AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿನಲ್ಲಿ ಹನಿಟ್ರ್ಯಾಪ್ ನಡೆಸುತ್ತಿದ್ದ ಆರೋಪದಡಿ 6 ಮಹಿಳೆಯರೂ ಸೇರಿ 13 ಜನರು ಬಂಧನ

ಬಂಧಿತ ಆರೋಪಿಗಳಿಂದ 1 ಲಕ್ಷ 97 ಸಾವಿರ ನಗದು, 5 ಕಾರುಗಳು, 17 ಮೊಬೈಲ್, 24 ಸಿಮ್ ಕಾರ್ಡ್ ಮತ್ತು ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಹನಿಟ್ರ್ಯಾಪ್ ನಡೆಸುತ್ತಿದ್ದ ಆರೋಪದಡಿ 6 ಮಹಿಳೆಯರೂ ಸೇರಿ 13 ಜನರು ಬಂಧನ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Aug 17, 2021 | 8:12 PM

Share

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಹನಿಟ್ರ್ಯಾಪ್ ಮಾಡುತ್ತಿದ್ದ ಆರೋಪದಡಿ ಗ್ಯಾಂಗ್ಒಂದನ್ನು ಪೊಲೀಸರು ಬಂಧಿಸಿದ್ದಾರೆ. 6 ಮಹಿಳೆಯರು ಸೇರಿ 13 ಜನರ ತಂಡ ಇದಾಗಿದ್ದು, ಮೋಸದಿಂದ ಹನಿಟ್ರ್ಯಾಪ್ ನಡೆಸಿ ವಂಚಿಸುತ್ತಿದ್ದರು ಎಂದು ಚಿಕ್ಕಮಗಳೂರು ಪೊಲೀಸರು ತಿಳಿಸಿದ್ದಾರೆ. ಮೊದಲು ಈ ತಂಡದ 6 ಮಹಿಳೆಯರು  ಪುರುಷರನ್ನು ತಮ್ಮತ್ತ ಸೆಳೆದು ನಗ್ನ ವಿಡಿಯೋ ಮಾಡುತ್ತಿದ್ದರು.  ಈ ತಂಡದ ಮಹಿಳೆಯರು ಸಾರ್ವಜನಿಕರನ್ನು ಮೊದಲು ತಮ್ಮತ್ತ ಆಕರ್ಷಿತರಾಗುವಂತೆ ಮಾಡುತ್ತಿದ್ದರು. ಆ ಬಳಿಕ ಪೊಲೀಸರ ಸೋಗಿನಲ್ಲಿ ಎಂಟ್ರಿ ಕೊಡುತ್ತಿದ್ದ ಪುರುಷರ ತಂಡ ಹಣ ಕೊಟ್ಟರೆ ಎಫ್ಐಆರ್ ದಾಖಲಿಸುವುದಿಲ್ಲ ಎಂದು ಬೆದರಿಕೆ ಒಡ್ಡುತ್ತಿತ್ತು ಎಂದು ಪೊಲೀಸರು ಬಂಧಿತ ಗುಂಪಿನ ಕುರಿತು ಮಾಹಿತಿ ನೀಡಿದ್ದಾರೆ.

ನಂತರ ಮೋಸ ಹೋದವರು ಹಣ ಕೊಟ್ಟ ಬಳಿಕವೂ ಹನಿಟ್ರಾಪ್ ಗ್ಯಾಂಗ್ ನಿರಂತರ ಕಿರುಕುಳ ಕೊಡುತ್ತಿತ್ತು. ಮೋಸ ಹೋದವರ ಬಳಿ ಪದೇ ಪದೇ ಹಣ ನೀಡುವಂತೆ ಒತ್ತಡ ಹೇರುತ್ತಿತ್ತು. ಆ ಬಳಿಕವೂ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಾಕುವುದಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿತ್ತು. ಜತೆಗೆ ಕುಟುಂಬ ಸದಸ್ಯರಿಗೂ ವಿಡಿಯೋ ಕಳುಹಿಸುವುದಾಗಿ ಬೆದರಿಕೆ ಒಡ್ಡುತ್ತಿತ್ತು ಈ ಹನಿಟ್ರ್ಯಾಪ್ ತಂಡ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳಿಂದ 1 ಲಕ್ಷ 97 ಸಾವಿರ ನಗದು, 5 ಕಾರುಗಳು, 17 ಮೊಬೈಲ್, 24 ಸಿಮ್ ಕಾರ್ಡ್ ಮತ್ತು ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಚಿಕ್ಕಮಗಳೂರು ನಗರ, ಸಕಲೇಶಪುರ ಮೂಲದವರು ಎಂದು ತಿಳಿದುಬಂದಿದೆ.

ಇದನ್ನೂ ಓದಿ: 

ಮರಳಿ ತಾಯ್ನಾಡಿಗೆ ಬರಬೇಡ, ಭಾರತದಲ್ಲೇ ಉಳಿದುಬಿಡು ಎನ್ನುತ್ತಿದ್ದಾರೆ ಪೋಷಕರು; ಮೈಸೂರಿನಲ್ಲಿರುವ ಅಪ್ಘನ್ ವಿದ್ಯಾರ್ಥಿಗಳ ಅಳಲು

ಚಿಕ್ಕಮಗಳೂರು: ಕಾರಿನ ಮೇಲೆ ಒಂಟಿ ಸಲಗ ದಾಳಿ; ಮೂವರಿಗೆ ಗಂಭೀರ ಗಾಯ, ಒಬ್ಬರ ಸ್ಥಿತಿ ಚಿಂತಾಜನಕ

(Chikkamagaluru Police arrest 10 people including 6 women who accused ran a Honeytrap)

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು