AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಗಾದಿಯಂದೇ ಕಾಲಭೈರವೇಶ್ವರ ದೇಗುಲ ಮುಂದೆ ಮಾಟ ಮಂತ್ರ: ಬೆಚ್ಚಿಬಿದ್ದ ಜನರು

ರಾಜ್ಯದೆಲ್ಲೆಡೆ ಇಂದು ಹೊಸ ವರುಷ ಯುಗಾದಿ ಹಬ್ಬದ ಸಂಭ್ರಮ. ಆದರೆ ಇದೇ ದಿನದಂದು ಚಿಕ್ಕಮಗಳೂರು ಜಿಲ್ಲೆಯಲ್ಲೊಂದು ವಿಚಿತ್ರ ಘಟನೆ ನಡೆದಿದೆ. ಅದೇನೆಂದರೆ ನಿನ್ನೆ ಅಮಾವಾಸ್ಯೆ ಹಿನ್ನೆಲೆ ದೇವಾಲಯದ ಎದುರೇ ವಾಮಾಚಾರ ಮಾಡಲಾಗಿದೆ. ಸದ್ಯ ಈ ಘಟನೆ ಸ್ಥಳೀಯರಲ್ಲಿ ಸಾಕಷ್ಟು ಆಂತಕಕ್ಕೆ ಕಾರಣವಾಗಿದೆ.

ಯುಗಾದಿಯಂದೇ ಕಾಲಭೈರವೇಶ್ವರ ದೇಗುಲ ಮುಂದೆ ಮಾಟ ಮಂತ್ರ: ಬೆಚ್ಚಿಬಿದ್ದ ಜನರು
ವಾಮಾಚಾರImage Credit source: tv9 kannada
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Mar 19, 2026 | 6:27 PM

Share

ಚಿಕ್ಕಮಗಳೂರು, ಮಾರ್ಚ್​ 19: ಭದ್ರಾ ನದಿಯ ದಡದಲ್ಲಿ ನಿರಂತರ ವಾಮಾಚಾರಗಳು (black magic) ನಡೆಯುತ್ತಲೇ ಇರುತ್ತದೆ. ಆದರೆ ಈಗ ನದಿಯ ಸಮೀಪವಿರುವ ದೇವಸ್ಥಾನದ (temple) ಮುಂಭಾಗದಲ್ಲಿಯೇ ವಾಮಾಚಾರ ಮಾಡಲಾಗಿದೆ. ಅದರಲ್ಲೂ ಯುಗಾದಿಯ ಹಬ್ಬದ ದಿನವೇ ಕಿಡಿಗೇಡಿಗಳ ಕೃತ್ಯ ಕಂಡು ಸ್ಥಳೀಯರು ಆತಂಕಗೊಂಡಿದ್ದಾರೆ. ಜಿಲ್ಲೆಯ ಕಳಸ ತಾಲೂಕಿನ ಕಂಚಿನಕೆರೆ ಗ್ರಾಮದಲ್ಲಿರವ ಕಾಲಭೈರವೇಶ್ವರ ದೇಗುಲದ ಎದುರು ಘಟನೆ ನಡೆದಿದೆ.

ಯುಗಾದಿ ಹಬ್ಬದ ದಿನವೇ ದೇವಾಲಯದ ಮುಂದೆ ವಾಮಾಚಾರ

ಕಾಫಿನಾಡು ಚಿಕ್ಕಮಗಳೂರಿನ ದಕ್ಷಿಣ ಕಾಶಿ ಎಂದು ಕರೆಸಿಕೊಳ್ಳುವ ಕಳಸೇಶ್ವರ ದೇವರಿಗೆ ಹಲವು ದೇವಸ್ಥಾನಗಳು ಸೇರುತ್ತೆ. ಅದರಲ್ಲಿಯೂ ಗಿರಿಜಾ ಕಲ್ಯಾಣದ ಮೆರವಣಿಗೆ ನಡೆಯುವ ಮಾರ್ಗದಲ್ಲಿರುವ ಕಳಸ ಪಟ್ಟಣದ ಕಂಚಿಕೆರೆ ಗ್ರಾಮದ ಕಾಲಭೈರವನ ದೇವಸ್ಥಾನದ ಮುಂಭಾಗದಲ್ಲಿ ವಾಮಾಚಾರ ಮಾಡಲಾಗಿದೆ ಅದು ಹಿಂದೂಗಳ ಹೊಸ ವರ್ಷದ ಸಂಭ್ರಮದ ಯುಗಾದಿ ಹಬ್ಬದ ದಿನವೇ.

ಇದನ್ನೂ ಓದಿ: ಬೆಂಗಳೂರಿನ ಏರ್​ಪೋರ್ಟ್​ಗೆ ಬಂತು ಬೆತ್ತಲೆ ಫೋಟೋಗಳ ಪಾರ್ಸೆಲ್! ವಾಮಾಚಾರದ ಬಾಕ್ಸ್​ ನೋಡಿ ಸಿಬ್ಬಂದಿ ಶಾಕ್

ತೆಂಗಿನಕಾಯಿ, ಅರಿಶಿನ, ಕುಂಕುಮ, ನಾಣ್ಯ, ನಿಂಬೆ ಹಣ್ಣು ಸೇರಿದಂತೆ ಹಲವು ವಸ್ತುಗಳನ್ನ ಬಳಕೆ ಮಾಡಲಾಗಿದೆ. ದೇವಾಲಯದ ಮುಂಭಾಗದಲ್ಲಿ ನಾಲ್ಕು ಕಲ್ಲುಗಳನ್ನ ಇಟ್ಟು ಪೂಜೆ ಮಾಡಲಾಗಿದೆ. ಹಬ್ಬದ ದಿನ ಪೂಜಾ ಕೈಂಕರ್ಯ ಮುಗಿಸಿ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡೋಣ ಅಂತಾ ಮುಂಜಾನೆ ಬಂದ ಅರ್ಚಕರು ವಾಮಾಚಾರ ಕಂಡು ಬೆಚ್ಚಿಬಿದ್ದಿದ್ದಾರೆ.

ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಸ್ಥಳೀಯರು ಆಗ್ರಹ

ಇನ್ನು ಕಳಸ ಸಮೀಪದ ಕಂಚಿಕೆರೆ ಕಾಲಭೈರವ ದೇವಸ್ಥಾನಕ್ಕೆ ಸಹಸ್ರ ಸಹಸ್ರ ಭಕ್ತರಿದ್ದಾರೆ. ಹೊರ ಜಿಲ್ಲೆ ಸೇರಿದಂತೆ ಸ್ಥಳೀಯರು ಕಾಲಭೈರವನನ್ನ ನಂಬಿ ಪೂಜಿಸುತ್ತಾರೆ. ದೇವಸ್ಥಾನದ ಮುಂದೆಯೇ ವಾಮಾಚಾರ ಮಾಡಿರುವುದರಿಂದ ಆಕ್ರೋಶ ವ್ಯಕ್ತವಾಗಿದೆ. ಕಳೆದ ವರ್ಷವೂ ವಾಮಾಚಾರ ನಡೆದ ಕಾಲಭೈರವ ದೇವಾಲಯದಲ್ಲಿ ಕಳ್ಳತನ ನಡೆದಿತ್ತು. ಇಂದು ವಾಮಾಚಾರ ಮಾಡಲಾಗಿದೆ. ಕಳಸ ಭಾಗದಲ್ಲಿ ಹರಿಯುವ ಭದ್ರಾ ನದಿಯ ತಟದಲ್ಲಿ ವಾಮಾಚಾರದ ಪ್ರಕರಣ ನಡೆಯುತ್ತಲೇ ಇತ್ತು. ಈಗ ದೇವಸ್ಥಾನದ ಮುಂದೆಯೇ ಮಾಡಿದ್ದಾರೆ. ಅದು ಬಹುತೇಕ ತಡರಾತ್ರಿ ಎರಡರಿಂದ ಮೂರುಗಂಟೆಯೊಳಗೆ ನಡೆದಿರಬಹುದು ಎನ್ನಲಾಗುತ್ತಿದೆ. ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಕಳಸ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ: ಹುಡುಗಿಗಾಗಿ ಮುಂಡರಗಿ ಬಸ್ ನಿಲ್ದಾಣದಲ್ಲಿ ವಾಮಾಚಾರ: ಇನ್ನೂ ಈ ಕಣ್ಣಲ್ಲಿ ಏನೇನ್ ನೋಡ್ಬೇಕೋ ಮಿತ್ರೋ.

ದೇವಾಲಯದ ಮುಂಭಾಗದಲ್ಲಿ ವಾಮಾಚಾರ ಮಾಡಿರುವ ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋಶ ವ್ಯಕ್ತವಾಗಿದೆ. ಇಲ್ಲಿಯವರಾ? ಅಥವಾ ಹೊರ ಭಾಗದವರಾ? ಅನ್ನೋ ಅನುಮಾನ ಸ್ಥಳೀಯರು ಮುಂದಿಟ್ಟಿದ್ದಾರೆ. ಪವಿತ್ರ ಭದ್ರಾ ನದಿ ಹಾಗೂ ಸುತ್ತಮುತ್ತ ಇರುವ ದೇವಸ್ಥಾನಗಳಲ್ಲಿ ಇತ್ತೀಚಿನ ದಿನದಲ್ಲಿ ವಾಮಾಚಾರ ಹೆಚ್ಚಾಗಿದ್ದು, ಪೊಲೀಸ್ ಇಲಾಖೆ ಕಿಡಿಗೇಡಿಗಳ ಹೆಡೆಮುರಿ ಕಟ್ಟುವಂತೆ ಕಳಸದ ಜನರು ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ