AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಬರಿದಾಗುತ್ತಿದೆ ತುಂಗಾ ನದಿ; ಶೃಂಗೇರಿ ಮಠಕ್ಕೂ ತಟ್ಟಲಿದೆ ನೀರಿನ ಬಿಸಿ

ಇಡೀ ರಾಜ್ಯವೇ ಹನಿ ನೀರಿಗೂ ಹಾಹಾಕಾರ ಪಡುತ್ತಿದೆ. ಇತ್ತ ಮಳೆಯ ನಾಡೆಂದೇ ಕರೆಸಿಕೊಳ್ಳೋ ಚಿಕ್ಕಮಗಳೂರಿನ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಹುಟ್ಟಿ ಹರಿದು ಲಕ್ಷಾಂತರ ಜನರ ಜೀವನಾಡಿ ಎಂದು ಕರೆಸಿಕೊಳ್ಳುವ ತುಂಗಾ ನದಿ ಕೂಡ ಬರಿದಾಗಿದೆ. ಇದರ ಬಿಸಿ ಶೃಂಗೇರಿ ಮಠಕ್ಕೂ ತಟ್ಟಲಿದೆ. 

ಚಿಕ್ಕಮಗಳೂರು: ಬರಿದಾಗುತ್ತಿದೆ ತುಂಗಾ ನದಿ; ಶೃಂಗೇರಿ ಮಠಕ್ಕೂ ತಟ್ಟಲಿದೆ ನೀರಿನ ಬಿಸಿ
ಚಿಕ್ಕಮಗಳೂರು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಕಿರಣ್ ಹನುಮಂತ್​ ಮಾದಾರ್|

Updated on: Mar 13, 2024 | 8:49 PM

Share

ಚಿಕ್ಕಮಗಳೂರು, ಮಾ.13: ಈ ಬಾರಿ ವಾಡಿಕೆಯಷ್ಟು ಮಳೆಯಾಗದ ಹಿನ್ನೆಲೆಯಲ್ಲಿ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಬೇಸಿಗೆ ಆರಂಭದ ಜೊತೆ ಜೊತೆಗೇ ಚಿಕ್ಕಮಗಳೂರು(Chikkamagaluru) ಜಿಲ್ಲೆಯ ಶೃಂಗೇರಿ ಸೇರಿದಂತೆ ಲಕ್ಷಾಂತರ ಜನರು ಕುಡಿಯುವ ನೀರಿಗೆ ಹಾಹಾಕಾರ ಪಡುವ ಆತಂಕ ಎದುರಾಗಿದೆ. ಅದರಲ್ಲೂ ಪ್ರತಿ ವರ್ಷ ಮಳೆಗಾಲದಲ್ಲಿ ಮೈದುಂಬಿ ಹರಿದು ಹಲವಾರು ಅವಾಂತರ ಸೃಷ್ಟಿಸುತ್ತಿದ್ದ ತುಂಗಾ‌ನದಿ ಹರಿವಿನ ಪ್ರಮಾಣ ಸಂಪೂರ್ಣವಾಗಿ ಕಡಿಮೆಯಾಗಿ ಬತ್ತಿಹೋಗುತ್ತಿದೆ.

ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಈ ಬಾರಿ ವಾಡಿಕೆಯಂತೆ ಮಳೆಯಾಗಿಲ್ಲ. ಆರಂಭದ ಕೆಲ ದಿನಗಳಲ್ಲಿ ಮಳೆ ಅಬ್ಬರಿಸಿ ಬೊಬಿರಿಯಿತಾದರೂ ಅಗತ್ಯ ಸಮಯದಲ್ಲಿ ಮಳೆ ಕೈಕೊಟ್ಟಿದೆ. ಇದ್ರಿಂದಾಗಿ ಮಲೆನಾಡಿನ ಶೃಂಗೇರಿ, ಎನ್.ಆರ್. ಪುರ, ಕೊಪ್ಪ ಭಾಗದಲ್ಲಿನ ಜಲ ಮೂಲಗಳೆಲ್ಲ ಸಂಪೂರ್ಣವಾಗಿ ಬರಿದಾಗುತ್ತಿವೆ. ಅದರ ಜೊತೆಗೆ ವರ್ಷಪೂರ್ತಿ ಮೈದುಂಬಿ ಹರಿಯುತ್ತಿದ್ದ ತುಂಗಾ ನದಿ ಕೂಡ ಬರಿದಾಗುತ್ತಿದ್ದು, ಇನ್ನೇನು ಕೆಲವೇ ದಿನದಲ್ಲಿ ಮಲೆನಾಡಿನಲ್ಲೂ ಜಲಕ್ಷಾಮ‌ ತಲೆದೋರಲಿದ್ದು. ಮಲೆನಾಡಿಗರೂ ಸಹಾ ಹನಿ‌ಹನಿ‌ ನೀರಿಗೂ ಹಾಹಾಕಾರ ಪಡೋ ಆತಂಕ ಎದುರಾಗಿದೆ.

ಇದನ್ನೂ ಓದಿ:ಬನ್ನೇರುಘಟ್ಟ ಉದ್ಯಾನವನದಲ್ಲೂ ನೀರಿಗಾಗಿ ಹಾಹಾಕಾರ: ಬತ್ತಿದ ಬೋರ್​​ವೆಲ್​ಗಳು, ಟ್ಯಾಂಕರ್​ ಮೂಲಕ ನೀರು ಪೂರೈಕೆ

ಶೃಂಗೇರಿ ಶ್ರೀ ಮಠ‌, ಶಾರದಾಂಬೆಯ ಸನ್ನಿದಿ ಸೇರಿದಂತೆ ಕೃಷಿ‌ ಹಾಗೂ ಲಕ್ಷಾಂತರ ಜನರ ಜೀವನಾಡಿಯಾಗಿರೋ ತುಂಗಾ‌ ನದಿ ವರ್ಷಪೂರ್ತಿ ಮೈದುಂಬಿ ಹರಿಯುತ್ತಿತ್ತು.. ಆದ್ರೆ ಈ ಬಾರಿ‌‌ ಸರಿಯಾಗಿ ಮಳೆಯಾಗದ ತುಂಗಾ ನದಿಯ ಹರಿವಿನ ಪ್ರಮಾಣದಲ್ಲಿ ಕಡಿಮೆಯಾಗ್ತಿದ್ದು. ಶೃಂಗೇರಿ‌ ಶ್ರೀ ಮಠಕ್ಕೂ ಕೂಡಾ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಲಕ್ಷಣಗಳು. ಕಾಣಿಸಿಕೊಳ್ಳಲಾರಂಭಿಸಿವೆ. ಅಷ್ಟೇ ಅಲ್ಲದೆ ತುಂಗಾ ನದಿಯನ್ನೇ ಅವಲಂಬಿಸಿರೋ ರೈತರೂ ಕೂಡಾ ಬೇಸಿಗೆ ದಿನಗಳಲ್ಲಿ‌ ಕೃಷಿ ಚಟುವಟಿಕೆಗಳಿಗೆ ನೀರಿನ ಅಭಾವ ಎದುರಾಗುವ ಲಕ್ಷಣಗಳು‌ ಕಂಡು ಬರುತ್ತಿವೆ.

V/3 :ಈ ಬಾರಿ ಮಳೆಯಾಗದೆ ಶೃಂಗೇರಿ ಮಠಕ್ಕೆ ಹರಿದುಬರೋ‌ ಲಕ್ಷಾಂತರ ಭಕ್ತರು, ಪ್ರವಾಸಿಗರ ಜೊತೆ ರೈತರು ಹಾಗೂ ಶ್ರೀ ಶೃಂಗೇರಿಯ ಶ್ರೀ ಮಠಕ್ಕೂ ಜಲಕ್ಷಾಮ ತಲೆದೋರೋ ಲಕ್ಷಣಗಳು ಕಂಡುಬರುತ್ತಿದೆ. ಒಟ್ಟಾರೆಯಾಗಿ ಈ ಬಾರಿ ವಾಡಿಕೆಯ ಮಳೆಯಾಗದೆ ತುಂಗಾ‌ನದಿಯ ಹರಿವಿನಲ್ಲಿ ಕಡಿಮೆಯಾಗ್ತಿರೋದ್ರಿಂದ ಕೇವಲ‌ ಚಿಕ್ಕಮಗಳೂರು ಮಾತ್ರವಲ್ಲದೆ ಅಕ್ಕಪಕ್ಕದ ಜಿಲ್ಲೆಗಳಲ್ಲೂ ನೀರಿನ ಅಭಾವ ಸೃಷ್ಟಿಯಾಗೋ ಆತಂಕ‌ ಎದುರಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ