AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಕಿಲ್ಲರ್ ಒಂಟಿ ಸಲಗ ಆಪರೇಷನ್ ವೇಳೆ ಮತ್ತೊಂದು ಒಂಟಿ ಸಲಗ ಸೆರೆ

ಎರಡು ತಿಂಗಳ ಅಂತರಲ್ಲಿ ಕಾಡಾನೆ ದಾಳಿಗೆ ಎರಡು ಸಾವು ಸಂಭವಿಸಿದೆ. ಹೀಗಾಗಿ ಇಬ್ಬರನ್ನ ಬಲಿ ಪಡೆದಿದ್ದ ಒಂಟಿ ಸಲಗದ ಸೆರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದು ಚಿಕ್ಕಮಗಳೂರು ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯಚರಣೆ ನಡೆಯುತ್ತಿದೆ. ಕಿಲ್ಲರ್ ಕಾಡಾನೆ ಬದಲಿಗೆ ಮತ್ತೊಂದು ಕಾಡಾನೆ ಸೆರೆಯಾಗಿದೆ.

ಚಿಕ್ಕಮಗಳೂರು: ಕಿಲ್ಲರ್ ಒಂಟಿ ಸಲಗ ಆಪರೇಷನ್ ವೇಳೆ ಮತ್ತೊಂದು ಒಂಟಿ ಸಲಗ ಸೆರೆ
ಕಿಲ್ಲರ್ ಒಂಟಿ ಸಲಗ ಆಪರೇಷನ್ ವೇಳೆ ಮತ್ತೊಂದು ಒಂಟಿ ಸಲಗ ಸೆರೆ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: ಆಯೇಷಾ ಬಾನು|

Updated on: Nov 16, 2023 | 9:51 AM

Share

ಚಿಕ್ಕಮಗಳೂರು, ನ.16: ಮೂಡಿಗೆರೆ ತಾಲೂಕಿನ ಕುಂದೂರು ಅರಣ್ಯ ವ್ಯಾಪ್ತಿಯಲ್ಲಿ ಒಂಟಿ ಸಲಗ (Elephant) ಸೆರೆಯಾಗಿದೆ. ಅರವಳಿಕೆ‌ ಮದ್ದು ನೀಡಿ ಕಾಡಾನೆಯನ್ನು ಸೆರೆ ಹಿಡಿಯಲಾಗಿದೆ. ಕಿಲ್ಲರ್ ಒಂಟಿ ಸಲಗ ಹಿಡಿಯಲು ಕಾರ್ಯಾಚರಣೆ ನಡೆಸುತ್ತಿದ್ದ ಟೀಂಗೆ ಮತ್ತೊಂದು ಒಂಟಿ ಸಲಗ ಸಿಕ್ಕಿಬಿದ್ದಿದೆ. ಸದ್ಯ ಇಬ್ಬರನ್ನ ಬಲಿ ಪಡೆದಿದ್ದ ಒಂಟಿ ಸಲಗ ಸೆರೆಗೆ ಕಾರ್ಯಾಚರಣೆ ಮುಂದುವರಿದಿದೆ (Operation Killer Elephant). 7 ಆನೆಗಳ ಬಳಸಿ ಆಪರೇಷನ್ ಕಿಲ್ಲರ್ ಒಂಟಿ ಸಲಗ ಕಾರ್ಯಾಚರಣೆ ನಡೆಯುತ್ತಿದೆ.

ವಾರದ ಹಿಂದೆ ಹೆಡದಾಳು ಗ್ರಾಮದಲ್ಲಿ ಕಾರ್ಮಿಕ ಮಹಿಳೆ ಮೀನಾ(45)ಳನ್ನು ಆನೆ ತುಳಿದು ಕೊಂದು ಹಾಕಿತ್ತು. ಅರೆನೂರು ಗ್ರಾಮದಲ್ಲಿ ಕಿನ್ನಿ ಎಂಬ ವ್ಯಕ್ತಿಯನ್ನು ಬಲಿ ಪಡೆದಿತ್ತು. ಒಟ್ಟು ಎರಡು ತಿಂಗಳ ಅಂತರಲ್ಲಿ ಕಾಡಾನೆ ದಾಳಿಗೆ ಎರಡು ಸಾವು ಸಂಭವಿಸಿದೆ. ಹೀಗಾಗಿ ಇಬ್ಬರನ್ನ ಬಲಿ ಪಡೆದಿದ್ದ ಒಂಟಿ ಸಲಗದ ಸೆರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದು ಚಿಕ್ಕಮಗಳೂರು ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯಚರಣೆ ನಡೆಯುತ್ತಿದೆ. ಕಿಲ್ಲರ್ ಕಾಡಾನೆ ಬದಲಿಗೆ ಮತ್ತೊಂದು ಕಾಡಾನೆ ಸೆರೆಯಾಗಿದೆ. ಕುಂದೂರು ಅರಣ್ಯ ವ್ಯಾಪ್ತಿಯಲ್ಲಿ ಕಿಲ್ಲರ್ ಒಂಟಿ ಸಲಗಕ್ಕಾಗಿ ಆಪರೇಷನ್ ಮುಂದುವರೆದಿದೆ.

ಇದನ್ನೂ ಓದಿ: ಬೆಂಗಳೂರು: ಗೊಂಬೆ ಮಾಸ್ಕ್ ಧರಿಸಿ ಕಾರು, ಬೈಕ್​ಗಳ ಧ್ವಂಸಗೊಳಿಸಿದ ಆರು ಮಂದಿಯ ಬಂಧನ

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಗ್ರಾಮದಲ್ಲಿ ಕಳೆದ ಮೂರು ತಿಂಗಳಿನಿಂದ ದಾಂದಲೆ ಎಬ್ಬಿಸಿ ಇಬ್ಬರ ಸಾವಿಗೆ ಕಾರಣವಾಗಿ ಕೋಟ್ಯಾಂತರ ಮೌಲ್ಯದ ಕಾಫಿ ಬಾಳೆ ,ತೆಂಗು, ಅಡಿಕೆ ಬೆಳೆ ನಾಶ ಮಾಡಿದ್ದ ಭುವನೇಶ್ವರಿ ಗ್ಯಾಂಗಿನ 1 ಒಂಟಿಸಲಗ ಸೆರೆ, 6 ಕಾಡಾನೆಗಳ ಸ್ಥಳಾಂತರಕ್ಕೆ ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಚಿಕ್ಕಮಗಳೂರು ವಲಯ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಆದೇಶ ನೀಡಿದ್ದು ಕಾರ್ಯಚರಣೆಗಾಗಿ ಸಕ್ರೇಬೈಲು ಆನೆ ಶಿಬಿರದಿಂದ ಸೋಮಣ್ಣ, ಆಲೆ, ಬಹಾದ್ದೂರ್ ಆನೆಗಳು ಕಾರ್ಯಚರಣೆಗೆ ನಡೆಸುತ್ತಿವೆ. ಮತ್ತಾವರ ಗ್ರಾಮದಲ್ಲಿ 6 ಕಾಡಾನೆಗಳು ಹಿಂಡು ಬೀಡುಬಿಟ್ಟಿದ್ದು ರಾತ್ರಿ ಗ್ರಾಮಕ್ಕೆ ಎಂಟ್ರಿ ನೀಡಿ ಬೆಳೆ ನಾಶ ಮಾಡಿ ಬೆಳಗಾಗುತ್ತಿದ್ದಂತೆ ಕಾಡು ಸೇರುತ್ತಿವೆ. ಕಾರ್ಮಿಕ ಮಹಿಳೆಯನ್ನ ಹತ್ಯೆ ಮಾಡಿರುವ ಒಂಟಿ ಸಲಗ ಹತ್ಯೆ ಮಾಡಿದ ಸ್ಥಳದಿಂದ 50 ಕಿಮೀ ದೂರು ತೆರಳಿರುವ ಮಾಹಿತಿ ಇದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ