AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿನಲ್ಲಿ ಕೇಸರಿ ಪಡೆಯ ವಿಜೃಂಭಣೆ ಕಂಡು ಕೆರಳಿದ್ದವರು ಕೋಮುಗಲಭೆಗೆ ಸಂಚು ಹೂಡಿದ್ದರು!

ಕಾಫಿನಾಡಲ್ಲಿ ಕೇಸರಿ ಕಂಡು ಕೆರಳಿದ ಮತಾಂಧರು ಚಿಕ್ಕಮಗಳೂರಿನಲ್ಲಿ ಕೋಮು ಗಲಭೆ ಸೃಷ್ಟಿಗೆ ನಡೆಸಿದ ಮಹಾ ಸಂಚು ಪೊಲೀಸ್ ತನಿಖೆಯಿಂದ ಬಯಲಾಗಿದೆ.

ಚಿಕ್ಕಮಗಳೂರಿನಲ್ಲಿ ಕೇಸರಿ ಪಡೆಯ ವಿಜೃಂಭಣೆ ಕಂಡು ಕೆರಳಿದ್ದವರು ಕೋಮುಗಲಭೆಗೆ ಸಂಚು ಹೂಡಿದ್ದರು!
ಫೋಟೋ-1: ಕೋಮು ಗಲಭೆ ಸಂಚು ರೂಪಿಸಿದ ಆರೋಪಿಗಳು ಮತ್ತು ಫೋಟೋ-2: ದತ್ತ ಜಯಂತಿಯ ಮೆರವಣಿಗೆ
TV9 Web
| Edited By: Rakesh Nayak Manchi|

Updated on:Dec 17, 2022 | 12:52 PM

Share

ಚಿಕ್ಕಮಗಳೂರು: ಕಾಫಿನಾಡಲ್ಲಿ ಕೇಸರಿ ಕಂಡು ಕೆರಳಿ ಕೋಮು ಗಲಭೆ (Communal riots) ಸೃಷ್ಟಿಸಲು ಸರ್ಕಾರಿ ಕೆಲಸವನ್ನೇ ದುರುಪಯೋಗ ಮಾಡಿಕೊಂಡು ರೂಪಿಸಿದ ಮಹಾ ಸಂಚು ಪೊಲೀಸ್ ತನಿಖೆಯಿಂದ ಬಯಲಾಗಿದೆ. ಜಿಲ್ಲಾಡಳಿತದಿಂದ ದತ್ತಪೀಠದಲ್ಲಿ ಸಿಸಿಟಿವಿಗೆ ಕ್ಲ್ಯಾಂಪ್ ಹಾಕಲು ಚಿಪ್ಸ್ ಕೆಫೆ ಸಂಸ್ಥೆಗೆ ಸೂಚನೆ ನೀಡಲಾಗಿತ್ತು. ಅದರಂತೆ ಕ್ಲ್ಯಾಂಪ್ ಹಾಕಲು ಹೋಗಿದ್ದ ದುರುಳರು ರಸ್ತೆಗೆ ಮೊಳೆಯನ್ನೂ ಸುರಿದಿದ್ದರು. ಪ್ರಕರಣ ಸಂಬಂಧ ನಿನ್ನೆ ಮೊಹಮ್ಮದ್ ಶಹಬಾಜ್ ಮತ್ತು ವಾಹಿಂ ಹುಸೇನ್ ಎಂಬ ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು ತೀವ್ರ ವಿಚಾರಣೆ ನಡೆಸಿದಾಗ ಸಂಭ್ರಮದ ದತ್ತಜಯಂತಿ (Datta Jayanthi) ಸಹಿಸಲಾಗದೆ ಈ ರೀತಿ ಮಾಡಿದ್ದೇವೆ ಎಂದು ಆರೋಪಿಗಳು ಒಪ್ಪಿಕೊಂಡಿರುವುದಾಗಿ ಎಸ್​ಪಿ ಉಮಾ ಪ್ರಶಾಂತ್ ಹೇಳಿದ್ದಾರೆ. ಅಷ್ಟೇ ಅಲ್ಲದೆ ಬಂಧಿತ ಇಬ್ಬರೂ ನಿಷೇಧಿತ ಪಿಎಫ್​ಐ (PFI) ಸಂಘಟನೆಯ ಕಾರ್ಯಕರ್ತರು ಎಂದು ಹಿಂದೂ ಸಂಘಟನೆಗಳು ಆರೋಪಿಸಿದ್ದು, ಈ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕಾಫಿನಾಡು ಚಿಕ್ಕಮಗಳೂರಿನಲ್ಲಿ ವಿಜ್ರಂಭಣೆಯಿಂದ ದತ್ತಜಯಂತಿ ಆಯೋಜಿಸಲಾಗಿತ್ತು. ಎಲ್ಲೆಡೆಯೂ ಕೇಸರಿ ಧ್ವಜಗಳು ರಾರಾಜಿಸುತ್ತಿದ್ದವು. ಕೇಸರಿ ದಂಡು ಕಂಡು ಕೆರಳಿದ್ದ ಮತಾಂಧರು, ಸರ್ಕಾರಿ ಕೆಲಸವನ್ನೇ ದುರುಪಯೋಗ ಮಾಡಿಕೊಂಡು ಮಹಾ ಸಂಚು ರೂಪಿಸಿರುವುದು ತಿಳಿದುಬಂದಿದೆ.

ಇದನ್ನೂ ಓದಿ: ಚಿಕ್ಕಮಗಳೂರು: ದತ್ತಜಯಂತಿ ಹಿನ್ನೆಲೆ ಮನೆ ಮನೆಗೆ ತೆರಳಿ ಭಿಕ್ಷಾಟನೆ ಮಾಡಿದ ಸಿ.ಟಿ. ರವಿ

ದತ್ತ ಜಯಂತಿ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದತ್ತಪೀಠದಲ್ಲಿ ಸಿಸಿಟಿವಿಗೆ ಕ್ಲ್ಯಾಂಪ್ ಹಾಕಲು ಚಿಪ್ಸ್ ಕೆಫೆ ಸಂಸ್ಥೆಗೆ ಜಿಲ್ಲಾಡಳಿತ ಸೂಚಿಸಿತ್ತು. ಅದರಂತೆ ಜಿಲ್ಲಾಡಳಿತ ಕೊಟ್ಟ ಕೆಲಸವನ್ನ ದುರುಪಯೋಗ ಮಾಡಿಕೊಂಡ ದುರುಳರು ಡಿಸೆಂಬರ್ 5ರಂದೇ ಕ್ಲ್ಯಾಂಪ್ ಹಾಕಲು ಹೋಗಿ ರಸ್ತೆಯಲ್ಲಿ ರಸ್ತೆಗೆ ಮೊಳೆಗಳನ್ನು ಸುರಿದಿದ್ದರು. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಸಂಭ್ರಮದ ದತ್ತಜಯಂತಿ ಸಹಿಸಲಾಗದೆ ಈ ರೀತಿ ಮಾಡಿದ್ದೇವೆ ಎಂದು ಒಪ್ಪಿಕೊಂಡಿದ್ದಾರೆ.

ಅಲ್ಲದೆ, ದತ್ತಜಯಂತಿ ಮೆರವಣಿಗೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಗೇಲಿ ಮಾಡಿದ್ದರು. ಆ ಸಿಟ್ಟಿನಿಂದ ಈ ಕೃತ್ಯ ಎಸಗಿಸಲು ಸಂಚು ರೂಪಿಸಿದ್ದೆವು ಎಂದು ಆರೋಪಿಗಳು ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾರೆ. ಈ ನಡುವೆ ಆರೋಪಿಗಳು ನಿಷೇಧಿತ ಪಿಎಫ್ಐ ಸಂಘಟನೆಯ ಕಾರ್ಯಕರ್ತರು ಎಂದ ಹಿಂದೂ ಸಂಘಟನೆಗಳು ಆರೋಪಿಸಿವೆ. ಹೀಗಾಗಿ ಆರೋಪಿಗಳ ಹಿನ್ನೆಲೆ ಬಗ್ಗೆ ತನಿಖೆ ಹಾಗೂ ತಾಂತ್ರಿಕ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ಜಿಲ್ಲಾ ಎಸ್​ಪಿ ಉಮಾ ಪ್ರಶಾಂತ್ ಅವರ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ.

ದತ್ತ ಜಯಂತಿ ಹಿನ್ನೆಲೆ ಚಿಕ್ಕಮಗಳೂರು ನಗರದಲ್ಲಿ ಬ್ಯಾನರ್​ಗಳನ್ನು ಹಾಕಲಾಗಿತ್ತು. ವಿಜ್ರಂಭಣೆಯಿಂದ ದತ್ತ ಜಯಂತಿ ಆಚರಿಸುವ ಯೋಜನೆಯನ್ನು ಹಾಕಿಕೊಳ್ಳಲಾಗಿತ್ತು. ಹೀಗಾಗಿ ದತ್ತ ಜಯಂತಿಯು ಚೆನ್ನಾಗಿ ನಡೆಯಬಾರದು ಎಂಬ ಉದ್ದೇಶ ಆರೋಪಿಗಳಲ್ಲಿ ಇತ್ತು. ಅಲ್ಲದೆ, ಐದು ವರ್ಷದ ಹಿಂದೆ ದತ್ತಜಯಂತಿ ಮೆರವಣಿಗೆಯಲ್ಲಿ ಟೋಪಿಯನ್ನು ನೋಡಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ್ದಾರೆ. ಇದು ನಮ್ಮ ಮನಸ್ಸಿನಲ್ಲಿ ಇತ್ತು ಎಂದು ಆರೋಪಿಗಳು ಹೇಳಿರುವುದಾಗಿ ಎಸ್​ಪಿ ಉಮಾ ಪ್ರಶಾಂತ್ ಹೇಳಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:38 am, Sat, 17 December 22

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ