AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಕರೆಂಟ್ ಇಲ್ಲದೆ ವಸತಿ ಶಾಲೆಯ ಮಕ್ಕಳ ಪರದಾಟ, ಬೀದಿ ದೀಪದ ಬೆಳಕಲ್ಲಿ ಓದು

ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಕೈಮರದಲ್ಲಿರುವ ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕಿಯ ವಸತಿ ಶಾಲೆಯಲ್ಲಿ ಕರೆಂಟ್ ಇಲ್ಲದೆ ಮಕ್ಕಳು ಸೋಲಾರ್ ಬೀದಿ ದೀಪದ ಕೆಳಗೆ ಓದುತ್ತಿದ್ದಾರೆ. ಸಾಲದಕ್ಕೆ ಇಂಧನ ಸಚಿವರೇ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರು. ಅಷ್ಟೆ ಅಲ್ಲದೆ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಕೂಡ ಟಿ.ಡಿ.ರಾಜೇಗೌಡ

ಚಿಕ್ಕಮಗಳೂರು: ಕರೆಂಟ್ ಇಲ್ಲದೆ ವಸತಿ ಶಾಲೆಯ ಮಕ್ಕಳ ಪರದಾಟ, ಬೀದಿ ದೀಪದ ಬೆಳಕಲ್ಲಿ ಓದು
ಕರೆಂಟ್ ಇಲ್ಲದೆ ವಸತಿ ಶಾಲೆಯ ಮಕ್ಕಳ ಪರದಾಟ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Feb 13, 2024 | 12:18 PM

Share

ಚಿಕ್ಕಮಗಳೂರು, ಫೆ.13: ಸರ್ಕಾರಿ ವಸತಿ ಶಾಲೆಯಲ್ಲಿ ವಿದ್ಯುತ್ (Electricity Cut) ಇಲ್ಲದೆ ಮಕ್ಕಳು ಸೋಲಾರ್ ಬೀದಿ ದೀಪದ ಕೆಳಗೆ ಓದುವಂತಹ ಪರಿಸ್ಥಿತಿಗೆ ಬಂದಿಳಿದಿದ್ದಾರೆ. ಚಿಕ್ಕಮಗಳೂರು (Chikkamagaluru) ಜಿಲ್ಲೆ ಎನ್.ಆರ್.ಪುರ ತಾಲೂಕಿನ ಕೈಮರದಲ್ಲಿರುವ ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕಿಯ ವಸತಿ ಶಾಲೆಯಲ್ಲಿ ಕರೆಂಟ್ ಇಲ್ಲದೆ ಮಕ್ಕಳು ಸೋಲಾರ್ ಬೀದಿ ದೀಪದ ಕೆಳಗೆ ಓದುತ್ತಿದ್ದಾರೆ. ಹಾಗಾದ್ರೆ, ಸರ್ಕಾರಿ ವಸತಿ ಶಾಲೆಯಲ್ಲಿ ಯುಪಿಎಸ್ ಇಲ್ವಾ ಎಂಬ ಪ್ರಶ್ನೆ ಕೂಡ ಮೂಡೋದು ಸಹಜ.‌ ಮುಂದಿನ ತಿಂಗಳಿಂದ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಕೂಡ ನಡೆಯುತ್ತಿದೆ.

ಸರ್ಕಾರ ಲೋಡ್ ಶೆಡ್ಡಿಂಗ್ ಹೆಸರಲ್ಲಿ ಕರೆಂಟ್ ತೆಗೆಯುತ್ತಿದ್ದರೆ ಮಕ್ಕಳು ಹೇಗೆ ಓದುತ್ತಾರೆ ಎಂಬ ಪ್ರಶ್ನೆ ಮೂಡಿದೆ. ಇದರ ಜೊತೆ, ಸರ್ಕಾರಿ ವಸತಿ ಶಾಲೆಯಲ್ಲೇ ಕರೆಂಟ್ ಇಲ್ಲದೆ ಮಕ್ಕಳು ಸಂಜೆ ವೇಳೆ ಶಾಲೆ ಕಟ್ಟಡದಿಂದ ಹೊರಬಂದು ಕಾಂಪೌಂಡ್ ಒಳಗೆ ಬೀದಿ ದೀಪದ ಸೋಲಾರ್ ವಿದ್ಯುತ್ ಕೆಳಗೆ ಓದುತ್ತಿದ್ದಾರೆ. ವಿದ್ಯುತ್ ಇಲ್ಲದೆ ಇರುವುದರಿಂದ ಬೀದಿ ದೀಪದ ಕೆಳಗೆ ಓದುತ್ತಿರುವ ಶಾಲಾ ಹೆಣ್ಣು ಮಕ್ಕಳಿಗೆ ಏನಾದ್ರು ಸಮಸ್ಯೆಯಾದರೆ ಜವಾಬ್ದಾರಿ ಯಾರು ಎಂಬ ಪ್ರಶ್ನೆ ಕೂಡ ಮೂಡುತ್ತದೆ. ಸಾಲದಕ್ಕೆ ಇಂಧನ ಸಚಿವರೇ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರು. ಅಷ್ಟೆ ಅಲ್ಲದೆ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಕೂಡ ಟಿ.ಡಿ.ರಾಜೇಗೌಡ. ಈ ಎನ್.ಆರ್.ಪುರ ತಾಲೂಕು ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡರ ಆಡಳಿತದ ವ್ಯಾಪ್ತಿಗೆ ಸೇರಲಿದೆ.

ಇದನ್ನೂ ಓದಿ: Bengaluru Traffic: ಬೆಂಗಳೂರು ಟ್ರಾಫಿಕ್ ನಿಯಂತ್ರಣಕ್ಕೆ ಜಪಾನ್​ ತಂತ್ರಜ್ಞಾನ ಅಳವಡಿಕೆ: ಏನಿದರ ವಿಶೇಷ, ಇಲ್ಲಿದೆ ವಿವರ

ಹೀಗೆ ಸರ್ಕಾರಿ ವಸತಿ ಶಾಲೆಯಲ್ಲೇ ವಿದ್ಯುತ್ ಇಲ್ಲದೆ ಮಕ್ಕಳು ಸೋಲಾರ್ ಬೀದಿ ದೀಪದ ಕೆಳಗೆ ಓದುತ್ತಿರುವ ವಿಡಿಯೋ ವೈರಲ್ ಆಗಿದ್ದು ಸ್ಥಳೀಯರು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಹೆಣ್ಣು ಮಕ್ಕಳು ಇರುವ ವಸತಿ ಶಾಲೆ ಸರ್ಕಾರ ಕೂಡಲೇ ವಸತಿ ಶಾಲೆಗೆ ಯುಪಿಎಸ್ ಅಳವಡಿಸಬೇಕೆಂದು ಆಗ್ರಹಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ