AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿನಲ್ಲಿ ಹನಿಟ್ರ್ಯಾಪ್ ನಡೆಸುತ್ತಿದ್ದ ಆರೋಪದಡಿ 6 ಮಹಿಳೆಯರೂ ಸೇರಿ 13 ಜನರು ಬಂಧನ

ಬಂಧಿತ ಆರೋಪಿಗಳಿಂದ 1 ಲಕ್ಷ 97 ಸಾವಿರ ನಗದು, 5 ಕಾರುಗಳು, 17 ಮೊಬೈಲ್, 24 ಸಿಮ್ ಕಾರ್ಡ್ ಮತ್ತು ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಹನಿಟ್ರ್ಯಾಪ್ ನಡೆಸುತ್ತಿದ್ದ ಆರೋಪದಡಿ 6 ಮಹಿಳೆಯರೂ ಸೇರಿ 13 ಜನರು ಬಂಧನ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Aug 17, 2021 | 8:12 PM

Share

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಹನಿಟ್ರ್ಯಾಪ್ ಮಾಡುತ್ತಿದ್ದ ಆರೋಪದಡಿ ಗ್ಯಾಂಗ್ಒಂದನ್ನು ಪೊಲೀಸರು ಬಂಧಿಸಿದ್ದಾರೆ. 6 ಮಹಿಳೆಯರು ಸೇರಿ 13 ಜನರ ತಂಡ ಇದಾಗಿದ್ದು, ಮೋಸದಿಂದ ಹನಿಟ್ರ್ಯಾಪ್ ನಡೆಸಿ ವಂಚಿಸುತ್ತಿದ್ದರು ಎಂದು ಚಿಕ್ಕಮಗಳೂರು ಪೊಲೀಸರು ತಿಳಿಸಿದ್ದಾರೆ. ಮೊದಲು ಈ ತಂಡದ 6 ಮಹಿಳೆಯರು  ಪುರುಷರನ್ನು ತಮ್ಮತ್ತ ಸೆಳೆದು ನಗ್ನ ವಿಡಿಯೋ ಮಾಡುತ್ತಿದ್ದರು.  ಈ ತಂಡದ ಮಹಿಳೆಯರು ಸಾರ್ವಜನಿಕರನ್ನು ಮೊದಲು ತಮ್ಮತ್ತ ಆಕರ್ಷಿತರಾಗುವಂತೆ ಮಾಡುತ್ತಿದ್ದರು. ಆ ಬಳಿಕ ಪೊಲೀಸರ ಸೋಗಿನಲ್ಲಿ ಎಂಟ್ರಿ ಕೊಡುತ್ತಿದ್ದ ಪುರುಷರ ತಂಡ ಹಣ ಕೊಟ್ಟರೆ ಎಫ್ಐಆರ್ ದಾಖಲಿಸುವುದಿಲ್ಲ ಎಂದು ಬೆದರಿಕೆ ಒಡ್ಡುತ್ತಿತ್ತು ಎಂದು ಪೊಲೀಸರು ಬಂಧಿತ ಗುಂಪಿನ ಕುರಿತು ಮಾಹಿತಿ ನೀಡಿದ್ದಾರೆ.

ನಂತರ ಮೋಸ ಹೋದವರು ಹಣ ಕೊಟ್ಟ ಬಳಿಕವೂ ಹನಿಟ್ರಾಪ್ ಗ್ಯಾಂಗ್ ನಿರಂತರ ಕಿರುಕುಳ ಕೊಡುತ್ತಿತ್ತು. ಮೋಸ ಹೋದವರ ಬಳಿ ಪದೇ ಪದೇ ಹಣ ನೀಡುವಂತೆ ಒತ್ತಡ ಹೇರುತ್ತಿತ್ತು. ಆ ಬಳಿಕವೂ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಾಕುವುದಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿತ್ತು. ಜತೆಗೆ ಕುಟುಂಬ ಸದಸ್ಯರಿಗೂ ವಿಡಿಯೋ ಕಳುಹಿಸುವುದಾಗಿ ಬೆದರಿಕೆ ಒಡ್ಡುತ್ತಿತ್ತು ಈ ಹನಿಟ್ರ್ಯಾಪ್ ತಂಡ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳಿಂದ 1 ಲಕ್ಷ 97 ಸಾವಿರ ನಗದು, 5 ಕಾರುಗಳು, 17 ಮೊಬೈಲ್, 24 ಸಿಮ್ ಕಾರ್ಡ್ ಮತ್ತು ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಚಿಕ್ಕಮಗಳೂರು ನಗರ, ಸಕಲೇಶಪುರ ಮೂಲದವರು ಎಂದು ತಿಳಿದುಬಂದಿದೆ.

ಇದನ್ನೂ ಓದಿ: 

ಮರಳಿ ತಾಯ್ನಾಡಿಗೆ ಬರಬೇಡ, ಭಾರತದಲ್ಲೇ ಉಳಿದುಬಿಡು ಎನ್ನುತ್ತಿದ್ದಾರೆ ಪೋಷಕರು; ಮೈಸೂರಿನಲ್ಲಿರುವ ಅಪ್ಘನ್ ವಿದ್ಯಾರ್ಥಿಗಳ ಅಳಲು

ಚಿಕ್ಕಮಗಳೂರು: ಕಾರಿನ ಮೇಲೆ ಒಂಟಿ ಸಲಗ ದಾಳಿ; ಮೂವರಿಗೆ ಗಂಭೀರ ಗಾಯ, ಒಬ್ಬರ ಸ್ಥಿತಿ ಚಿಂತಾಜನಕ

(Chikkamagaluru Police arrest 10 people including 6 women who accused ran a Honeytrap)

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?