AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನಗೆ ನ್ಯಾಯ ಬೇಕು’: ಮತ್ತೊಂದು ಮದುವೆಗೆ ಸಿದ್ಧನಾಗಿದ್ದ ಶಿಕ್ಷಕನಿಗೆ ಶಾಕ್​​​ ಕೊಟ್ಟ ಯುವತಿ

ಚಿಕ್ಕಮಗಳೂರಿನಲ್ಲಿ ಶಿಕ್ಷಕ ಶರತ್ ತನ್ನ ಲಿವಿಂಗ್ ರಿಲೇಷನ್‌ಶಿಪ್‌ ಪಾರ್ಟ್‌ನರ್ ಅಶ್ವಿನಿಗೆ ಮೋಸ ಮಾಡಿ, ಬೇರೊಬ್ಬರನ್ನು ಮದುವೆಯಾಗಲು ಮುಂದಾಗಿದ್ದಾನೆ. ಮೊದಲ ಪತ್ನಿಗೆ ವಿಚ್ಛೇದನದ ಬಳಿಕ ಅಶ್ವಿನಿಯನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದ ಶರತ್, 4 ವರ್ಷಗಳ ಸಹಬಾಳ್ವೆಯ ನಂತರ ಕೈಕೊಟ್ಟಿದ್ದಾನೆ. ನ್ಯಾಯಕ್ಕಾಗಿ ಅಶ್ವಿನಿ ಪ್ರತಿಭಟನೆ ನಡೆಸಿ, ಪೊಲೀಸ್ ದೂರು ದಾಖಲಿಸಲಾಗಿದೆ.

'ನನಗೆ ನ್ಯಾಯ ಬೇಕು': ಮತ್ತೊಂದು ಮದುವೆಗೆ ಸಿದ್ಧನಾಗಿದ್ದ ಶಿಕ್ಷಕನಿಗೆ ಶಾಕ್​​​ ಕೊಟ್ಟ ಯುವತಿ
ಶಿಕ್ಷಕನ ಲವ್ ಸ್ಟೋರಿ
ಅಕ್ಷಯ್​ ಪಲ್ಲಮಜಲು​​
|

Updated on: Dec 13, 2025 | 9:49 PM

Share

ಚಿಕ್ಕಮಗಳೂರು, ಡಿ.13: ರಾಜ್ಯದಲ್ಲಿ ಅಕ್ರಮ ಸಂಬಂಧ, ಗುಟ್ಟಾಗಿ ಎರಡನೇ ಮದುವೆ ಆಗುತ್ತಿರುವ ಘಟನೆಗಳು ಹೆಚ್ಚಾಗಿದೆ. ಇದರ ಜತೆಗೆ ಪ್ರೀತಿಸಿ, ದೈಹಿಕ ಸಂಪರ್ಕವನ್ನು ನಡೆಸಿ, ಮೋಸ ಮಾಡುತ್ತಿರುವ ಪ್ರಕರಣಗಳು ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದೀಗ ಚಿಕ್ಕಮಗಳೂರಿನ (Chikkamagaluru) ಕಲ್ಯಾಣನಗರದಲ್ಲಿ ಶಿಕ್ಷಕನೊಬ್ಬ ಮದುವೆ ಆಗ್ತೇನೆ ಎಂದು ಹೇಳಿ ನಂಬಿಸಿ ಕೈಕೊಟ್ಟ ಘಟನೆಯೊಂದು ಬೆಳಕಿಗೆ ಬಂದಿದೆ. ಇಬ್ಬರು ಕೂಡ ವೃತ್ತಿಯಲ್ಲಿ ಶಿಕ್ಷಕರಾಗಿದ್ದು, ಒಂದೇ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವೇಳೆ ಇಬ್ಬರ ನಡುವೆ ಸ್ನೇಹ ಬೆಳೆದಿದೆ. ಕಾಲೇಜು ಮುಗಿದ ನಂತರವೂ ಇಬ್ಬರು ಸಂಪರ್ಕದಲ್ಲಿದ್ದರು. ಈ ವೇಳೆ ಶರತ್​​ ಮದುವೆ ಆಗಿ, ಪತ್ನಿಯಿಂದ ವಿಚ್ಛೇಧನ ಪಡೆದಿದ್ದ. ಇದರ ನಡುವೆ ಅಶ್ವಿನಿ ಜತೆಗೆ ಪ್ರೀತಿ ನಿವೇದನೆ ಮಾಡಿಕೊಂಡು ಮದುವೆ ಆಗುವೆ ಎಂದು ಭರವಸೆ ನೀಡಿದ್ದಾನೆ. ಇಬ್ಬರು 4 ವರ್ಷದಿಂದ ಪರಸ್ವರ ಲಿವಿಂಗ್ ರಿಲೇಷನ್​ಶಿಪ್​ನಲ್ಲಿದ್ದರು. ಇದೀಗ ಅಶ್ವಿನಿಗೂ ಕೈಕೊಟ್ಟು ಬೇರೊಂದು ಯುವತಿಯನ್ನು ಮದುವೆಯಾಗಲು ಮುಂದಾಗಿದ್ದಾನೆ.

ಶರತ್​​ ನಾಳೆ ಅದ್ದೂರಿಯಾಗಿ (ಡಿ.14) ಮದುವೆಯಾಗಲು ತಯಾರಿ ಮಾಡಿಕೊಂಡಿದ್ದಾನೆ. ಮನೆಯ ಮುಂದೆ ಚಪ್ಪರ ಹಾಕಿಕೊಂಡು ಸಂಭ್ರಮದಲ್ಲಿದ್ದ ಶರತ್​ಗೆ ಅಶ್ವಿನಿ ಇದೀಗ ಬಿಗ್​ ಶಾಕ್​​ ನೀಡಿದ್ದಾಳೆ. ತನ್ನ ಪರ ವಕೀಲರನ್ನು ಶರತ್​ ಮನೆ ಬಳಿ ಕರೆದುಕೊಂಡು ಬಂದು ಶರತ್​​ಗೆ ಚಳಿಬಿಡಿಸಲು ಮುಂದಾಗಿದ್ದಾಳೆ. ಆದರೆ ಅಶ್ವಿನಿ ಮನೆ ಬಳಿ ಬರುತ್ತಿದ್ದಂತೆ ಶರತ್​ ಮನೆಯಿಂದ ಪರಾರಿಯಾಗಿದ್ದಾನೆ. ತನಗೆ ನ್ಯಾಯ ಸಿಗುವವರೆಗೆ ಇಲ್ಲಿಂದ ಹೋಗಲ್ಲ ಎಂದು ಹಠ ಹಿಡಿದು ಮನೆ ಮುಂದೆ ಪ್ರತಿಭಟನೆ ಮಾಡಿದ್ದಾಳೆ. ಅಶ್ವಿನಿ, ಶರತ್ ವಿರುದ್ಧ 8 ತಿಂಗಳ ಹಿಂದೆ ಆಲ್ದೂರು ಠಾಣೆಯಲ್ಲಿ ದೂರು ನೀಡಿದ್ದಾಳೆ. ಮೂಲತಃ ಹಾಸನ ಜಿಲ್ಲೆಯ ಬೇಲೂರಿನವಳಾಗಿದ್ದು ಖಾಸಗಿ ಶಾಲೆಯ ಶಿಕ್ಷಕಿಯಾಗಿ ವೃತ್ತಿ ಮಾಡುತ್ತಿದ್ದಾಳೆ. ಶರತ್​​ ಮಾಡಿದ ಮೋಸದ ಬಗ್ಗೆ ತಮ್ಮ ಸ್ನೇಹಿತರ ಮುಂದೆಯೂ ಹೇಳಿಕೊಂಡಿದ್ದಳು. ಶರತ್​​ ಬೇರೊಂದು ಯುವತಿಯನ್ನು ಮದುವೆ ಆಗುತ್ತಿದ್ದಾನೆ ಎಂಬ ಸುದ್ದಿ ಕೇಳಿ ಅವನ ಮನೆ ಮುಂದೆ ಬಂದು ಪ್ರತಿಭಟನೆ ಮಾಡಿದ್ದಾಳೆ. ಇದೀಗ ಶರತ್​ ಮೇಲೆ ಎಫ್​​​ಐಆರ್​​​ ದಾಖಲಾಗಿದೆ.

ಇದನ್ನೂ ಓದಿ: ಮಾಜಿ ಬಿಗ್ ಬಾಸ್ ಸ್ಪರ್ಧಿ, ನಿರೂಪಕಿಯ ಮಾಜಿ ಪತಿ ಪಬ್​​ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ವಿಡಿಯೋ ವೈರಲ್

ಇನ್ನು ಈ ಬಗ್ಗೆ ಅಶ್ವಿನಿ ಟಿವಿ9 ಮುಂದೆ ಮಾತನಾಡಿದ್ದಾಳೆ. “ನನ್ನ ಪ್ರೇಮಿ ಬೇರೊಂದು ಮದುವೆ ಆಗುತ್ತಿದ್ದಾನೆ ಎಂಬ ವಿಷಯ ತಿಳಿದು ಅವನ ಮನೆ ಮುಂದೆ ಹೋಗಿದ್ದೇನೆ. ಆದರೆ ಇದೀಗ ಅವನು ಮನೆಯಲ್ಲಿ ಇಲ್ಲ. ನಾಳೆ ನಡೆಯುವ ಮದುವೆ ನಿಲ್ಲಿಸುವಂತೆ ಚಿಕ್ಕಮಗಳೂರು ಎಸ್ಪಿ ಕಚೇರಿಗೆ ದೂರು ನೀಡಿದ್ದೇನೆ. ಮೂರು ವರ್ಷಗಳ ಹಿಂದೆ ಮೊದಲ ಹೆಂಡತಿಗೆ ವಿಚ್ಛೇದನದ ಬಳಿಕ ನನ್ನನ್ನು ಪ್ರೀತಿಸುತ್ತಿದ್ದೇನೆ. ಮದುವೆಯೂ ಆಗುತ್ತೇನೆ ಎಂದು ಹೇಳಿದ್ದಾನೆ. ಇದನ್ನು ನಂಬಿ ತುಂಬಾ ಹತ್ತಿರವಾಗಿದ್ದೆ, ದೈಹಿಕ ಸಂಪರ್ಕ ಕೂಡ ನಡೆಸಿದ್ದೇನೆ. ನನಗೆ ನ್ಯಾಯ ಬೇಕು, ನನ್ನೊಂದಿಗೆ ಶರತ್ ಮದುವೆಯಾಗಬೇಕು” ಎಂದು ಹೇಳಿದ್ದಾಳೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?