AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರಿಂದಲೇ ಹಿಟ್ ಆ್ಯಂಡ್​ ರನ್: ಬೈಕ್​ ಸವಾರ ಸಾವು, ಜೀಪ್ ಚಾಲಕ ಸಸ್ಪೆಂಡ್

ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಪೊಲೀಸ್ ಜೀಪ್ ಡಿಕ್ಕಿಯಿಂದ ಬೈಕ್​ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಸಿಂಗಟಗೆರೆ ಪೊಲೀಸ್ ಠಾಣೆಯ ಜೀಪ್ ಚಾಲಕ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದೆ. ಸದ್ಯ ಚಾಲಕನನ್ನು ಅಮಾನತುಗೊಳಿಸಲಾಗಿದೆ ಮತ್ತು ಬಂಧಿಸಲಾಗಿದೆ. ಜೀಪನ್ನು ವಶಪಡಿಸಿಕೊಳ್ಳಲಾಗಿದೆ. ಈ ಘಟನೆಯಿಂದ ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಪೊಲೀಸರಿಂದಲೇ ಹಿಟ್ ಆ್ಯಂಡ್​ ರನ್: ಬೈಕ್​ ಸವಾರ ಸಾವು, ಜೀಪ್ ಚಾಲಕ ಸಸ್ಪೆಂಡ್
ಪೊಲೀಸರಿಂದಲೇ ಹಿಟ್ ಆ್ಯಂಡ್​ ರನ್: ಬೈಕ್​ ಸವಾರ ಸಾವು, ಜೀಪ್ ಚಾಲಕ ಸಸ್ಪೆಂಡ್
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Mar 19, 2025 | 5:45 PM

Share

ಚಿಕ್ಕಮಗಳೂರು, ಮಾರ್ಚ್​ 19: ಪೊಲೀಸ್ ಜೀಪ್ ಡಿಕ್ಕಿಯಿಂದ (accident) ದ್ವಿಚಕ್ರವಾಹನದ ಸವಾರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಗಟಗೆರೆ ಪೊಲೀಸ್ ಠಾಣೆಯ ಜೀಪ್ ಚಾಲಕ ಶಿವಕುಮಾರ್​​​ನ್ನು ಅಮಾನತು (suspended) ಮಾಡಿ ಚಿಕ್ಕಮಗಳೂರು ಎಸ್‌ಪಿ ವಿಕ್ರಮ್ ಆಮ್ಟೆ ಆದೇಶ ಹೊರಡಿಸಿದ್ದಾರೆ. ಸಿಂಗಟಗೆರೆ ಠಾಣೆಗೆ ಸೇರಿದ ಜೀಪ್ ಡಿಕ್ಕಿಯಿಂದ ಗಂಗಾಧರ್(49) ಎಂಬುವವರು ಸಾವನ್ನಪ್ಪಿದ್ದರು. ಕಡೂರು ಪಟ್ಟಣದ ಮಚ್ಚೇರಿ ಗ್ರಾಮದ ಬಳಿ ಅಪಘಾತ ಸಂಭವಿಸಿತ್ತು. ಕಡೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ಸದ್ಯ ಪೊಲೀಸರು ಚಾಲಕ ಶಿವಕುಮಾರ್ ಬಂಧಿಸಿ ಜೀಪ್ ವಶಕ್ಕೆ ಪಡೆದಿದ್ದಾರೆ. ಅಪಘಾತ ವೇಳೆ ಪೊಲೀಸ್‌ ಜೀಪ್ ನಿಲ್ಲಿಸದೇ ಶಿವಕುಮಾರ್ ಪರಾರಿಯಾಗಿದ್ದ. ಜೀಪ್‌ ಚಾಲಕನ ನಿರ್ಲಕ್ಷ್ಯದ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು.

ನಡೆದಿದ್ದೇನು?

ಬೈಕ್​ಗೆ ಪೊಲೀಸ್ ಜೀಪ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದರು. ವೇಗವಾಗಿ ಬಂದು ಹಿಂಭಾಗದಿಂದ ಜೀಪ್ ಡಿಕ್ಕಿ ಹೊಡೆಯಲಾಗಿತ್ತು. ಆ ಮೂಲಕ ಪೊಲೀಸರಿಂದಲೇ‌ ಹಿಟ್ ಆ್ಯಂಡ್​ ರನ್ ಮಾಡಲಾಗಿದೆ. ಕಡೂರು ಪಟ್ಟಣದ ಮಚ್ಚೇರಿ ಗ್ರಾಮದ ಬಳಿ ಘಟನೆ ಸಂಭವಿಸಿತ್ತು. ಬೈಕ್​ ಡಿಕ್ಕಿ ಹೊಡೆದು ಜೀಪ್​​ನಿಲ್ಲಿಸದೆ ಚಾಲಕ ಪರಾರಿಯಾಗಿದ್ದ.

ಇದನ್ನೂ ಓದಿ
Image
ಬಿಡದಿಯಲ್ಲಿ ಪಾಕ್​ ಪರ ಜೈಕಾರ, ಕನ್ನಡಿಗರ ಬಗ್ಗೆ ಅವಹೇಳನ ಬರಹ: ಇಬ್ಬರ ಬಂಧನ
Image
ಹಂಪಿ ನೋಡಲು ಬಂದ ಇಡೀ ಕುಟುಂಬ ಆತ್ಮಹತ್ಯೆಗೆ ಯತ್ನ: ಓರ್ವ ಸಾವು
Image
ಉಡುಪಿ: ಮೀನು ಕದ್ದಿದ್ದಕ್ಕೆ ಮಹಿಳೆಯನ್ನ ಮರಕ್ಕೆ ಕಟ್ಟಿ ಹಲ್ಲೆ
Image
Karnataka Bandh: ಮಾ 22ರಂದು ಕರ್ನಾಟಕ ಬಂದ್: ಏನಿರುತ್ತೆ-ಏನಿರಲ್ಲ

ಇದನ್ನೂ ಓದಿ: ಎಣ್ಣೆಗಾಗಿ ಕ್ಯಾಶಿಯರ್ ಮೇಲೆ ಯೂತ್ ಕಾಂಗ್ರೆಸ್ ಅಧ್ಯಕ್ಷನಿಂದ ಹಲ್ಲೆ

ಘಟನೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳದಲ್ಲಿ ನೂರಾರು ಸ್ಥಳೀಯರು ಸೇರಿದ್ದರು. ಈ ವೇಳೆ ಮೃತ ದೇಹ ತೆಗೆಯಲು ಬಿಡುವುದಿಲ್ಲ ಎಂದು ಪಟ್ಟುಹಿಡಿದಿದ್ದರು. ಪೊಲೀಸರ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದರು.

ನಾಪತ್ತೆಯಾಗಿದ್ದ 10ನೇ ತರಗತಿ ವಿದ್ಯಾರ್ಥಿ ನದಿಯಲ್ಲಿ ಶವವಾಗಿ ಪತ್ತೆ

ನಾಪತ್ತೆಯಾಗಿದ್ದ 10ನೇ ತರಗತಿ ವಿದ್ಯಾರ್ಥಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವಂತಹ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹಳುವಳ್ಳಿ ಬಳಿ ಭದ್ರಾ ನದಿಯಲ್ಲಿ ನಡೆದಿದೆ. ಶ್ರೇಯಸ್ ಮೃತ ವಿದ್ಯಾರ್ಥಿ. ಕಳಸ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ನಾಪತ್ತೆಯಾಗಿದ್ದ ಚಿಕ್ಕಮಗಳೂರು ವಸತಿ ಶಾಲೆಯ ಇಬ್ಬರೂ ವಿದ್ಯಾರ್ಥಿಗಳು ಮಂಗಳೂರಿನಲ್ಲಿ ಪತ್ತೆ

ಕಳಸ ಪಟ್ಟಣದ ಖಾಸಗಿ ಶಾಲೆಯಲ್ಲಿ ಶ್ರೇಯಸ್ ವ್ಯಾಸಂಗ ಮಾಡುತ್ತಿದ್ದ. ಮೂಲತಃ ಹಾಸನ ಜಿಲ್ಲೆಯ ಬೇಲೂರು ನಿವಾಸಿಯಾಗಿದ್ದಾನೆ. ಕಳಸ‌ ಪಟ್ಟಣದ ಚಿಕ್ಕಪ್ಪನ ನಿವಾಸದಲ್ಲಿ ವಾಸವಿದ್ದ. ಮಾರ್ಚ್ 16ರಂದು ನಾಪತ್ತೆಯಾಗಿದ್ದ. ಸದ್ಯ ಶ್ರೇಯಸ್ ಸಾವಿನ ಸುತ್ತ ನೂರೆಂಟು ಅನುಮಾನಗಳು ಹುಟ್ಟಿಕೊಂಡಿವೆ. ಭದ್ರಾ ನದಿಯಿಂದ ಶ್ರೇಯಸ್​ ಶವವನ್ನು ಪೊಲೀಸರು ಹೊರತೆಗೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ