Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkamagaluru News: ಗಂಡನ ಮೇಲಿನ ಅನೈತಿಕ ಸಂಬಂಧಕ್ಕೆ 4 ತಿಂಗಳ ಹಿಂದಷ್ಟೇ ಹಸೆಮಣೆ ಏರಿದ್ದ ಯುವತಿ ದುರಂತ ಅಂತ್ಯ

ಮಂಜುನಾಥ್ ಮದುವೆಯಾದ ವಿಚಾರ ಕಾಂತಾಳಿಗೆ ತಿಳಿಯುತ್ತಿದ್ದಂತೆ ಆಕೆ ಪ್ರಿಯತಮನ ಮನೆಗೆ ಬಂದು ಆತನ ಹೆಂಡತಿ ಭರತಿಯನ್ನು ಮನೆಯ ಹಿಂಭಾಗದ ಹೊಲಕ್ಕೆ ಕರೆದುಕೊಂಡು ಹೋಗಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ.

Chikkamagaluru News: ಗಂಡನ ಮೇಲಿನ ಅನೈತಿಕ ಸಂಬಂಧಕ್ಕೆ 4 ತಿಂಗಳ ಹಿಂದಷ್ಟೇ ಹಸೆಮಣೆ ಏರಿದ್ದ ಯುವತಿ ದುರಂತ ಅಂತ್ಯ
ಘಟನಾ ಸ್ಥಳ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಆಯೇಷಾ ಬಾನು

Updated on: Jul 07, 2023 | 12:08 PM

ಚಿಕ್ಕಮಗಳೂರು: ಗಂಡನ ಅನೈತಿಕ ಸಂಬಂಧಕ್ಕೆ(Illegal Affair) ನಾಲ್ಕು ತಿಂಗಳ ಹಿಂದಷ್ಟೇ ತಾಳಿ ಕಟ್ಟಿಸಿಕೊಂಡು ಮನೆಗೆ ಬಂದಿದ್ದ ಹೆಂಡತಿ ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಗಣಿ ಬಸಳ್ಳಿ ಗ್ರಾಮದಲ್ಲಿ ನಡೆದಿದೆ(Murder). ಭಾರತಿ(20) ಹತ್ಯೆಯಾದ ಮಹಿಳೆ. ಮೃತ ಭಾರತಿಯ ಗಂಡನ ಪ್ರಿಯತಮೆ ಮನೆಯ ಹಿಂಭಾಗದ ಹೊಲದಲ್ಲಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾಳೆ.

ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಮಂಜುನಾಥ್ ಎಂಬುವವನ ಜೊತೆ ಭಾರತಿಗೆ ವಿವಾಹವಾಗಿತ್ತು. ಆದ್ರೆ ಮದುವೆಗೆ ಮುಂಚೆಯೇ ಮಂಜುನಾಥನಿಗೆ ಕಾಂತ ಎಂಬ ಮಹಿಳೆಯ ಜೊತೆ ಅನೈತಿಕ ಸಂಬಂಧ ಇತ್ತು. ಮಂಜುನಾಥ್ ಮದುವೆಯಾದ ವಿಚಾರ ಕಾಂತಾಳಿಗೆ ತಿಳಿಯುತ್ತಿದ್ದಂತೆ ಆಕೆ ಪ್ರಿಯತಮನ ಮನೆಗೆ ಬಂದು ಆತನ ಹೆಂಡತಿ ಭರತಿಯನ್ನು ಮನೆಯ ಹಿಂಭಾಗದ ಹೊಲಕ್ಕೆ ಕರೆದುಕೊಂಡು ಹೋಗಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ಹತ್ಯೆ ಮಾಡಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾರೆ. ತನ್ನೊಂದಿಗೆ ಅನೈತಿಕ ಸಂಬಂಧ ಹೊಂದಿ ಮದುವೆಯಾಗಿದ್ದಕ್ಕೆ ಕೊಲೆ ಮಾಡಿದ್ದಾಗಿ ಪೊಲೀಸರ ಬಳಿ ಹೇಳಿದ್ದಾಳೆ. ಇವರ ಅನೈತಿಕ ಸಂಬಂಧಕ್ಕೆ ಏನು ತಿಳಿಯದ ಅಮಾಯಕ ಯುವತಿ ಪ್ರಾಣ ಕಳೆದುಕೊಂಡಿದ್ದಾಳೆ. ಭಾರತಿ ಸಂಬಂಧಿಕರು ಮಂಜುನಾಥ್ ವಿರುದ್ಧ ಆಕ್ರೋಶ ಹೊರ ಹಾಕಿದ್ದು ಮಗಳ ಸಾವಿಗೆ ಕಣ್ಣೀರು ಹಾಕಿದ್ದಾರೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Love Jihad: ಇದೊಂದು ವಿಕೃತನ ಕತೆ, ಅದೀಗ ಲವ್ ಜಿಹಾದ್ ಬಣ್ಣವೂ ಪಡೆದುಕೊಂಡಿದೆ

ಶಾಲಾ ಬಸ್ ಹರಿದು ಅದೇ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಸಾವು

ಶಾಲಾ ಬಸ್​ ಹರಿದು 2ನೇ ತರಗತಿ ಓದುತ್ತಿದ್ದ ದಿವ್ಯಾಂಶು ಸಿಂಗ್​(8) ಎಂಬ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಎಂ.ಮೇಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಿದರಗೆರೆಯ ಎಸ್.ಎಸ್.ವಿ ಶಾಲೆಯ 2ನೇ ತರಗತಿ ವಿದ್ಯಾರ್ಥಿ ದಿವ್ಯಾಂಶು, ನಿನ್ನೆ(ಜು.06) ಸಂಜೆ 6 ಗಂಟೆಗೆ ಟ್ಯೂಷನ್ ಮುಗಿಸಿ ಶಾಲಾ ವಾಹನದಿಂದ ಇಳಿದು ರಸ್ತೆ ದಾಟುತ್ತಿದ್ದಾಗ ಅದೇ ಶಾಲೆಯ ವಾಹನದ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾನೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ
ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ