AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಲ್ಲಿ ವರುಣಾರ್ಭಟ: ಮನೆಗಳಿಗೆ ನುಗ್ಗಿದ ಚರಂಡಿ ನೀರು, ಮರ ಬಿದ್ದು ರಸ್ತೆ ಬಂದ್​​

ಚಿಕ್ಕಮಗಳೂರಿನಲ್ಲಿ ಗುಡುಗು ಸಹಿತ ಸುರಿದ ಭಾರಿ ಮಳೆಗೆ ಜನ ಜೀವನ್ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ನಗರದ ಹಳೆ ಉಪ್ಪಳ್ಳಿ, ಗೌರಿ ಕಾಲುವೆ ಬಡಾವಣೆಯ ಹತ್ತಾರು ಮನೆಗಳಿಗೆ ಚರಂಡಿ ನೀರು ನುಗ್ಗಿದ ಪರಿಣಾಮ ನಿವಾಸಿಗಳು ಪರದಾಟ ನಡೆಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಹೆಬ್ಬಳ್ಳಿ ಬಳಿ ಗಾಳಿ ಮಳೆಗೆ ರಸ್ತೆಗೆ ಅಡ್ಡಲಾಗಿ ಬೃಹತ್​​ ಮರವೊಂದು ಬಿದ್ದ ಪರಿಣಾಮ ಚಿಕ್ಕಮಗಳೂರು-ಶಾಂತವೇರಿ, ಲಿಂಗದಹಳ್ಳಿ ರಸ್ತೆ ಸಂಚಾರ ಬಂದ್ ಆಗಿದೆ.

ಚಿಕ್ಕಮಗಳೂರಲ್ಲಿ ವರುಣಾರ್ಭಟ: ಮನೆಗಳಿಗೆ ನುಗ್ಗಿದ ಚರಂಡಿ ನೀರು, ಮರ ಬಿದ್ದು ರಸ್ತೆ ಬಂದ್​​
ಮನೆಗಳಿಗೆ ನುಗ್ಗಿದ ನೀರುImage Credit source: Tv9 Kannada
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: May 26, 2026 | 6:42 PM

Share

ಚಿಕ್ಕಮಗಳೂರು, ಮೇ 26: ಜಿಲ್ಲೆಯ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಬಿಸಿಲ ತಾಪಕ್ಕೆ ಕಂಗೆಟ್ಟಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ. ಮುಳ್ಳಯ್ಯನಗಿರಿ ಭಾಗದಲ್ಲಿ ಕಳೆದ ಅರ್ಧಗಂಟೆಯಿಂದ ಭಾರಿ ಮಳೆಯಾಗಿದ್ದು, ಹೊನ್ನಮ್ಮನಹಳ್ಳ ಬಳಿ ಗುಡ್ಡ ಪ್ರದೇಶದಿಂದ ಭಾರಿ ಪ್ರಮಾಣದ ನೀರು ಹರಿದುಬಂದಿದೆ. ಚಂದ್ರದ್ರೋಣ ಪರ್ವತದ ಸಾಲಿನ ಹೊನ್ನಮ್ಮನಹಳ್ಳ, ಮುಳ್ಳಯ್ಯನಗಿರಿ, ಬಾಬಾ ಬುಡನ್ ಗಿರಿ ಭಾಗದಲ್ಲಿ ಗುಡುಗು-ಮಿಂಚು ಮತ್ತು ಗಾಳಿ ಸಹಿತ ಭಾರಿ ಮಳೆಯಾಗಿದೆ.

ಮುಖ್ಯಾಂಶಗಳು

  • ಚಿಕ್ಕಮಗಳೂರು ಜಿಲ್ಲೆಯ ಹಲವು ಭಾಗಗಳಲ್ಲಿ ವರುಣಾರ್ಭಟ
  • ಗಾಳಿ ಸಹಿತ ಭಾರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತ
  • ಮನೆಗಳಿಗೆ ಚರಂಡಿ ನೀರು ನುಗ್ಗಿ ಸಾಲು ಸಾಲು ಅವಾಂತರ

ಮನೆಗಳಿಗೆ ನುಗ್ಗಿದ ಚರಂಡಿ ನೀರು

ಧಾರಾಕಾರವಾಗಿ ಸುರಿದ ಗಾಳಿ ಮಳೆಗೆ ಚಿಕ್ಕಮಗಳೂರು ನಗರದಲ್ಲಿ ಸಾಲು ಸಾಲು ಅವಾಂತರಗಳು ನಡೆದಿದೆ. ನಗರದ ಹಳೆ ಉಪ್ಪಳ್ಳಿ, ಗೌರಿ ಕಾಲುವೆ ಬಡಾವಣೆಯ ಹತ್ತಾರು ಮನೆಗಳಿಗೆ ಚರಂಡಿ ನೀರು ನುಗ್ಗಿದ ಪರಿಣಾಮ ನಿವಾಸಿಗಳು ಪರದಾಟ ನಡೆಸಿದ್ದಾರೆ. ರಾಜಕಾಲುವೆಯದುರಾವಸ್ಥೆಯಿಂದಲೇ ಮನೆಗಳಿಗೆ ಮಳೆ ನೀರು ನುಗ್ಗಿದೆ. ಪರಿಣಾಮ ಮನೆಯಲ್ಲಿದ್ದ ಅಗತ್ಯ ವಸ್ತುಗಳು, ವಸ್ತ್ರಗಳು ನೀರುಪಾಲಾಗಿವೆ ಎಂದು ಸ್ಥಳೀಯರು ಅಲವತ್ತುಕೊಂಡಿದ್ದಾರೆ.

ಇದನ್ನೂ ಓದಿ: ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಮುಳುಗಿದ ರೈಲ್ವೇ ಅಂಡರ್​​ ಪಾಸ್​​, ಹೊಳೆಯಂತಾದ ರಸ್ತೆಗಳು

ರಸ್ತೆಗೆ ಅಡ್ಡಲಾಗಿ ಬಿದ್ದ ಮರ: ಸಂಚಾರ ಅಸ್ತವ್ಯಸ್ತ

Chikkamagaluru Rain Effect

ರಸ್ತೆ ಮೇಲೆ ಉರುಳಿರುವ ಬೃಹತ್​​ ಮರ

ಇತ್ತ ಚಿಕ್ಕಮಗಳೂರು ತಾಲೂಕಿನ ಹೆಬ್ಬಳ್ಳಿ ಬಳಿ ಗಾಳಿ ಮಳೆಗೆ ರಸ್ತೆಗೆ ಅಡ್ಡಲಾಗಿ ಬೃಹತ್​​ ಮರವೊಂದು ಬಿದ್ದ ಪರಿಣಾಮ ಚಿಕ್ಕಮಗಳೂರು-ಶಾಂತವೇರಿ, ಲಿಂಗದಹಳ್ಳಿ ರಸ್ತೆ ಸಂಚಾರ ಬಂದ್ ಆಗಿದೆ. ಚಿಕ್ಕಮಗಳೂರು-ತರೀಕೆರೆ ರಸ್ತೆಯಲ್ಲಿ ಭಾರಿ ಟ್ರಾಫಿಕ್​​ ಜಾಮ್​​ ಆಗಿದ್ದು, ವಾಹನಗಳು ರಸ್ತೆಯಲ್ಲಿ ನಿಂತಲ್ಲೇ ನಿಂತ ದೃಶ್ಯಗಳು ಕಂಡುಬಂದಿವೆ. ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ
ಬಿಜೆಪಿ ಹೈಕಮಾಂಡ್​ಗೆ ಬ್ಲಾಕ್​ಮೇಲ್ ತಂತ್ರ ಗೊತ್ತಾಗಿದೆ: ಯತ್ನಾಳ್
ಬಿಜೆಪಿ ಹೈಕಮಾಂಡ್​ಗೆ ಬ್ಲಾಕ್​ಮೇಲ್ ತಂತ್ರ ಗೊತ್ತಾಗಿದೆ: ಯತ್ನಾಳ್
ಗುರು ಸಂಚಾರ ಧನುಸ್ಸು ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಧನುಸ್ಸು ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ: ಮುಸ್ಲಿಮರಿಂದ ಪ್ರತಿಭಟನೆ
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ: ಮುಸ್ಲಿಮರಿಂದ ಪ್ರತಿಭಟನೆ
ಗುರು ಸಂಚಾರದಿಂದ ಈ ಒಂದು ರಾಶಿಗೆ ಡಬಲ್ ಧಮಾಕ!
ಗುರು ಸಂಚಾರದಿಂದ ಈ ಒಂದು ರಾಶಿಗೆ ಡಬಲ್ ಧಮಾಕ!