AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಲ್ಲಿ ‌ನಕಲಿ ನಾಟಿ ತುಪ್ಪ ತಯಾರಿ ಜಾಲ ಪತ್ತೆ: ರಾಶಿ ರಾಶಿ ರಾಸಾಯನಿಕ ಕಂಡು ಅಧಿಕಾರಿಗಳೇ ದಂಗು!

ಚಿಕ್ಕಮಗಳೂರಿನಲ್ಲಿ ಡಾಲ್ಡಾ, ವನಸ್ಪತಿ ಹಾಗೂ ರಾಸಾಯನಿಕ ಬಳಸಿ ನಕಲಿ ನಾಟಿ ತುಪ್ಪ ತಯಾರಿಸುತ್ತಿದ್ದ ಜಾಲವನ್ನು ಆಹಾರ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿದ್ದು, ಎಸ್ಕೇಪ್ ಆಗಿರುವ ಬಳ್ಳಾರಿ ಮೂಲದ ಖದೀಮರಿಗಾಗಿ ಶೋಧ ನಡೆಸುತ್ತಿದ್ದಾರೆ. ಕಳೆದ ಹಲವು ವರ್ಷಗಳಿಂದಲೂ ಇವರು ಇದೇ ಕೆಲಸ ಮಾಡಿಕೊಂಡು ಬಂದಿರುವ ವಿಚಾರವೂ ತನಿಖೆ ವೇಳೆ ಬಯಲಾಗಿದೆ.

ಚಿಕ್ಕಮಗಳೂರಲ್ಲಿ ‌ನಕಲಿ ನಾಟಿ ತುಪ್ಪ ತಯಾರಿ ಜಾಲ ಪತ್ತೆ: ರಾಶಿ ರಾಶಿ ರಾಸಾಯನಿಕ ಕಂಡು ಅಧಿಕಾರಿಗಳೇ ದಂಗು!
ನಕಲಿ ನಾಟಿ ತುಪ್ಪImage Credit source: Tv9 Kannada
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Aug 21, 2026 | 6:44 PM

Share

ಚಿಕ್ಕಮಗಳೂರು, ಆಗಸ್ಟ್​​ 21: ಆಯುರ್ವೇದದಲ್ಲಿ ತನ್ನದೇ ಸ್ಥಾನ ಪಡೆದು , ಸಂಜೀವಿನಿ ಎಂಬ ಹೆಸರು ಪಡೆದಿರುವ ನಾಟಿ ತುಪ್ಪಕ್ಕೆ ಮಾರುಕಟ್ಟೆಯಲ್ಲಿ ಬಹು ಬೇಡಿಕೆ ಇದೆ. ಇದನ್ನೇ ಬಂಡವಾಳ ಮಾಡಿಕೊಂಡ ತಂಡವೊಂದು ಚಿಕ್ಕಮಗಳೂರಿನಲ್ಲಿ (Chikkamagaluru) ಕಲಬೆರಕೆ ತುಪ್ಪ ತಯಾರಿಸಿ ಮಾರಾಟ ಮಾಡುತ್ತಿರುವ ಆಘಾತಕಾರಿ ವಿಚಾರ ಅಧಿಕಾರಿಗಳ ದಾಳಿ ವೇಳೆ ಬಯಲಾಗಿದೆ. ನಗರದ ಮಾರ್ಕೆಟ್ ರಸ್ತೆಯ ಪಾಳುಬಿದ್ದ ಮನೆಯ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ಪೊಲೀಸರ ನೆರವು ಪಡೆದು ರೇಡ್​​ ನಡೆಸಿದ್ದು, ಮನೆಯಲ್ಲಿ ಪತ್ತೆಯಾಗಿರುವ ರಾಶಿ ರಾಶಿ ರಾಸಾಯನಿಕ ಕಂಡು ಶಾಕ್​​ ಆಗಿದ್ದಾರೆ.

ದಾಳಿ ವೇಳೆ ಕೈಗೆ ಸಿಗದ ಆರೋಪಿಗಳು

ಪಾಳು ಬಿದ್ದ ಮನೆಯಲ್ಲಿ ನಕಲಿ ನಾಟಿ ತುಪ್ಪ ತಯಾರಿ ಬಗ್ಗೆ ಖಚಿತ ಮಾಹಿತಿಯ ಆಧಾರದಲ್ಲಿ ಅಧಿಕಾರಿಗಳು ಪಾಳು ಬಿದ್ದ ಮನೆ ಮೇಲೆ ದಾಲಿ ನಡೆಸಿದ್ದಾರೆ. ಆದರೆ ಈ ವೇಳೆ ಮನೆಯ ಬಾಗಿಲು ಲಾಕ್​​ ಆಗಿದ್ದ ಕಾರಣ, ಬೀಗ ಮುರಿದು ಒಳ ಪ್ರವೇಶಿಸಿದ ಅಧಿಕಾರಿಗಳು ಡಾಲ್ಡಾ, ವನಸ್ಪತಿ , ಪಾಮ್ ಆಯಿಲ್ ಸೇರಿ ವಿವಿಧ ರಾಸಾಯನಿಕಗಳ ಬಾಟಲಿಗಳನ್ನು ಸ್ಥಳದಲ್ಲಿ ಪತ್ತೆ ಮಾಡಿದ್ದಾರೆ. ಕಲಬೆರೆಕೆ ನಾಟಿ ತುಪ್ಪವನ್ನು ಖದೀಮರು ಹಳ್ಳಿ ಸೇರಿ ನಗರಗಳಲ್ಲಿಯೂ ಮಾರುತ್ತಿದ್ದರು ಎಂಬುದು ಗೊತ್ತಾಗಿದೆ.

ಇದನ್ನೂ ಓದಿ: ರಾಣಿ ಝರಿ ಪ್ರವಾಸಿ ತಾಣದಲ್ಲಿ ರೀಲ್ಸ್‌ಗಾಗಿ 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ

ಬೇರೆ ಜಿಲ್ಲೆಯಿಂದ ಬಂದವರಿಂದ ಕೃತ್ಯ

ಇನ್ನು ಈ ರೀತಿ ನಕಲಿ ನಾಟಿ ತುಪ್ಪ ತಯಾರಿಸುತ್ತಿದ್ದ ಗ್ಯಾಂಗ್​​ನ ಸದಸ್ಯರು ಸ್ಥಳೀಯರಲ್ಲ. ಬದಲಾಗಿ ಬಳ್ಳಾರಿಯಿಂದ ಬಂದವರು ಎಂಬುದು ಕೂಡ ಬಹಿರಂಗಗೊಂಡಿದೆ. ಕಳೆದ ಹಲವು ವರ್ಷಗಳಿಂದಲೂ ಇವರು ಇದೇ ಕೆಲಸ ಮಾಡಿಕೊಂಡು ಬಂದಿರುವ ವಿಚಾರವೂ ತನಿಖೆ ವೇಳೆ ಬಯಲಾಗಿದೆ. ಪುಟ್ಟ ಮಕ್ಕಳು ಸೇರಿದಂತೆ ಹಿರಿಯರವರೆಗೂ ಬಳಸುವ ನಾಟಿ‌ ತುಪ್ಪದ ಹೆಸರಲ್ಲಿ ಕಲಬೆರೆಕೆ ಪದಾರ್ಥ ಮಾರುತ್ತಿದ್ದ ವಿಚಾರ ಕೇಳಿ ಸ್ಥಳೀಯರು ಬೆಚ್ಚಿಬಿದ್ದಿದ್ದು, ಎಸ್ಕೇಪ್ ಆಗಿರುವ ದಂಧೆಕೋರರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಅವರೆಲ್ಲ ಖಾಕಿ ಖೆಡ್ಡಾಕ್ಕೆ ಬಿದ್ದ ಬಳಿಕವೇ ಈ ಬಗ್ಗೆ ಇನ್ನಷ್ಟು ವಿಚಾರಗಳು ಬಹಿರಂಗವಾಗಲಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಪೊಲೀಸರ ಮುಂದೆ ತಂದೆಯ ಗುಟ್ಟು ರಟ್ಟು ಮಾಡಿದ 6 ವರ್ಷದ ಮಗ
ಪೊಲೀಸರ ಮುಂದೆ ತಂದೆಯ ಗುಟ್ಟು ರಟ್ಟು ಮಾಡಿದ 6 ವರ್ಷದ ಮಗ
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು