AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ವರಕ್ಕೆ ಒಂದೇ ಗ್ರಾಮದ 3 ಮಕ್ಕಳು ಸಾವು, 20ಕ್ಕೂ ಅಧಿಕ ಮಕ್ಕಳಿಗೆ ಐಸಿಯುನಲ್ಲಿ ಚಿಕಿತ್ಸೆ

ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನಲ್ಲಿ ಮಕ್ಕಳಲ್ಲಿ ತೀವ್ರ ಜ್ವರ ಹೆಚ್ಚಾಗುತ್ತಿದ್ದು, ಮೂವರು ಮಕ್ಕಳು ಮೃತಪಟ್ಟಿದ್ದಾರೆ. ಇದರಿಂದ ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. 20ಕ್ಕೂ ಹೆಚ್ಚು ಮಕ್ಕಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಳೆಗಾಲದಲ್ಲಿ ಜ್ವರ ಸಾಮಾನ್ಯವಾಗಿದ್ದರೂ, ಈ ಬಾರಿ ತೀವ್ರ ಸ್ವರೂಪದಲ್ಲಿದೆ. ಆರೋಗ್ಯ ಇಲಾಖೆ ತನಿಖೆ ನಡೆಸುತ್ತಿದೆ.

ಜ್ವರಕ್ಕೆ ಒಂದೇ ಗ್ರಾಮದ 3 ಮಕ್ಕಳು ಸಾವು, 20ಕ್ಕೂ ಅಧಿಕ ಮಕ್ಕಳಿಗೆ ಐಸಿಯುನಲ್ಲಿ ಚಿಕಿತ್ಸೆ
ಜ್ವರದಿಂದ ಮೃತರಾದ ಮಕ್ಕಳು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Aug 13, 2025 | 6:21 PM

Share

ಚಿಕ್ಕಮಗಳೂರು, ಆಗಸ್ಟ್​ 08: ಚಿಕ್ಕಮಗಳೂರಿನ (Chikkamagaluru) ಮೂಡಿಗೆರೆ ತಾಲೂಕಿನಲ್ಲಿ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿರುವ ಜ್ವರ (Fever) ಆತಂಕ ಮೂಡಿಸಿದೆ. ಒಂದೇ ಊರಿನ ಇಬ್ಬರು ಮಕ್ಕಳು ಸೇರಿದಂತೆ 8 ತಿಂಗಳ ಶಿಶು ಜ್ವರಕ್ಕೆ ಬಲಿಯಾಗಿದೆ. 20 ಕ್ಕೂ ಅಧಿಕ ಮಕ್ಕಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮುಂಗಾರು ಮಳೆ ಧಾರಾಕಾರವಾಗಿಸುರಿಯುತ್ತಿದೆ. ವಾಡಿಕೆ ಪ್ರಮಾಣಕ್ಕಿಂತ ಶೇ 90ಕ್ಕಿಂತ ಹೆಚ್ಚು ಸುರಿದಿರುವ ಮಳೆ ಕೊಂಚ ಬಿಡುವು ನೀಡಿ ಸೂರ್ಯನ ದರ್ಶನ ಮಾಡಿಸಿ, ಮತ್ತೆ ಆರ್ಭಟಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗವಾದ ಮೂಡಿಗೆರೆಯಲ್ಲಿ ಮಳೆಗಾಲದಲ್ಲಿ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿರುವ ಜ್ವರ ಪೋಷಕರನ್ನ ಕಂಗಾಲು ಮಾಡಿದೆ.

ಮೂಡಿಗೆರೆ ತಾಲೂಕಿನಲ್ಲಿ ಮಕ್ಕಳಲ್ಲಿ ಹೆಚ್ಚಾಗಿ ಜ್ವರ ಕಾಣಿಸಿಕೊಳ್ಳುತ್ತಿದ್ದು. ಜ್ವರಕ್ಕೆ ಮೂವರು ಮಕ್ಕಳು ಮೃತಪ್ಪಟಿದ್ದಾರೆ. ಚಿಕ್ಕಮಗಳೂರು ಹಾಸನ , ಶಿವಮೊಗ್ಗ ಆಸ್ಪತ್ರೆಗಳ ಐಸಿಯುನಲ್ಲಿ 16ಕ್ಕೂ ಹೆಚ್ಚು ಮಕ್ಕಳು ದಾಖಲಾಗಿದ್ದರೇ, ಸಾವಿರಾರು ಮಕ್ಕಳಲ್ಲಿ ಜ್ವರದ ಲಕ್ಷಣ ಕಾಣಿಸುತ್ತಿದೆ.

ಮಳೆಗಾಲದಲ್ಲಿ ಜ್ವರ, ಶೀತ, ಕೆಮ್ಮಿನ ಲಕ್ಷಣಗಳು ಕಾಣಿಸಿಕೊಳ್ಳುವುದು ಸಹಜ. ಆದರೆ, ಈ ವರ್ಷ ತೀವ್ರ ಸ್ವರೂಪದಲ್ಲಿ ಅದರಲ್ಲೂ 12 ವರ್ಷದ ಮಕ್ಕಳಲ್ಲಿ ಹೆಚ್ಚು ಜ್ವರ ಕಾಣಿಸಿಕೊಂಡು ಆತಂಕ ಸೃಷ್ಟಿ ಮಾಡಿದೆ. ಮೂಡಿಗೆರೆ ತಾಲೂಕಿನ ಹೆಸ್ಗಲ್ ಗ್ರಾಮದಲ್ಲಿ 11 ವರ್ಷದ ಬಾಲಕಿ ಪ್ರೇರಣಾ, 4 ವರ್ಷದ ಬಾಲಕಿ ಸಾರ ತೀವ್ರ ಜ್ವರಕ್ಕೆ ಬಲಿಯಾಗಿದ್ದಾರೆ. ಇನ್ನು ನಂದೀಪುರ ಗ್ರಾಮದ ಸುನೀಲ್ ಮತ್ತು ಸುಮತಿ ದಂಪತಿಯ 8 ತಿಂಗಳ ಮಗು ಕೂಡ ಜ್ವರದಿಂದ ಸಾವನ್ನಪ್ಪಿದೆ.

ಇದನ್ನೂ ಓದಿ: ಮೂರು ದಿನದಲ್ಲಿ 35ಕ್ಕೂ ಹೆಚ್ಚು ಜನರ ಮೇಲೆ ಬೀದಿ ನಾಯಿಗಳ ದಾಳಿ

ಮೊದಲು ಶೀತ, ಅಲ್ಪ ಜ್ವರ, ಕೆಮ್ಮು ಕಾಣಿಸಿಕೊಂಡು ಮೂರು ನಾಲ್ಕು ದಿನದಲ್ಲಿ ಜ್ವರದ ಸ್ವರೂಪ ಬದಲಾಗಿ , ಮಕ್ಕಳನ್ನ ಅಸ್ವಸ್ಥ ಮಾಡುತ್ತಿದ್ದು ಪೋಷಕರಲ್ಲಿ ಸಾಂಕ್ರಾಮಿಕ ರೋಗದ ಆತಂಕ ಆರಂಭವಾಗಿದೆ. ಈ ಬಗ್ಗೆ ಜಿಲ್ಲಾ ಆರೋಗ್ಯ ಅಧಿಕಾರಿ ಅಶ್ವಥ್ ಬಾಬು ಅವರ ಸೂಚನೆ ಮೇರೆಗೆ ಮೂಡಿಗೆರೆ ತಾಲೂಕು ಆರೋಗ್ಯ ಅಧಿಕಾರಿ ಜ್ವರದಿಂದ ಸಾವನ್ನಪ್ಪಿದ ಮಕ್ಕಳು, ಸೇರಿದಂತೆ ಜ್ವರದಿಂದ ಬಳಲುತ್ತಿರುವ ಮಕ್ಕಳ ಬಗ್ಗೆ ಮಾಹಿತಿ ಸಂಗ್ರಹಿಸಲು ತಂಡ ರಚನೆ ಮಾಡಿದ್ದಾರೆ.

ಯಾವುದೇ ಸಾಂಕ್ರಾಮಿಕ ರೋಗ ಕಾಣಿಸಿಕೊಳ್ಳದೆ ಇದ್ದರೂ ಮಕ್ಕಳು ಜ್ವರಕ್ಕೆ ಬಲಿಯಾಗಿರುವುದು ಮೂಡಿಗೆರೆ ತಾಲೂಕಿನಲ್ಲಿ ಆತಂಕ ಸೃಷ್ಟಿ ಮಾಡಿದೆ. ಮಕ್ಕಳಲ್ಲಿ ಕಾಣಿಸಿಕೊಂಡ ಜ್ವರದ ಬಗ್ಗೆ ಅರೋಗ್ಯ ಇಲಾಖೆ ತನಿಖೆ ನಡೆಸುವಂತೆ ಮೂಡಿಗೆರೆ ಜನತೆ ಆಗ್ರಹಿಸಿದ್ದಾರೆ.

ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:21 pm, Fri, 8 August 25

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ