AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ವರಕ್ಕೆ ಒಂದೇ ಗ್ರಾಮದ 3 ಮಕ್ಕಳು ಸಾವು, 20ಕ್ಕೂ ಅಧಿಕ ಮಕ್ಕಳಿಗೆ ಐಸಿಯುನಲ್ಲಿ ಚಿಕಿತ್ಸೆ

ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನಲ್ಲಿ ಮಕ್ಕಳಲ್ಲಿ ತೀವ್ರ ಜ್ವರ ಹೆಚ್ಚಾಗುತ್ತಿದ್ದು, ಮೂವರು ಮಕ್ಕಳು ಮೃತಪಟ್ಟಿದ್ದಾರೆ. ಇದರಿಂದ ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. 20ಕ್ಕೂ ಹೆಚ್ಚು ಮಕ್ಕಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಳೆಗಾಲದಲ್ಲಿ ಜ್ವರ ಸಾಮಾನ್ಯವಾಗಿದ್ದರೂ, ಈ ಬಾರಿ ತೀವ್ರ ಸ್ವರೂಪದಲ್ಲಿದೆ. ಆರೋಗ್ಯ ಇಲಾಖೆ ತನಿಖೆ ನಡೆಸುತ್ತಿದೆ.

ಜ್ವರಕ್ಕೆ ಒಂದೇ ಗ್ರಾಮದ 3 ಮಕ್ಕಳು ಸಾವು, 20ಕ್ಕೂ ಅಧಿಕ ಮಕ್ಕಳಿಗೆ ಐಸಿಯುನಲ್ಲಿ ಚಿಕಿತ್ಸೆ
ಜ್ವರದಿಂದ ಮೃತರಾದ ಮಕ್ಕಳು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Aug 13, 2025 | 6:21 PM

Share

ಚಿಕ್ಕಮಗಳೂರು, ಆಗಸ್ಟ್​ 08: ಚಿಕ್ಕಮಗಳೂರಿನ (Chikkamagaluru) ಮೂಡಿಗೆರೆ ತಾಲೂಕಿನಲ್ಲಿ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿರುವ ಜ್ವರ (Fever) ಆತಂಕ ಮೂಡಿಸಿದೆ. ಒಂದೇ ಊರಿನ ಇಬ್ಬರು ಮಕ್ಕಳು ಸೇರಿದಂತೆ 8 ತಿಂಗಳ ಶಿಶು ಜ್ವರಕ್ಕೆ ಬಲಿಯಾಗಿದೆ. 20 ಕ್ಕೂ ಅಧಿಕ ಮಕ್ಕಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮುಂಗಾರು ಮಳೆ ಧಾರಾಕಾರವಾಗಿಸುರಿಯುತ್ತಿದೆ. ವಾಡಿಕೆ ಪ್ರಮಾಣಕ್ಕಿಂತ ಶೇ 90ಕ್ಕಿಂತ ಹೆಚ್ಚು ಸುರಿದಿರುವ ಮಳೆ ಕೊಂಚ ಬಿಡುವು ನೀಡಿ ಸೂರ್ಯನ ದರ್ಶನ ಮಾಡಿಸಿ, ಮತ್ತೆ ಆರ್ಭಟಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗವಾದ ಮೂಡಿಗೆರೆಯಲ್ಲಿ ಮಳೆಗಾಲದಲ್ಲಿ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿರುವ ಜ್ವರ ಪೋಷಕರನ್ನ ಕಂಗಾಲು ಮಾಡಿದೆ.

ಮೂಡಿಗೆರೆ ತಾಲೂಕಿನಲ್ಲಿ ಮಕ್ಕಳಲ್ಲಿ ಹೆಚ್ಚಾಗಿ ಜ್ವರ ಕಾಣಿಸಿಕೊಳ್ಳುತ್ತಿದ್ದು. ಜ್ವರಕ್ಕೆ ಮೂವರು ಮಕ್ಕಳು ಮೃತಪ್ಪಟಿದ್ದಾರೆ. ಚಿಕ್ಕಮಗಳೂರು ಹಾಸನ , ಶಿವಮೊಗ್ಗ ಆಸ್ಪತ್ರೆಗಳ ಐಸಿಯುನಲ್ಲಿ 16ಕ್ಕೂ ಹೆಚ್ಚು ಮಕ್ಕಳು ದಾಖಲಾಗಿದ್ದರೇ, ಸಾವಿರಾರು ಮಕ್ಕಳಲ್ಲಿ ಜ್ವರದ ಲಕ್ಷಣ ಕಾಣಿಸುತ್ತಿದೆ.

ಮಳೆಗಾಲದಲ್ಲಿ ಜ್ವರ, ಶೀತ, ಕೆಮ್ಮಿನ ಲಕ್ಷಣಗಳು ಕಾಣಿಸಿಕೊಳ್ಳುವುದು ಸಹಜ. ಆದರೆ, ಈ ವರ್ಷ ತೀವ್ರ ಸ್ವರೂಪದಲ್ಲಿ ಅದರಲ್ಲೂ 12 ವರ್ಷದ ಮಕ್ಕಳಲ್ಲಿ ಹೆಚ್ಚು ಜ್ವರ ಕಾಣಿಸಿಕೊಂಡು ಆತಂಕ ಸೃಷ್ಟಿ ಮಾಡಿದೆ. ಮೂಡಿಗೆರೆ ತಾಲೂಕಿನ ಹೆಸ್ಗಲ್ ಗ್ರಾಮದಲ್ಲಿ 11 ವರ್ಷದ ಬಾಲಕಿ ಪ್ರೇರಣಾ, 4 ವರ್ಷದ ಬಾಲಕಿ ಸಾರ ತೀವ್ರ ಜ್ವರಕ್ಕೆ ಬಲಿಯಾಗಿದ್ದಾರೆ. ಇನ್ನು ನಂದೀಪುರ ಗ್ರಾಮದ ಸುನೀಲ್ ಮತ್ತು ಸುಮತಿ ದಂಪತಿಯ 8 ತಿಂಗಳ ಮಗು ಕೂಡ ಜ್ವರದಿಂದ ಸಾವನ್ನಪ್ಪಿದೆ.

ಇದನ್ನೂ ಓದಿ: ಮೂರು ದಿನದಲ್ಲಿ 35ಕ್ಕೂ ಹೆಚ್ಚು ಜನರ ಮೇಲೆ ಬೀದಿ ನಾಯಿಗಳ ದಾಳಿ

ಮೊದಲು ಶೀತ, ಅಲ್ಪ ಜ್ವರ, ಕೆಮ್ಮು ಕಾಣಿಸಿಕೊಂಡು ಮೂರು ನಾಲ್ಕು ದಿನದಲ್ಲಿ ಜ್ವರದ ಸ್ವರೂಪ ಬದಲಾಗಿ , ಮಕ್ಕಳನ್ನ ಅಸ್ವಸ್ಥ ಮಾಡುತ್ತಿದ್ದು ಪೋಷಕರಲ್ಲಿ ಸಾಂಕ್ರಾಮಿಕ ರೋಗದ ಆತಂಕ ಆರಂಭವಾಗಿದೆ. ಈ ಬಗ್ಗೆ ಜಿಲ್ಲಾ ಆರೋಗ್ಯ ಅಧಿಕಾರಿ ಅಶ್ವಥ್ ಬಾಬು ಅವರ ಸೂಚನೆ ಮೇರೆಗೆ ಮೂಡಿಗೆರೆ ತಾಲೂಕು ಆರೋಗ್ಯ ಅಧಿಕಾರಿ ಜ್ವರದಿಂದ ಸಾವನ್ನಪ್ಪಿದ ಮಕ್ಕಳು, ಸೇರಿದಂತೆ ಜ್ವರದಿಂದ ಬಳಲುತ್ತಿರುವ ಮಕ್ಕಳ ಬಗ್ಗೆ ಮಾಹಿತಿ ಸಂಗ್ರಹಿಸಲು ತಂಡ ರಚನೆ ಮಾಡಿದ್ದಾರೆ.

ಯಾವುದೇ ಸಾಂಕ್ರಾಮಿಕ ರೋಗ ಕಾಣಿಸಿಕೊಳ್ಳದೆ ಇದ್ದರೂ ಮಕ್ಕಳು ಜ್ವರಕ್ಕೆ ಬಲಿಯಾಗಿರುವುದು ಮೂಡಿಗೆರೆ ತಾಲೂಕಿನಲ್ಲಿ ಆತಂಕ ಸೃಷ್ಟಿ ಮಾಡಿದೆ. ಮಕ್ಕಳಲ್ಲಿ ಕಾಣಿಸಿಕೊಂಡ ಜ್ವರದ ಬಗ್ಗೆ ಅರೋಗ್ಯ ಇಲಾಖೆ ತನಿಖೆ ನಡೆಸುವಂತೆ ಮೂಡಿಗೆರೆ ಜನತೆ ಆಗ್ರಹಿಸಿದ್ದಾರೆ.

ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:21 pm, Fri, 8 August 25

Follow Us
Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?