AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಕೋರ್ಟ್​ ಆವರಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ದೇವರಕಾರೇಹಳ್ಳಿಯ ನಿವಾಸಿಯಾಗಿರುವ ಮಲ್ಲಿಕಾರ್ಜುನ ಜಮೀನು ವಿವಾದ ಸಂಬಂಧ ನ್ಯಾಯಾಲಯದ ಮೆಟ್ಟಿಲೇರಿದ್ದರು. ನ್ಯಾಯಾಲಯದಲ್ಲಿ ತಮ್ಮ ಪರವಾಗಿ ತೀರ್ಪು ಬಾರದ ಹಿನ್ನೆಲೆಯಲ್ಲಿ ಕೋರ್ಟ್ ಆವರಣದಲ್ಲಿ ವಿಡಿಯೋ ರೆಕಾರ್ಡ್ ಮಾಡಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಚಿಕ್ಕಮಗಳೂರು: ಕೋರ್ಟ್​ ಆವರಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಆತ್ನಹತ್ಯೆಗೆ ಯತ್ನಿಸಿದ ಮಲ್ಲಿಕಾರ್ಜುನ್​
TV9 Web
| Edited By: |

Updated on: Jun 01, 2024 | 12:28 PM

Share

ಚಿಕ್ಕಮಗಳೂರು, ಜೂನ್​. 01: ನ್ಯಾಯ ಸಿಗದಿದ್ದಕ್ಕೆ ನೊಂದ ಯುವಕನೋರ್ವ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಡೂರು (Kaduru) ಕೋರ್ಟ್ (Court) ಆವರಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಲ್ಲಿಕಾರ್ಜುನ (34) ವಿಷ ಸೇವಿಸಿದ ಯುವಕ. ವಿಷ ಸೇವನೆ ಬಳಿಕ ಅಸ್ವಸ್ಥಗೊಂಡ ಯುವಕನನ್ನು ಹಾಸನ ಜಿಲ್ಲಾಸ್ಪತ್ರೆಗೆ‌ ದಾಖಲಿಸಲಾಗಿದೆ. ಕಡೂರು ತಾಲೂಕಿನ ದೇವರಕಾರೇಹಳ್ಳಿಯ ನಿವಾಸಿಯಾಗಿರುವ ಮಲ್ಲಿಕಾರ್ಜುನ ಜಮೀನು ವಿವಾದ ಸಂಬಂಧ ನ್ಯಾಯಾಲಯದ ಮೆಟ್ಟಿಲೇರಿದ್ದರು. ನ್ಯಾಯಾಲಯದಲ್ಲಿ ತಮ್ಮ ಪರವಾಗಿ ತೀರ್ಪು ಬಾರದ ಹಿನ್ನೆಲೆಯಲ್ಲಿ ಕೋರ್ಟ್ ಆವರಣದಲ್ಲಿ ವಿಡಿಯೋ ರೆಕಾರ್ಡ್ ಮಾಡಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ವಿಡಿಯೋದಲ್ಲಿ ಏನಿದೆ?

ನನ್ನ ತಂದೆ ನಿಧನವಾದ ಬಳಿಕ ನನ್ನ ಜಮೀನು ಲಪಟಾಯಿಸಲು ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ನಮ್ಮ ವಕೀಲರು ಕೂಡ ಇದರಲ್ಲಿ ಶಾಮೀಲು ಆಗಿದ್ದಾರೆ. ನನ್ನ ಸಾವಿಗೆ ಎಂಬಿ ಷಡಕ್ಷರಪ್ಪ ತಮ್ಮಂದಿರು, ಅವರ ಅಣ್ಣನ ಮಕ್ಕಳು ಮತ್ತು ರಾಜು ಕಾರಣ. ಅಮ್ಮ ನನ್ನ ಕ್ಷಮಿಸು, ನೀನು ಚೆನ್ನಾಗಿರು. ಕೈ, ಕಾಲು ಮುಗಿದರೂ ನ್ಯಾಯಾಲಯದಲ್ಲಿ ನನ್ನನ್ನು ಏನು ಕೇಳಲಿಲ್ಲ. ನಾನು ಜಮೀನು ಉಳಿಸಿಕೊಳ್ಳಲು 20 ಲಕ್ಷ ರೂ. ಸಾಲ ಮಾಡಿದ್ದೇನೆ.

ಇದನ್ನೂ ಓದಿ: ಇನ್ಮುಂದೆ ಹೈಕೋರ್ಟ್​ನ ಮಹಿಳಾ ಸಿಬ್ಬಂದಿಗೆ ಮುಟ್ಟಿನ ರಜೆ

ನಾನು ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವರಿಗೆ ಪತ್ರ ಬರೆದಿದ್ದೇನೆ. ಆದರೆ ನನ್ನ ಪತ್ರಕ್ಕೆ ಸ್ಪಂದಿಸಿಲ್ಲ. ಈ ಮೂಲಕ ಸಿಎಂ ಮತ್ತು ಗೃಹ ಸಚಿವರಲ್ಲಿ ಬೇಡಿಕೊಳ್ಳುವೆ ನನಗೆ ನ್ಯಾಯ ಒದಗಿಸಿಕೊಡಿ. ಈ ಔಷಧಿ ಕುಡಿದು ನ್ಯಾಯಾಲಯದಲ್ಲೇ ಸಾಯುತ್ತಿದ್ದೇನೆ ಎಂದು ಮಲ್ಲಿಕಾರ್ಜುನ್​ ವಿಷ ಸೇವಿಸಿದ್ದಾರೆ.

ಹೈಕೋರ್ಟ್​ನಲ್ಲಿ ಆತ್ಮಹತ್ಯೆಗೆ ಯತ್ನ

ಏ.3 ರಂದು ಹೈಕೋರ್ಟ್​​ ಹಾಲ್​ ನಂ 1ರಲ್ಲಿ ಮೈಸೂರು ಮೂಲದ ಶ್ರೀನಿವಾಸ ಎಂಬುವರು ಕತ್ತು ಕೋಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಶ್ರೀನಿವಾಸ್​ ಅವರು ಹೈಕೋರ್ಟ್​ಗೆ ಸಲ್ಲಿದ್ದ ಅರ್ಜಿಯಲ್ಲಿ ಅನ್ಯಾಯವಾಗಿದೆ ಎಂದು ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ