AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಕಾರ್ಯಕರ್ತರಿಂದ ಹಿಂದೂ ಮುಖಂಡ ಪ್ರವೀಣ್ ಖಾಂಡ್ಯ ಮೇಲೆ ಹಲ್ಲೆ ಆರೋಪ; ಆಸ್ಪತ್ರೆಗೆ ದಾಖಲು

ಲೋಕಸಭಾ ಚುನಾವಣೆ ಇಂದು(ಏ.26) ರಾಜ್ಯದ 14 ಕ್ಷೇತ್ರಗಳಲ್ಲಿ ಅದ್ದೂರಿಯಾಗಿ ನಡೆದಿದೆ. ಅದರಂತೆ ಚಿಕ್ಕಮಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ಬಿಜೆಪಿ(BJP) ಕಾರ್ಯಕರ್ತರ ಗುಂಪು ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಈ ವೇಳೆ ಹಿಂದೂ ಮುಖಂಡ ಪ್ರವೀಣ್ ಖಾಂಡ್ಯಗೆ ತಲೆ‌ ಮತ್ತು ಕೈಗೆ ಗಂಭೀರ ಗಾಯವಾಗಿದ್ದು, ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಿಜೆಪಿ ಕಾರ್ಯಕರ್ತರಿಂದ ಹಿಂದೂ ಮುಖಂಡ ಪ್ರವೀಣ್ ಖಾಂಡ್ಯ ಮೇಲೆ ಹಲ್ಲೆ ಆರೋಪ; ಆಸ್ಪತ್ರೆಗೆ ದಾಖಲು
ಹಿಂದೂ ಕಾರ್ಯಕರ್ತ ಪ್ರವೀಣ್ ಖಾಂಡ್ಯ ಮೇಲೆ ಹಲ್ಲೆ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Apr 26, 2024 | 7:26 PM

Share

ಚಿಕ್ಕಮಗಳೂರು, ಏ.26: ಹಿಂದೂ ಕಾರ್ಯಕರ್ತನ ಮೇಲೆ ಬಿಜೆಪಿ(BJP) ಕಾರ್ಯಕರ್ತರ ಗುಂಪು ಹಲ್ಲೆ ಮಾಡಿದ ಆರೋಪ ಚಿಕ್ಕಮಗಳೂರು ತಾಲೂಕಿನ ಉಜೈನಿ ಮತಗಟ್ಟೆ ಬಳಿ ಕೇಳಿಬಂದಿದೆ. ಮತಗಟ್ಟೆಗಳ ವೀಕ್ಷಕನಾಗಿ ತೆರಳಿದಾಗ ಹಿಂದೂ ಕಾರ್ಯಕರ್ತ ಪ್ರವೀಣ ಖಾಂಡ್ಯ(Praveen Khandya) ಮೇಲೆ ಏಕಾಏಕಿ ಗುಂಪೊಂದು ಹಲ್ಲೆ ಮಾಡಿದೆ. ಇದರಿಂದ ಪ್ರವೀಣ್ ಖಾಂಡ್ಯಗೆ ತಲೆ‌ ಮತ್ತು ಕೈಗೆ ಗಂಭೀರ ಗಾಯವಾಗಿದ್ದು, ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆಸ್ಪತ್ರೆ ಮುಂಭಾಗದಲ್ಲಿ ನೂರಾರು ಕಾರ್ಯಕರ್ತರು ಜಮಾವಣೆ

ಇನ್ನು ಪ್ರವೀಣ್, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದ. ಇದೀಗ ಆತನ ಮೇಲೆ ಏಕಾಎಕಿ ದಾಳಿ ಆಗಿದ್ದು, ಹಳೆಯ ದ್ವೇಷದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರೇ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆ ಮುಂಭಾಗದಲ್ಲಿ ನೂರಾರು ಹಿಂದೂ ಕಾರ್ಯಕರ್ತರು ಜಮಾವಣೆಯಾಗಿದ್ದಾರೆ. ಈ ಕುರಿತು ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಜೈಶ್ರೀರಾಮ ಹೇಳಿದ್ದಕ್ಕೆ ಹಲ್ಲೆ: ಘಟನೆ ಹೇಗಾಯ್ತು? ದೂರಿನಲ್ಲಿ ಘಟನೆ ಬಗ್ಗೆ ವಿವರಿಸಿದ ಹಲ್ಲೆಗೊಳಗಾದ ಯವಕ

ಚಿರತೆ ದಾಳಿ, ಓರ್ವ ವ್ಯಕ್ತಿ ಗಂಭೀರ

ಉತ್ತರ ಕನ್ನಡ: ಕುಮಟಾ ತಾಲೂಕಿನ ಬಾಡ ಗ್ರಾಮದಲ್ಲಿ ಓರ್ವ ವ್ಯಕ್ತಿ ಮೇಲೆ ಚಿರತೆ ದಾಳಿ ಮಾಡಿದ್ದು, ಮಹಾಬಲೇಶ್ವರ ನಾಯ್ಕ ಎಂಬುವವರಿಗೆ ಗಂಭೀರ ಗಾಯವಾಗಿದೆ. ಕೂಡಲೇ ಅವರನ್ನು ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಮನೆಯಿಂದ ಹೊರಗೆ ಬರದಂತೆ ಗ್ರಾಮ ಪಂಚಾಯತಿಯಿಂದ ಜನತೆಗೆ ಎಚ್ಚರಿಗೆ ನೀಡಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:21 pm, Fri, 26 April 24

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?