AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈದ್ ಮಿಲಾದ್ ಆಚರಣೆ ವಿವಾದ: ಶಾಲೆಗೆ ನುಗ್ಗಿ ಹಿಂದೂ ಕಾರ್ಯಕರ್ತರು ಆಕ್ರೋಶ; ಎಫ್​ಐಆರ್ ದಾಖಲು

Chikkamagaluru News: ಚಿಕ್ಕಮಗಳೂರಿನ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್​​ ಆಚರಣೆಗೆ ಮುಂದಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದನ್ನು ವಿರೋಧಿಸಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಶಾಲೆಗೆ ತೆರಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಶಾಲಾ ಪ್ರಿನ್ಸಿಪಾಲ್ ದೂರಿನ ಮೇರೆಗೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಈದ್ ಮಿಲಾದ್ ಆಚರಣೆ ವಿವಾದ: ಶಾಲೆಗೆ ನುಗ್ಗಿ ಹಿಂದೂ ಕಾರ್ಯಕರ್ತರು ಆಕ್ರೋಶ; ಎಫ್​ಐಆರ್ ದಾಖಲು
ಈದ್ ಮಿಲಾದ್Image Credit source: tv9 kannada
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Aug 29, 2026 | 5:01 PM

Share

ಮುಖ್ಯಾಂಶಗಳು

  • ಚಿಕ್ಕಮಗಳೂರಿನ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ವಿವಾದ
  • ಈದ್​ ಮಿಲಾದ್​ ಆಚರಣೆ ನಡೆಸದಂತೆ ಹಿಂದೂ ಮುಖಂಡರ ಆಕ್ರೋಶ
  • ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲು

ಚಿಕ್ಕಮಗಳೂರು, ಆಗಸ್ಟ್​​ 29: ಚಿಕ್ಕಮಗಳೂರಿನ (chikkamagaluru) ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ (Eid Milad) ಆಚರಣೆ ನಡೆಸದಂತೆ ಆಕ್ರೋಶ ವ್ಯಕ್ತಪಡಿಸಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತರ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ನಗರದ MES ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಘಟನೆ ನಡೆದಿದ್ದು, ಸದ್ಯ ಶಾಲೆ‌ಯ ಪ್ರಿನ್ಸಿಪಾಲ್ ನೀಡಿದ್ದ ದೂರಿನ ಮೇರೆಗೆ ಎಫ್​ಐಆರ್ ದಾಖಲಾಗಿದೆ.

ನಡೆದಿದ್ದೇನು?

ಚಿಕ್ಕಮಗಳೂರಿನ ಎಂಇಎಸ್ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಆಡಳಿತ ಮಂಡಳಿ ಈದ್ ಮಿಲಾದ್ ಆಚರಣೆಗೆ ಮುಂದಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ, ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ನಿರ್ದಿಷ್ಟ ಡ್ರೆಸ್ ಕೋಡ್ ಪಾಲಿಸುವಂತೆ ಆಡಳಿತ ಮಂಡಳಿ ಮೆಸೇಜ್ ಕಳುಹಿಸಿದ್ದಾರೆ. ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಮಾಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಹಿಂದೂ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ನೇರವಾಗಿ ಶಾಲೆಗೆ ತೆರಳಿ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಮತ್ತೊಂದು ವಿವಾದ: ಟಿಪ್ಪು ನಗರದಲ್ಲಿ ರಾರಾಜಿಸಿದ ಐ ಲವ್ ಮೊಹಮ್ಮದ್ ಬ್ಯಾನರ್!

ಸದ್ಯ ಶಾಲೆ ಪ್ರಿನ್ಸಿಪಾಲ್ ನೀಡಿದ ದೂರಿನನ್ವಯ ಹಿಂದೂ ಸಂಘಟನೆಯ ಮುಖಂಡರು ಮತ್ತು ಕಾರ್ಯಕರ್ತರಾದ ಕೋಟೆ ಪ್ರಸಾದ್, ಬೆಣ್ಣೆ ಕೃಷ್ಣ, ಶಿವಣ್ಣ, ದಿಲೀಪ್ ಶೆಟ್ಟಿ, ಸುನಿಲ್, ರಾಜೇಗೌಡ ಸೇರಿದಂತೆ ಹಲವರ ವಿರುದ್ಧ ಪೊಲೀಸರು ಬಿಎನ್‌ಎಸ್ (BNS) ಸೆಕ್ಷನ್ 329(4), 352 ಹಾಗೂ 190ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಎಫ್​​ಐಆರ್​ನಲ್ಲಿ ಏನಿದೆ?

ಸುಮಾರು 02 ವರ್ಷಗಳಿಂದ ಎಂಇಎಸ್ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್​​ನಲ್ಲಿ ನರ್ಸರಿಯಿಂದ 06ನೇ ತರಗತಿ ವರೆಗೆ ಕ್ಲಾಸ್​ಗಳು ನಡೆಯುತ್ತಿದ್ದು, ಅದಕ್ಕೆ ನಾನು ಪ್ರಾಂಶುಪಾಲೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ನಮ್ಮ ಶಾಲೆಯಲ್ಲಿ ಉಳಿದಂತೆ ಒಟ್ಟು 21 ಜನ ಶಿಕ್ಷಕರಿದ್ದು ಅದರಲ್ಲಿ 18 ಜನ ಮಹಿಳೆಯರಿದ್ದು, ಇಬ್ಬರು ಮಾತ್ರ ಶಿಕ್ಷಕರಿದ್ದಾರೆ. ಶಾಲೆಯ ನಿಯಮದಂತೆ ಮಕ್ಕಳಿಗೆ ಪ್ರತಿ ಶನಿವಾರ ಕಲರ್ ಡ್ರೆಸ್ ಇದ್ದು ಅದೇ ಪ್ರಕಾರ ಆಗಸ್ಟ್​​ 29ರಂದು ಮಕ್ಕಳು ಕಲರ್ ಡ್ರೆಸ್​​ನಲ್ಲಿ ಶಾಲೆಗೆ ಬರುತ್ತಿದ್ದರು.

ಇದನ್ನೂ ಓದಿ: Chikkamagaluru Tipu Cutout Row: ಚಿಕ್ಕಮಗಳೂರು ಟಿಪ್ಪು ಕಟೌಟ್ ವಿವಾದ: ಪ್ರಮುಖ ಆರೋಪಿ ಅಫ್ರಿದ್ ಬಂಧನ!

ಇಂದು ಬೆಳಗ್ಗೆ ಸುಮಾರು 09-15 ಗಂಟೆ ಸಮಯಕ್ಕೆ 07-08 ಜನರ ಗುಂಪು ಏಕಾಏಕಿ ಶಾಲೆಗೆ ನುಗ್ಗಿ ಈದ್ ಮಿಲಾದ್ ಹಬ್ಬದ ಆಚರಣೆ ಮಾಡುತ್ತಿದ್ದೀರಾ ಎಂದು ಜೋರು ಜೋರಾಗಿ ಕೂಗಾಡಿದರು. ನಾನು ಆ ರೀತಿ ಯಾವುದೇ ಆಚರಣೆ ಮಾಡುತ್ತಿಲ್ಲ. ಮಕ್ಕಳು ಶಾಲಾ ನಿಯಮದಂತೆ ಕಲರ್ ಡ್ರೆಸ್​ನಲ್ಲಿ ಬಂದಿದ್ದಾರೆ ಎಂದು ಹೇಳಿದರೂ ಕೇಳದೇ ಬಾಯಿಗೆ ಬಂದ ಹಾಗೆ ಬೈಯುತ್ತ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ. ತಕ್ಷಣ ನಾನು 112 ಕರೆ ಮಾಡಿ ವಿಚಾರ ತಿಳಿಸಿದೆ. ಪೊಲೀಸ್​​​ ಬಂದು ಅವರನ್ನು ಕಳುಹಿಸಿದ್ದಾರೆ. ಕೋಟೆ ಪ್ರಸಾದ್, ಬೆಣ್ಣೆ ಕೃಷ್ಣ, ಶಿವಣ್ಣ, ದಿಲೀಪ್ ಶೆಟ್ಟಿ, ಸುನಿಲ್ ಹಾಗೂ ರಾಜೇಗೌಡ ಮತ್ತು ಇತರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:59 pm, Sat, 29 August 26

Follow Us
ಕಣ್ಣೂರಿನಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಬೀಳುತ್ತಿದ್ದ ವೃದ್ಧನ ರಕ್ಷಣೆ
ಕಣ್ಣೂರಿನಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಬೀಳುತ್ತಿದ್ದ ವೃದ್ಧನ ರಕ್ಷಣೆ
ನಾಗೇಂದ್ರ ಜತೆಗೆ ಜನಾರ್ದನ ರೆಡ್ಡಿ. ರೇಣುಕಾಚಾರ್ಯಗೂ ಸಂಕಷ್ಟ?
ನಾಗೇಂದ್ರ ಜತೆಗೆ ಜನಾರ್ದನ ರೆಡ್ಡಿ. ರೇಣುಕಾಚಾರ್ಯಗೂ ಸಂಕಷ್ಟ?
ನೇಪಾಳ ಪ್ರವಾಹ: ಪ್ರಧಾನಿ ಮೋದಿ, ಅಮಿತ್ ಶಾಗೆ ಖರ್ಗೆ ಪತ್ರ
ನೇಪಾಳ ಪ್ರವಾಹ: ಪ್ರಧಾನಿ ಮೋದಿ, ಅಮಿತ್ ಶಾಗೆ ಖರ್ಗೆ ಪತ್ರ
ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಿಸಲ್ಲ: ಆರ್ ಅಶೋಕ್
ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಿಸಲ್ಲ: ಆರ್ ಅಶೋಕ್
ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಲ-ಮೂತ್ರ ಅಸುರಕ್ಷಿತ ರೀತಿಯಲ್ಲಿ ವಿಲೇವಾರಿ
ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಲ-ಮೂತ್ರ ಅಸುರಕ್ಷಿತ ರೀತಿಯಲ್ಲಿ ವಿಲೇವಾರಿ
ರಂಗನಾಥ ಸ್ವಾಮಿ ದೇವಾಲಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಿಶೇಷ ಪೂಜೆ
ರಂಗನಾಥ ಸ್ವಾಮಿ ದೇವಾಲಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಿಶೇಷ ಪೂಜೆ
ನೇಪಾಳ ಪ್ರವಾಹದಲ್ಲಿ ಸಿಲುಕಿರೋ ಕನ್ನಡಿಗರಿಗೆ ಧೈರ್ಯ ತುಂಬಿದ ಸಿಎಂ
ನೇಪಾಳ ಪ್ರವಾಹದಲ್ಲಿ ಸಿಲುಕಿರೋ ಕನ್ನಡಿಗರಿಗೆ ಧೈರ್ಯ ತುಂಬಿದ ಸಿಎಂ
ದಾವಣಗೆರೆಯಲ್ಲಿ ಅಡಿಕೆ ಬೆಳೆಗಾರರ ಬೃಹತ್ ಪ್ರತಿಭಟನೆ
ದಾವಣಗೆರೆಯಲ್ಲಿ ಅಡಿಕೆ ಬೆಳೆಗಾರರ ಬೃಹತ್ ಪ್ರತಿಭಟನೆ
34 ಕಾಲೇಜು ಹಾಸ್ಟೆಲ್ ಕ್ಯಾಂಟೀನ್‌ಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ
34 ಕಾಲೇಜು ಹಾಸ್ಟೆಲ್ ಕ್ಯಾಂಟೀನ್‌ಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ
‘ಬಿಗ್ ಬಾಸ್ ಅಗ್ನಿಪರೀಕ್ಷೆ’ ವೇದಿಕೆಯಲ್ಲಿ ರಂಪಾಟ: ಗಂಭೀರ ಆರೋಪ
‘ಬಿಗ್ ಬಾಸ್ ಅಗ್ನಿಪರೀಕ್ಷೆ’ ವೇದಿಕೆಯಲ್ಲಿ ರಂಪಾಟ: ಗಂಭೀರ ಆರೋಪ