AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಅಕ್ರಮ ಭೂ ಮಂಜೂರಾತಿದಾರರಿಗೆ ನೋಟೀಸ್, ಶುರುವಾಯ್ತು ನಡುಕ

ರಾಜ್ಯ ಸರ್ಕಾರದ ಸೂಚನೆ ಮೇರೆಗೆ 13 ತಹಶಿಲ್ದಾರರ ನೇತೃತ್ವದ ತಂಡ‌ ಕಡೂರು ,ಮೂಡಿಗೆರೆ ತಾಲೂಕಿನಲ್ಲಿ ನಡೆದ ಕಂದಾಯ ಭೂಮಿ ಅಕ್ರಮದ ಕುರಿತು ವರದಿ ಸಿದ್ದ ಮಾಡಿ ಸರ್ಕಾರಕ್ಕೆ ನೀಡಿದ್ದು ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳು ಮತ್ತು ಭಾಗಿಯಾದವರಿಗೆ ಜೈಲು ‌ಸೇರುವ ಆತಂಕ ಎದುರಾಗಿದೆ.

ಚಿಕ್ಕಮಗಳೂರು: ಅಕ್ರಮ ಭೂ ಮಂಜೂರಾತಿದಾರರಿಗೆ ನೋಟೀಸ್, ಶುರುವಾಯ್ತು ನಡುಕ
ಚಿಕ್ಕಮಗಳೂರು ತಾಲೂಕು ಪಂಚಾಯಿತಿ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: ವಿವೇಕ ಬಿರಾದಾರ|

Updated on: Sep 28, 2024 | 11:03 AM

Share

ಚಿಕ್ಕಮಗಳೂರು, ಸೆಪ್ಟೆಂಬರ್​ 28: ಚಿಕ್ಕಮಗಳೂರಿನ (Chikkamagaluru) ಮೂಡಿಗೆರೆ (Mudigere) ಹಾಗೂ ಕಡೂರು (Kadur) ತಾಲೂಕಿನಲ್ಲಿ 2023ರಲ್ಲಿ ನಡೆದಿದ್ದ ಅಕ್ರಮ ಭೂ ಮಂಜೂರಾತಿ ಪ್ರಕರಣದ ಉರುಳು, ಇದೀಗ ಅಕ್ರಮವಾಗಿ ಭೂಮಿ ಮಂಜೂರು ಮಾಡಿಸಿಕೊಂಡಿದ್ದವರ ಕೊರಳಿಗೆ ಸುತ್ತಿಕೊಂಡಿದೆ. ರಾಜ್ಯದಲ್ಲೇ ನಡೆದಿದೆ ಎನ್ನಲಾಗಿದ್ದ ಅತಿದೊಡ್ಡ ಭೂ ಹಗರಣ ಇದಾಗಿದ್ದು, ಪ್ರರಕಣಕ್ಕೆ ಸಂಬಂಧಿಸಿದಂತೆ 13 ಮಂದಿ ತಹಸೀಲ್ದಾರ್ ಒಳಗೊಂಡ ತಂಡ ತನಿಖೆ ನಡೆಸಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ.

ರಾಜ್ಯದಲ್ಲಿ ನಡೆದ ಅತಿ ದೊಡ್ಡ ಕಂದಾಯ ಭೂಮಿ ಅಕ್ರಮ ಸಂಬಂಧ ರಾಜ್ಯ ಸರ್ಕಾರ ನೇಮಕ ಮಾಡಿದ್ದ 13 ತಹಶಿಲ್ದಾರರ ತನಿಖಾ ತಂಡ ಸರ್ಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ಅಕ್ರಮ ನಡೆದಿರುವುದು ದೃಢಪಟ್ಟಿದೆ. ಹೀಗಾಗಿ ಇದೀಗ ಪ್ರತಿಯೊಂದು ಪ್ರಕರಣಗಳನ್ನು ಎಸಿ ನ್ಯಾಯಾಲಯದಲ್ಲಿ ವಿಚಾರಣೆಗೊಳಪಡಿಸಲು ತೀರ್ಮಾನಿಲಾಗಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಹಾಗೂ ತರೀಕೆರೆ ಉಪವಿಭಾಗಾಧಿ ಕಚೇರಿಯಿಂದ ಅಕ್ರಮ ಭೂ ಮಂಜೂರಾತಿದಾರರಿಗೆ ನೋಟೀಸ್ ಜಾರಿಗೊಳಿಸಲಾಗುತ್ತಿದೆ. ಈ ಭೂ ಅಕ್ರಮ ಪ್ರಕರಣದಲ್ಲಿ ಸಾವಿರಾರು ಮಂದಿ ಅಕ್ರಮವಾಗಿ ಭೂಮಿ ಮಂಜೂರು ಮಾಡಿಸಿಕೊಂಡಿರುವುದು ದೃಢಪಟ್ಟಿದೆ.

ಯಾವುದೇ ದಾಖಲೆಗಳಿಲ್ಲದಿದ್ದರೂ ಅಧಿಕಾರಿಗಳ ಸಹಾಯ ಪಡೆದು ತಮ್ಮ ಪ್ರಭಾವ ಬಳಸಿಕೊಂಡು ಭೂಮಿ ಮಂಜೂರು ಮಾಡಿಸಿಕೊಂಡಿರುವುದು ತನಿಖಾ ವರದಿಯಲ್ಲೂ ಬೆಳಕಿಗೆ ಬಂದಿದೆ. ಜೊತೆಗೆ ಈ ಪ್ರರಕಣದಲ್ಲಿ ಹಿಂದಿನ ಶಾಸಕರು, ಸಚಿವರ ಹೆಸರುಗಳು ಕೇಳಿಬಂದಿವೆಯಾದರೂ ಇದನ್ನು ವರದಿಯಲ್ಲಿ ಉಲ್ಲೇಖಿಸಿಲ್ಲ ಎಂದು ಹೇಳಲಾಗುತ್ತಿದೆ. ಆದರೆ ಅಕ್ರಮ ಭೂ ಮಂಜೂರಾತಿ ನಡೆದ ಅವಧಿಯಲ್ಲಿದ್ದ ತಹಸೀಲ್ದಾರ್ ಹಾಗೂ ಇತರೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಹೆಸರನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಚಿಕ್ಕಮಗಳೂರು ಅರಣ್ಯ ವಲಯದ ಹೋಂಸ್ಟೇ, ರೆಸಾರ್ಟ್​​ಗಳಿಗೆ ಅರಣ್ಯ ಇಲಾಖೆ ನೋಟಿಸ್​

ಕಡೂರು ಹಾಗೂ ಮೂಡಿಗೆರೆ ತಾಲೂಕಿನಲ್ಲಿ 3021 ಕ್ಕೂ ಹೆಚ್ಚು ಪ್ರಕರಣಗಳಲ್ಲಿ 10,598 ಎಕರೆ ಭೂಮಿ ಅಕ್ರಮವಾಗಿ ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಅಕ್ರಮ ಭೂ ಮಂಜೂರಾತಿದಾರರಿಗೆ ಈಗಾಗಲೇ ನೋಟೀಸ್ ಜಾರಿ ಮಾಡಲಾಗುತ್ತಿದೆ. ಚಿಕ್ಕಮಗಳೂರು ಉಪವಿಭಾಗಾಧಿಕಾರಿ ಕಚೇರಿಯಿಂದ ಮೂಡಿಗೆರೆ ತಾಲೂಕಿನ ಭೂ ಅಕ್ರಮಕ್ಕೆ ಸಂಬಂಧಿಸಿದಂತೆ 778 ಪ್ರಕರಣಗಳಲ್ಲಿ 396 ಜನರಿಗೆ ಈಗಾಗಲೇ ನೋಟೀಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

ಇನ್ನು ತರೀಕೆರೆ ಉಪವಿಭಾಗಾಧಿಕಾರಿ ಕಚೇರಿಯಿಂದ ಕಡೂರು ತಾಲೂಕಿನ ಭೂ ಅಕ್ರಮಕ್ಕೆ ಸಂಬಂಧಿಸಿದಂರೆ 2243 ಪ್ರಕರಣಗಳಲ್ಲಿ 50 ಜನರಿಗೆ ಈಗಾಗಲೇ ನೋಟೀಸ್ ಜಾರಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಹಂತಹಂತವಾಗಿ ಅಕ್ರಮ ಭೂ ಮಂಜೂರಾತಿದಾರರಿಗೆ ನೋಟೀಸ್ ನೀಡಲಾಗುತ್ತಿದೆ. ಪ್ರತಿದಿನ 20 ರಿಂದ 30 ಪ್ರಕರಣಗಳಿಗೆ ಸಂಬಂಧಿಸಿದಂತೆ ಎಸಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಲಾಗುತ್ತಿದೆ. ಹೀಗಾಗಿ ಅಕ್ರಮವಾಗಿ ಭೂಮಿ ಮಂಜೂರು ಮಾಡಿಸಿಕೊಂಡು ಖುಷಿಯಾಗಿದ್ದವರಿಗೆ ಇದೀಗ ನಡುಕ ಆರಂಭವಾಗಿದೆ. ಈ ಹಿಂದೆ ಕಡೂರು ತಹಶಿಲ್ದಾರ್ ಆಗಿದ್ದ ಉಮೇಶ್ ವಿರುದ್ಧ ಪ್ರಕರಣ ‌ದಾಖಲಿಸಿ ಜೈಲಿಗೆ ಕಳಿಸಲಾಗಿತ್ತು.

ರಾಜ್ಯ ಸರ್ಕಾರದ ಸೂಚನೆ ಮೇರೆಗೆ 13 ತಹಶಿಲ್ದಾರರ ನೇತೃತ್ವದ ತಂಡ‌ ಕಡೂರು ,ಮೂಡಿಗೆರೆ ತಾಲೂಕಿನಲ್ಲಿ ನಡೆದ ಕಂದಾಯ ಭೂಮಿ ಅಕ್ರಮದ ಕುರಿತು ವರದಿ ಸಿದ್ದ ಮಾಡಿ ಸರ್ಕಾರಕ್ಕೆ ನೀಡಿದ್ದು ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳು ಮತ್ತು ಭಾಗಿಯಾದವರಿಗೆ ಜೈಲು ‌ಸೇರುವ ಆತಂಕ ಎದುರಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?