AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು ವಕೀಲ-ಪೊಲೀಸರ ಜಟಾಪಟಿ: ವಕೀಲರ ವಿರುದ್ಧ 4 ಪ್ರತ್ಯೇಕ ಪ್ರಕರಣ ದಾಖಲು

ಚಿಕ್ಕಮಗಳೂರಿನಲ್ಲಿ ವಕೀಲರು ಠಾಣೆಯಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಹಲ್ಲೆ ಖಂಡಿಸಿ ಶನಿವಾರ ಮಧ್ಯರಾತ್ರಿವರೆಗೂ ನಗರದ ಹನುಮಂತಪ್ಪ ಸರ್ಕಲ್​​ನಲ್ಲಿ ಪೊಲೀಸರು ಮತ್ತು ಅವರ ಕುಟುಂಬಸ್ಥರು ಪ್ರತಿಭಟನೆ ನಡೆಸಿದರು. ಹಲ್ಲೆ ನಡೆಸಿದವರ ವಿರುದ್ಧ ಎಫ್​ಐಆರ್​ ದಾಖಲಿಸುವಂತೆ ಒತ್ತಾಯಿಸಿದರು.

ಚಿಕ್ಕಮಗಳೂರು ವಕೀಲ-ಪೊಲೀಸರ ಜಟಾಪಟಿ: ವಕೀಲರ ವಿರುದ್ಧ 4 ಪ್ರತ್ಯೇಕ ಪ್ರಕರಣ ದಾಖಲು
ಪೊಲೀಸರ ಪ್ರತಿಭಟನೆ (ಎಡಚಿತ್ರ) ಎಫ್​ಐಆರ್​ (ಬಲಚಿತ್ರ)
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ವಿವೇಕ ಬಿರಾದಾರ

Updated on: Dec 03, 2023 | 7:59 AM

ಚಿಕ್ಕಮಗಳೂರು ಡಿ.03: ಚಿಕ್ಕಮಗಳೂರು (Chikkamagaluru) ಜಿಲ್ಲೆಯಲ್ಲಿ ವಕೀಲರು (Lawyers) ಮತ್ತು ಪೊಲೀಸರ (Police) ನಡುವಿನ ಜಟಾಪಟಿ ತಾರಕಕ್ಕೆ ಏರಿದೆ. ಹೆಲ್ಮೆಟ್ (Helmet)​ ಹಾಕದ ವಿಚಾರವಾಗಿ ವಕೀಲ ಪ್ರೀತಮ್​ ಎಂಬುವರ ಮೇಲೆ ಶುಕ್ರವಾರ ಪೊಲೀಸರು ಹಲ್ಲೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ವಕೀಲರು ಪೊಲೀಸ್​ ಠಾಣೆಯಲ್ಲಿ ಪ್ರತಿಭಟನೆ ಮಾಡಿದ್ದರು. ಹೀಗಾಗಿ ಠಾಣೆಯಲ್ಲಿ ಪ್ರತಿಭಟನೆ ನಡೆಸಿದ್ದ ವಕೀಲರ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ನಾಲ್ಕು ಪ್ರತ್ಯೇಕ ಎಫ್​ಐಆರ್​ ದಾಖಲಾಗಿವೆ.

ವಕೀಲರು ಠಾಣೆಯಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಹಲ್ಲೆ ಖಂಡಿಸಿ ಶನಿವಾರ ಮಧ್ಯರಾತ್ರಿವರೆಗೂ ನಗರದ ಹನುಮಂತಪ್ಪ ಸರ್ಕಲ್​​ನಲ್ಲಿ ಪೊಲೀಸರು ಮತ್ತು ಅವರ ಕುಟುಂಬಸ್ಥರು ಪ್ರತಿಭಟನೆ ನಡೆಸಿದರು. ಹಲ್ಲೆ ನಡೆಸಿದವರ ವಿರುದ್ಧ ಎಫ್​ಐಆರ್​ ದಾಖಲಿಸುವಂತೆ ಒತ್ತಾಯಿಸಿದರು. ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಚಿಕ್ಕಮಗಳೂರು ಜಿಲ್ಲಾ ಬಾರ್ ಅಸೋಸಿಯೇಷನ್ ಅಧ್ಯಕ್ಷ ಸುಧಾಕರ್, ವಕೀಲ ಪ್ರೀತಮ್ ಸೇರಿದಂತೆ 15 ವಕೀಲರ ವಿರುದ್ಧ ಸೆಕ್ಷನ್​ 503, 406, 353, 149 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ವಕೀಲನ ಮೇಲೆ ಹಲ್ಲೆ; PSI ಸೇರಿದಂತೆ 6 ಪೊಲೀಸ್ ಸಿಬ್ಬಂದಿಗಳ ಬಂಧನಕ್ಕೆ ವಿಶೇಷ ತಂಡ ರಚನೆ

ಈ ಪ್ರತಿಭಟನೆಯಲ್ಲಿ ಪೋಲಿಸ್ ಸಂಘ ಸ್ಥಾಪನೆಯ ಕೂಗು ಕೇಳಿ ಬಂದಿದೆ. ಪೊಲೀಸ್ ಸಿಬ್ಬಂದಿಗಳು ನಮಗೂ ಸಂಘ ಬೇಕು ಎಂದು ಚರ್ಚೆ ನಡೆಸಿದರು. ಪೋಲಿಸ್ ಸಂಘ ಸ್ಥಾಪನೆಗೆ ಈ ಹಿಂದೆ ಹಿರಿಯ ಅಧಿಕಾರಿಗಳಿಂದ ಆಕ್ಷೇಪ ವ್ಯಕ್ತವಾಗಿತ್ತು. ನಿನ್ನೆ (ಡಿ.02)ರ ರಾತ್ರಿ ನಡೆದ ಪ್ರತಿಭಟನೆಯಲ್ಲಿ ಪೊಲೀಸ್ ಸಂಘ ಸ್ಥಾಪನೆಗೆ ಸಿದ್ದತೆ ನಡೆದಿದ್ದು, ಸಂಘವನ್ನು ರಿಜಿಸ್ಟರ್ ಮಾಡಿಸುವ ಬಗ್ಗೆ ಚರ್ಚೆ ನಡೆದಿದೆ. ಸೋಮವಾರ ರಿಜಿಸ್ಟರ್ ಮಾಡಿಸುವ ಸಾಧ್ಯತೆ ಇದೆ.

ಈ ವೇಳೆ ಸ್ಥಳಕ್ಕೆ ಆಗಮಿಸಿದ ಪಶ್ಚಿಮ ವಲಯದ ಐಜಿಪಿ ಚಂದ್ರಗುಪ್ತ ಅವರಿಗೆ ಪೊಲೀಸ್ ಇಲಾಖೆಗೆ ಸಂಘ ಯಾಕಿಲ್ಲ ಎಂದು ಪೊಲೀಸರ ಕುಟುಂಬಸ್ಥರು ಪ್ರಶ್ನೆ ಮಾಡಿದರು. ಆಗ ಐಜಿಪಿ ಚಂದ್ರಗುಪ್ತ ಅವರು ಇದು ನಿನಗೆ ಅರ್ಥವಾಗಲ್ಲವೆಂದು ಹೇಳಿದರು.

ಎಫ್​ಐಆರ್ ದಾಖಲಾಗಿರುವ 6 ಸಿಬ್ಬಂದಿಯನ್ನು ಬಂಧಿಸಬಾರದು. ಪೊಲೀಸ್ ಸಿಬ್ಬಂದಿಯ ಅಮಾನತು ಆದೇಶ ಹಿಂಪಡೆಯಬೇಕು ಎಂದು ಡಿ.5ರವರೆಗೂ ಇಲಾಖೆಗೆ ಗಡುವು ನೀಡಿ ಪೊಲೀಸರು ಧರಣಿ ಹಿಂಪಡೆದರು. ಇನ್ನು ವಕೀಲರ ಮೇಲೆ ಹಲ್ಲೆ ಪ್ರಕರಣ ಸಂಬಂಧ ಬಂಧಿತರಾಗಿದ್ದ ಪೊಲೀಸ್ ಕಾನ್ಸ್‌ಟೇಬಲ್‌ ಗುರುಪ್ರಸಾದ್‌ ಅವರನ್ನು ಡಿವೈಎಸ್​ಪಿ ಶೈಲೇಂದ್ರ ಕುಮಾರ್ ಅವರು ವಿಚಾರಣೆ ನಡೆಸಿ ಬಿಡುಗಡೆ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ