AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಇದೇ ಮೊದಲ ಬಾರಿಗೆ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಹುಣ್ಣಿಮೆ ಪೂಜೆ

ಪ್ರತಿ ಹುಣ್ಣುಮೆ ದಿನ ಭಜರಂಗದಳ, VHP ಕಾರ್ಯಕರ್ತರು ದತ್ತ ಪಾದುಕೆಗೆ ಪೂಜೆ ಸಲ್ಲಿಸುತ್ತಿದ್ದರು. ಈಗ ಇದೇ ಮೊದಲ ಬಾರಿಗೆ ಬಿಜೆಪಿ ಕಾರ್ಯಕರ್ತರು ಹುಣ್ಣಿಮೆ ಪೂಜೆ ನೆರವೇರಿಸಲಿದ್ದಾರೆ. ಹುಣ್ಣಿಮೆ ಪೂಜೆಯಂದು ದತ್ತ ಪಾದುಕೆ ದರ್ಶನ, ಪೂಜೆ ಸಲ್ಲಿಸಲು ಬಿಜೆಪಿ ಕಾರ್ಯಕರ್ತರು ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.

ಚಿಕ್ಕಮಗಳೂರು: ಇದೇ ಮೊದಲ ಬಾರಿಗೆ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಹುಣ್ಣಿಮೆ ಪೂಜೆ
ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Nov 27, 2023 | 9:19 AM

Share

ಚಿಕ್ಕಮಗಳೂರು, ನ.27: ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದಲ್ಲಿರುವ ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ (Baba Budangiri) ಇದೇ ಮೊದಲ ಬಾರಿಗೆ ಬಿಜೆಪಿ ಕಾರ್ಯಕರ್ತರು (BJP Workers) ಹುಣ್ಣುಮೆ ಪೂಜೆ ನಡೆಸುತ್ತಿದ್ದಾರೆ. ಹುಣ್ಣಿಮೆ ಪೂಜೆಯಲ್ಲಿ (Hunnime Pooje) ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ಇನ್ನು ಹುಣ್ಣಿಮೆ ಪೂಜೆಯಂದು ದತ್ತ ಪಾದುಕೆ ದರ್ಶನ, ಪೂಜೆ ಸಲ್ಲಿಸಲು ಬಿಜೆಪಿ ಕಾರ್ಯಕರ್ತರು ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.

ಪ್ರತಿ ಹುಣ್ಣುಮೆ ದಿನ ಭಜರಂಗದಳ, VHP ಕಾರ್ಯಕರ್ತರು ದತ್ತ ಪಾದುಕೆಗೆ ಪೂಜೆ ಸಲ್ಲಿಸುತ್ತಿದ್ದರು. ಈಗ ಇದೇ ಮೊದಲ ಬಾರಿಗೆ ಬಿಜೆಪಿ ಕಾರ್ಯಕರ್ತರು ಹುಣ್ಣಿಮೆ ಪೂಜೆ ನೆರವೇರಿಸಲಿದ್ದಾರೆ. ಬೈಕ್ ಜಾಥಾದ ಮೂಲಕ ಕಾರ್ಯಕರ್ತರು, ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾಕ್ಕೆ ತೆರಳಲಿದ್ದಾರೆ. ಡಿಸೆಂಬರ್ 17 ರಿಂದ ದತ್ತಜಯಂತಿ ಆರಂಭವಾಗಲಿದೆ.

ಸಂಪೂರ್ಣ ಹಿಂದು ಪೀಠಕ್ಕಾಗಿ ಆಗ್ರಹಿಸಿ ದತ್ತಜಯಂತಿ ನಡೆಯುತ್ತೆ. ಹಿಂದೂ ಪೀಠಕ್ಕಾಗಿ ಹೋರಾಟದ ಜೊತೆಗೆ ರಾಜಕೀಯವಾಗಿ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಭಾರಿ ಚರ್ಚೆಯಲ್ಲಿರುತ್ತದೆ. ದಕ್ಷಿಣ ಭಾರತದಲ್ಲಿ ಬಿಜೆಪಿ ಗೆಲುವಿಗೆ ದತ್ತಪೀಠ ಹೋರಾಟ ಪ್ರಮುಖ ಕಾರಣವಾಗಿತ್ತು. ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾವನ್ನು ದಕ್ಷಿಣ ಭಾರತದ ಅಯೋಧ್ಯೆ ಎಂದೇ ಕರೆಯಲಾಗುತ್ತೆ.

ಇದನ್ನೂ ಓದಿ: ಮತ್ತೆ ಮುನ್ನಲೆಗೆ ಬಂದ ದತ್ತಪೀಠ ವಿವಾದ: ಇಸ್ಲಾಂ ಆಚರಣೆಗೆ ಶ್ರೀರಾಮಸೇನೆ ವಿರೋಧ

ದತ್ತಮಾಲಾ ಅಭಿಯಾನ

ಇನಾಂ‌ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾವನ್ನು ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ಶ್ರೀರಾಮಸೇನೆ ಇತ್ತೀಚೆಗೆ 7 ದಿನಗಳ ದತ್ತಮಾಲಾ ಅಭಿಯಾನವನ್ನು ಆರಂಭಿಸಿತ್ತು. ಈ ಬಾರಿ 20ನೇ ವರ್ಷದ ದತ್ತಮಾಲಾ ಅಭಿಯಾನ ನಡೆದಿದ್ದು ರಾಜ್ಯಾದ್ಯಂತ ಕಾರ್ಯಕರ್ತರು ದತ್ತಮಾಲಾಧಾರಣೆ ಮಾಡಿ ಏಳು ದಿನ ಅಭಿಯಾನ ಕೈಗೊಂಡಿದ್ದರು. ಕೊನೆಗೆ ಇನಾಂ ದತ್ತಾತ್ರೇಯ ಪೀಠದಲ್ಲಿ ನ.5 ರಂದು ದತ್ತಪಾದುಕೆ ದರ್ಶನ ಪಡೆದರು. ನ.2 ರಂದು ದತ್ತ ದೀಪೋತ್ಸವ, ನ. 4 ರಂದು ಪಡಿ ಸಂಗ್ರಹ ಕಾರ್ಯ ನಡೆಯಿತು. ನವೆಂಬರ್ 5 ರಂದು ಶೋಭಾಯಾತ್ರೆ ನಡೆದ ಬಳಿಕವೇ ಇದೇ ಸ್ಥಳದಲ್ಲಿ ಧರ್ಮಸಭೆ ನಡೆಸಿ ದತ್ತಪೀಠಕ್ಕೆ ತೆರಳಿ, ದತ್ತ ಪಾದುಕೆಗಳ ದರ್ಶನ ಪಡೆದ ನಂತರ, ಹೋಮ-ಹವನ ಹಾಗೂ ಪ್ರಸಾದ ವಿನಿಯೋಗ ನಡೆದಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!