ಸಂಕಷ್ಟ ಎದುರಾಗಲಿರುವ ಹಿನ್ನೆಲೆ ಬೇಲೂರಿನ ಯಗಚಿ ಜಲಾಶಯದಿಂದ ನಗರಕ್ಕೆ ನೀರು ಸರಬರಾಜು ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:33 am, Fri, 8 March 24

Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ