AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯೋ ವಿಧಿಯೇ..ಸಮವಸ್ತ್ರ ಧರಿಸದೇ ಶಾಲೆಗೆ ಹೋದ್ರೆ ಬೈಯುತ್ತಾರೆಂದು ಜೀವ ಕಳೆದುಕೊಂಡ ವಿದ್ಯಾರ್ಥಿನಿ

ಶಾಲೆಗಳು ಆರಂಭವಾಗಿದ್ದು, ಮಕ್ಕಳು ಬೇಸಿಗೆ ರಜೆ ಮುಗಿಸಿಕೊಂಡು ಶಾಲೆಗಳತ್ತ ತೆರಳುತ್ತಿದ್ದಾರೆ. ಮಕ್ಕಳು ಸಮವಸ್ತ್ರ ಧರಿಸಿಕೊಂಡು ಶಾಲೆಗೆ ಹೋಗುವುದನ್ನು ಕಂಡು ಪೋಷಕರು ಸಂತಸಗೊಳ್ಳುತ್ತಾರೆ. ಆದರೆ, ಸಮವಸ್ತ್ರ ವಿಚಾರಕ್ಕೆನೇ ಚಿಕ್ಕಮಗಳೂರಿನ ಓರ್ವ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಹಳ್ಳಿಯಲ್ಲಿ ನಡೆದಿದೆ. ಲಿಂಗದಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಅಯ್ಯೋ ವಿಧಿಯೇ..ಸಮವಸ್ತ್ರ ಧರಿಸದೇ ಶಾಲೆಗೆ ಹೋದ್ರೆ ಬೈಯುತ್ತಾರೆಂದು ಜೀವ ಕಳೆದುಕೊಂಡ ವಿದ್ಯಾರ್ಥಿನಿ
ವಿದ್ಯಾರ್ಥಿನಿ ನಿವೇದಿತಾ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: ವಿವೇಕ ಬಿರಾದಾರ|

Updated on:Jun 24, 2025 | 7:54 PM

Share

ಚಿಕ್ಕಮಗಳೂರು, ಜೂನ್​ 24: ವಿದ್ಯಾರ್ಥಿಗಳು (Students) ಶಿಸ್ತಿನಿಂದ ಸಮವಸ್ತ್ರ ಧರಿಸಿಕೊಂಡು ಶಾಲೆಗೆ ಬರಲಿ ಮತ್ತು ಅವರಲ್ಲಿ ಏಕತೆ ಮನೋಭಾವ ಮೂಡಲಿ ಎಂದು ಸರ್ಕಾರಿ ಮತ್ತು ಖಾಸಗಿ ಶಾಲೆ-ಕಾಲೇಜುಗಳಲ್ಲಿ ಸಮವಸ್ತ್ರ (Uniform) ಕಡ್ಡಾಯ ಮಾಡಲಾಗಿದೆ. ಇದೀಗ, ಶಾಲೆಗಳು ಆರಂಭವಾಗಿದ್ದು, ಸಮವಸ್ತ್ರ ಧರಿಸಿಕೊಂಡು ನಲಿಯುತ್ತ ವಿದ್ಯಾರ್ಥಿಗಳು ಶಾಲೆಗೆ ಹೋಗಲಿ ಎಂಬುವುದು ಎಲ್ಲರ ಆಶಯವಾಗಿರುತ್ತದೆ. ಆದರೆ, ಸಮವಸ್ತ್ರ ಧರಿಸುವ ವಿಚಾರಕ್ಕೆನೇ ಚಿಕ್ಕಮಗಳೂರಿನ (Chikkamagaluru) ಓರ್ವ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವುದು ಮಾತ್ರ ದುರ್ದೈವದ ಸಂಗತಿ.

ಸಮವಸ್ತ್ರ ಧರಿಸದೇ ಶಾಲೆಗೆ ಹೋದರೆ ಶಿಕ್ಷಕರು ಬೈಯುತ್ತಾರೆ ಎಂದು ಬಾಲಕಿ ಆತ್ಮಹತ್ಯೆ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಹಳ್ಳಿಯಲ್ಲಿ ನಡೆದಿದೆ. ಲಿಂಗದಹಳ್ಳಿ ಗ್ರಾಮದ 13 ವರ್ಷದ ನಿವೇದಿತಾ ಮೃತ ದುರ್ದೈವಿ.

ಇದನ್ನೂ ಓದಿ: ರಜೆ ಮಜಾ ಮಾಡಲು ಹೋಗಿ ಸೈಬರ್ ವಂಚಕರ ಬಲೆಗೆ ಬಿದ್ದ: ಸಿಕ್ಕ ಸಿಕ್ಕ ಲಿಂಕ್​ ಕ್ಲಿಕ್​ ಮಾಡುವರು ಈ ಸುದ್ದಿ ಓದಲೇಬೇಕು

ಇದನ್ನೂ ಓದಿ
Image
ಬೆಂಗಳೂರಿನ 17 ಕ್ಕೂ ಹೆಚ್ಚು ಡ್ಯಾನ್ಸ್ ಬಾರ್​ಗಳ ಮೇಲೆ ಪೊಲೀಸರಿಂದ ದಾಳಿ
Image
ಪೊಲೀಸರಿಂದ ತಪ್ಪಿಸಿಕೊಳ್ಳಲು ಸೀರೆಯುಟ್ಟು ಮಹಿಳೆಯ ವೇಷ ಧರಿಸಿದ ಆರೋಪಿ!
Image
ಮಡಿಕೇರಿಯಲ್ಲಿ ಬರೋಬ್ಬರಿ 9 ಪೊಲೀಸರ ಮನೆಗಳಲ್ಲೇ ಕಳ್ಳತನ!
Image
ಕೌಟುಂಬಿಕ ಕಲಹಕ್ಕೆ ಯುವತಿ ಆತ್ಮಹತ್ಯೆ: 5 ಲಕ್ಷ ರೂ ಪರಿಹಾರ ಪಡೆದ ಕುಟುಂಬ

ಶಿಕ್ಷಕರು ವಿದ್ಯಾರ್ಥಿನಿಗೆ ಶಾಲಾ ಸಮವಸ್ತ್ರ ವಿತರಿಸಿದ್ದರು. ಸೋಮವಾರದಿಂದ ಸಮವಸ್ತ್ರ ‌ಧರಿಸಿಕೊಂಡು ಬರುವಂತೆ ಹೇಳಿದ್ದರು. ಸಮವಸ್ತ್ರ ಹೊಲಿಯಲು ಪೋಷಕರು ಟೈಲರ್​ಗೆ ನೀಡಿದ್ದರು. ಆದರೆ, ಟೈಲರ್​ ಇನ್ನೂ ಸಮವಸ್ತ್ರ ಹೊಲಿದಿರಲಿಲ್ಲ. ಸಮವಸ್ತ್ರ ಧರಿಸದಿದೆ ಶಾಲೆಗೆ ಹೋದರೆ ಶಿಕ್ಷಕರು ಹೋಡೆಯುತ್ತಾರೆಂದು ಬಾಲಕಿ ಮನೆಯಲ್ಲಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಆಟವಾಡುವಾಗ ಮೂರ್ಛೆ ಬಂದು ವಿದ್ಯಾರ್ಥಿನಿ ಸಾವು

ಬೆಳಗಾವಿ: ಆಟವಾಡುವಾಗ ಮೂರ್ಛೆ ಬಂದು ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. 15 ವರ್ಷದ ಬಾಲಕಿ ರೇಣುಕಾ ಶಾಲೆಯಲ್ಲಿ ಆಟವಾಡುವ ಸಂದರ್ಭದಲ್ಲಿ ಕುಸಿದು ಬಿದಿದ್ದಾಳೆ. ತಕ್ಷಣ ಆಸ್ಪತ್ರೆಗೆ ತೆಗೆದುಕೊಂಡು ಬರುವಾಗ ಮಾರ್ಗ ಮಧ್ಯದಲ್ಲಿ ವಿದ್ಯಾರ್ಥಿನಿ ರೇಣುಕಾ ಮೃತಪಟ್ಟಿದ್ದಾಳೆ. ವಿದ್ಯಾರ್ಥಿನಿ ರೇಣುಕಾ ಶವವನ್ನು ಅಥಣಿ ತಾಲೂಕು ಆಸ್ಪತ್ರೆ ಶವಾಗಾರಕ್ಕೆ ತರಲಾಗಿದೆ. ರೇಣುಕಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಲು ಬರಲ್ಲ. ಆಟವಾಡುವಾಗ ರೇಣುಕಾಗೆ ಮೂರ್ಛೆ ಬಂದಿದೆ. ಮರಣೋತ್ತರ ಪರೀಕ್ಷೆ ಬಳಿಕ ಸಾವಿಗೆ ನಿಖರ ಕಾರಣ ಗೊತ್ತಾಗಲಿದೆ ಎಂದು ಡಿಎಚ್ಒ ಈಶ್ವರ್ ಗಡಾದ್ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:01 pm, Tue, 24 June 25

Follow Us
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ