AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಬರಿದಾಗುತ್ತಿದೆ ತುಂಗಾ ನದಿ; ಶೃಂಗೇರಿ ಮಠಕ್ಕೂ ತಟ್ಟಲಿದೆ ನೀರಿನ ಬಿಸಿ

ಇಡೀ ರಾಜ್ಯವೇ ಹನಿ ನೀರಿಗೂ ಹಾಹಾಕಾರ ಪಡುತ್ತಿದೆ. ಇತ್ತ ಮಳೆಯ ನಾಡೆಂದೇ ಕರೆಸಿಕೊಳ್ಳೋ ಚಿಕ್ಕಮಗಳೂರಿನ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಹುಟ್ಟಿ ಹರಿದು ಲಕ್ಷಾಂತರ ಜನರ ಜೀವನಾಡಿ ಎಂದು ಕರೆಸಿಕೊಳ್ಳುವ ತುಂಗಾ ನದಿ ಕೂಡ ಬರಿದಾಗಿದೆ. ಇದರ ಬಿಸಿ ಶೃಂಗೇರಿ ಮಠಕ್ಕೂ ತಟ್ಟಲಿದೆ. 

ಚಿಕ್ಕಮಗಳೂರು: ಬರಿದಾಗುತ್ತಿದೆ ತುಂಗಾ ನದಿ; ಶೃಂಗೇರಿ ಮಠಕ್ಕೂ ತಟ್ಟಲಿದೆ ನೀರಿನ ಬಿಸಿ
ಚಿಕ್ಕಮಗಳೂರು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Mar 13, 2024 | 8:49 PM

Share

ಚಿಕ್ಕಮಗಳೂರು, ಮಾ.13: ಈ ಬಾರಿ ವಾಡಿಕೆಯಷ್ಟು ಮಳೆಯಾಗದ ಹಿನ್ನೆಲೆಯಲ್ಲಿ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಬೇಸಿಗೆ ಆರಂಭದ ಜೊತೆ ಜೊತೆಗೇ ಚಿಕ್ಕಮಗಳೂರು(Chikkamagaluru) ಜಿಲ್ಲೆಯ ಶೃಂಗೇರಿ ಸೇರಿದಂತೆ ಲಕ್ಷಾಂತರ ಜನರು ಕುಡಿಯುವ ನೀರಿಗೆ ಹಾಹಾಕಾರ ಪಡುವ ಆತಂಕ ಎದುರಾಗಿದೆ. ಅದರಲ್ಲೂ ಪ್ರತಿ ವರ್ಷ ಮಳೆಗಾಲದಲ್ಲಿ ಮೈದುಂಬಿ ಹರಿದು ಹಲವಾರು ಅವಾಂತರ ಸೃಷ್ಟಿಸುತ್ತಿದ್ದ ತುಂಗಾ‌ನದಿ ಹರಿವಿನ ಪ್ರಮಾಣ ಸಂಪೂರ್ಣವಾಗಿ ಕಡಿಮೆಯಾಗಿ ಬತ್ತಿಹೋಗುತ್ತಿದೆ.

ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಈ ಬಾರಿ ವಾಡಿಕೆಯಂತೆ ಮಳೆಯಾಗಿಲ್ಲ. ಆರಂಭದ ಕೆಲ ದಿನಗಳಲ್ಲಿ ಮಳೆ ಅಬ್ಬರಿಸಿ ಬೊಬಿರಿಯಿತಾದರೂ ಅಗತ್ಯ ಸಮಯದಲ್ಲಿ ಮಳೆ ಕೈಕೊಟ್ಟಿದೆ. ಇದ್ರಿಂದಾಗಿ ಮಲೆನಾಡಿನ ಶೃಂಗೇರಿ, ಎನ್.ಆರ್. ಪುರ, ಕೊಪ್ಪ ಭಾಗದಲ್ಲಿನ ಜಲ ಮೂಲಗಳೆಲ್ಲ ಸಂಪೂರ್ಣವಾಗಿ ಬರಿದಾಗುತ್ತಿವೆ. ಅದರ ಜೊತೆಗೆ ವರ್ಷಪೂರ್ತಿ ಮೈದುಂಬಿ ಹರಿಯುತ್ತಿದ್ದ ತುಂಗಾ ನದಿ ಕೂಡ ಬರಿದಾಗುತ್ತಿದ್ದು, ಇನ್ನೇನು ಕೆಲವೇ ದಿನದಲ್ಲಿ ಮಲೆನಾಡಿನಲ್ಲೂ ಜಲಕ್ಷಾಮ‌ ತಲೆದೋರಲಿದ್ದು. ಮಲೆನಾಡಿಗರೂ ಸಹಾ ಹನಿ‌ಹನಿ‌ ನೀರಿಗೂ ಹಾಹಾಕಾರ ಪಡೋ ಆತಂಕ ಎದುರಾಗಿದೆ.

ಇದನ್ನೂ ಓದಿ:ಬನ್ನೇರುಘಟ್ಟ ಉದ್ಯಾನವನದಲ್ಲೂ ನೀರಿಗಾಗಿ ಹಾಹಾಕಾರ: ಬತ್ತಿದ ಬೋರ್​​ವೆಲ್​ಗಳು, ಟ್ಯಾಂಕರ್​ ಮೂಲಕ ನೀರು ಪೂರೈಕೆ

ಶೃಂಗೇರಿ ಶ್ರೀ ಮಠ‌, ಶಾರದಾಂಬೆಯ ಸನ್ನಿದಿ ಸೇರಿದಂತೆ ಕೃಷಿ‌ ಹಾಗೂ ಲಕ್ಷಾಂತರ ಜನರ ಜೀವನಾಡಿಯಾಗಿರೋ ತುಂಗಾ‌ ನದಿ ವರ್ಷಪೂರ್ತಿ ಮೈದುಂಬಿ ಹರಿಯುತ್ತಿತ್ತು.. ಆದ್ರೆ ಈ ಬಾರಿ‌‌ ಸರಿಯಾಗಿ ಮಳೆಯಾಗದ ತುಂಗಾ ನದಿಯ ಹರಿವಿನ ಪ್ರಮಾಣದಲ್ಲಿ ಕಡಿಮೆಯಾಗ್ತಿದ್ದು. ಶೃಂಗೇರಿ‌ ಶ್ರೀ ಮಠಕ್ಕೂ ಕೂಡಾ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಲಕ್ಷಣಗಳು. ಕಾಣಿಸಿಕೊಳ್ಳಲಾರಂಭಿಸಿವೆ. ಅಷ್ಟೇ ಅಲ್ಲದೆ ತುಂಗಾ ನದಿಯನ್ನೇ ಅವಲಂಬಿಸಿರೋ ರೈತರೂ ಕೂಡಾ ಬೇಸಿಗೆ ದಿನಗಳಲ್ಲಿ‌ ಕೃಷಿ ಚಟುವಟಿಕೆಗಳಿಗೆ ನೀರಿನ ಅಭಾವ ಎದುರಾಗುವ ಲಕ್ಷಣಗಳು‌ ಕಂಡು ಬರುತ್ತಿವೆ.

V/3 :ಈ ಬಾರಿ ಮಳೆಯಾಗದೆ ಶೃಂಗೇರಿ ಮಠಕ್ಕೆ ಹರಿದುಬರೋ‌ ಲಕ್ಷಾಂತರ ಭಕ್ತರು, ಪ್ರವಾಸಿಗರ ಜೊತೆ ರೈತರು ಹಾಗೂ ಶ್ರೀ ಶೃಂಗೇರಿಯ ಶ್ರೀ ಮಠಕ್ಕೂ ಜಲಕ್ಷಾಮ ತಲೆದೋರೋ ಲಕ್ಷಣಗಳು ಕಂಡುಬರುತ್ತಿದೆ. ಒಟ್ಟಾರೆಯಾಗಿ ಈ ಬಾರಿ ವಾಡಿಕೆಯ ಮಳೆಯಾಗದೆ ತುಂಗಾ‌ನದಿಯ ಹರಿವಿನಲ್ಲಿ ಕಡಿಮೆಯಾಗ್ತಿರೋದ್ರಿಂದ ಕೇವಲ‌ ಚಿಕ್ಕಮಗಳೂರು ಮಾತ್ರವಲ್ಲದೆ ಅಕ್ಕಪಕ್ಕದ ಜಿಲ್ಲೆಗಳಲ್ಲೂ ನೀರಿನ ಅಭಾವ ಸೃಷ್ಟಿಯಾಗೋ ಆತಂಕ‌ ಎದುರಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್