AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಕ್ಕದ ಊರಿಗೆ ಪಾತ್ರೆ ಕೊಟ್ಟಿದ್ದಕ್ಕೆ ಗ್ರಾಮದ ಮುಖ್ಯಸ್ಥನಿಗೆ ದಂಡ, ಬಹಿಷ್ಕಾರ ಶಿಕ್ಷೆ!

ಪಕ್ಕದ ಊರಿನ ಮದುವೆಗೆ ಪಾತ್ರೆಗಳನ್ನು ನೀಡಿದ್ದಕ್ಕಾಗಿ ಗ್ರಾಮ ಮುಖ್ಯಸ್ಥ ಭೈರಪ್ಪ ಎಂಬುವರಿಗೆ ದಂಡ ವಿಧಿಸಿ ಗ್ರಾಮದಿಂದ ಬಹಿಷ್ಕರಿಸಲಾಗಿದೆ. ಈ ಕ್ರಮಕ್ಕೆ ವಿರೋಧಿಸಿದವರಿಗೂ ಅದೇ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಲಾಗಿದೆ. ನ್ಯಾಯಕ್ಕಾಗಿ ಭೈರಪ್ಪ ಅವರು ಜಿಲ್ಲಾಧಿಕಾರಿ ಹಾಗೂ ಪೊಲೀಸ್​ ಠಾಣೆ ಮೆಟ್ಟಿಲು ಏರಿದ್ದಾರೆ. ಗ್ರಾಮದಲ್ಲಿ ಈ ಅನಿಷ್ಠ ಪದ್ಧತಿಯನ್ನು ಖಂಡಿಸಲಾಗುತ್ತಿದೆ.

ಪಕ್ಕದ ಊರಿಗೆ ಪಾತ್ರೆ ಕೊಟ್ಟಿದ್ದಕ್ಕೆ ಗ್ರಾಮದ ಮುಖ್ಯಸ್ಥನಿಗೆ ದಂಡ, ಬಹಿಷ್ಕಾರ ಶಿಕ್ಷೆ!
ಮುಳ್ಳುವಾರೆ ಗ್ರಾಮದ ಭೈರಪ್ಪ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Apr 04, 2025 | 10:31 PM

Share

ಚಿಕ್ಕಮಗಳೂರು, ಏಪ್ರಿಲ್​ 04: ಪಕ್ಕದ ಊರಿನಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮಕ್ಕೆ ತನ್ನೂರಿನ ಊರಿನ ಪಾತ್ರೆಗಳನ್ನು ನೀಡಿದ್ದಕ್ಕೆ ಗ್ರಾಮದ ಮುಖ್ಯಸ್ಥನನ್ನೇ (Vilage Leader) ಊರವರೆಲ್ಲರೂ ಸೇರಿಕೊಂಡು ಬಹಿಷ್ಕಾರ ಹಾಕಿದ್ದಲ್ಲದೇ, ಅವರಿಗೆ 5,000 ದಂಡ ವಿಧಿಸಿರುವ ಅಮಾನವೀಯ ಘಟನೆ ಚಿಕ್ಕಮಗಳೂರು (Chikkamagaluru) ತಾಲೂಕಿನ ಮುಳ್ಳುವಾರೆ ಗ್ರಾಮದಲ್ಲಿ ನಡೆದಿದೆ.

ಮುಳ್ಳುವಾರೆ ಗ್ರಾಮದ ಭೈರಪ್ಪ ಎಂಬವುರ ಕುಟುಂಬವನ್ನು ಊರಿನಿಂದಲೇ ಬಹಿಷ್ಕಾರ ಹಾಕಲಾಗಿದೆ. ಅದಲ್ಲದೇ ಆ ಮನೆಯವರ ಜೊತೆ ಯಾರೂ ಮಾತನಾಡುವಂತಿಲ್ಲ, ಮನೆಗೆ ಯಾರೂ ಹೋಗುವಂತಿಲ್ಲ, ತೋಟದ ಕೆಲಸಕ್ಕೂ ಹೋಗುವಂತಿಲ್ಲ. ಯಾರಾದರೂ ಇದಕ್ಕೆ ವಿರೋಧವಾಗಿ ನಡೆದುಕೊಂಡರೆ ಅವರಿಗೂ 5,000 ರೂ. ದಂಡ ಎಂದು ಆದೇಶ ಹೊರಡಿಸಿದ್ದಾರೆ. ಇದೀಗ ಗ್ರಾಮಸ್ಥರಿಂದ ಬಹಿಷ್ಕಾರಕ್ಕೊಳಪಟ್ಟಿರುವ ಭೈರಪ್ಪ ಅವರು ನ್ಯಾಯಕ್ಕಾಗಿ ಜಿಲ್ಲಾಧಿಕಾರಿಗಳ ಕಚೇರಿ, ಪೋಲಿಸ್ ಠಾಣೆ ಅಲೆಯುತ್ತಿದ್ದಾರೆ.

ಭೈರಪ್ಪ ಅವರನ್ನು ಗ್ರಾಮಸ್ಥರು ಸೇರಿಕೊಂಡು ಮುಳ್ಳುವಾರೆ ಗ್ರಾಮದ ಮುಖಂಡರನ್ನಾಗಿಸಿದ್ದರು. ಮುಳ್ಳುವಾರೆ ಗ್ರಾಮದ ಪಕ್ಕದಲ್ಲಿರುವ ಕೆಸರಿಕೆ ಗ್ರಾಮದಲ್ಲಿ ಒಂದೇ ದಿನ ಮೂರು ಮದುವೆಯಾಗಿದ್ದವು. ಅಂದು ಅಡುಗೆ ಮಾಡಲು ಪಾತ್ರೆ ಸಮಸ್ಯೆಯಾಗಿದೆ ಎಂದು ಕೆಸರಿಕೆ ಗ್ರಾಮದವರು ಬಂದು ಬೈರಪ್ಪ ಅವರಿಗೆ ಪಾತ್ರೆ ಕೇಳಿದ್ದರು. ಅದಕ್ಕೆ ಭೈರಪ್ಪ ಕೊಟ್ಟಿದ್ದರು. ಗ್ರಾಮದ ಕಾರ್ಯಕ್ರಮಗಳಿಗೆ ಚುನಾವಣೆ ಸಮಯದಲ್ಲಿ ತಂದಿರುವ ಪಾತ್ರೆಗಳನ್ನು ಪಕ್ಕದ ಹಳ್ಳಿಗೆ ಕೊಟ್ಟಿದ್ದಕ್ಕೆ ಬಹಿಷ್ಕಾರ ಹಾಕಲಾಗಿದೆ. ಭೈರಪ್ಪ ಪಾತ್ರೆಗಳನ್ನು ಕೊಟ್ಟಿದ್ದು ಇದೇ ಮೊದಲಲ್ಲ. ಈ ಹಿಂದೆಯೂ ಕೊಟ್ಟಿದ್ದರು. ಈಗ ಮಾತ್ರ ಬಹಿಷ್ಕಾರ ಹಾಕಿದ್ದಾರೆ. 5,000 ಸಾವಿರ ರೂ. ದಂಡ ಹಾಕಿ, ಭೈರಪ್ಪನವರ ಮನೆಗೆ ಯಾರೂ ಹೋಗದಂತೆ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ
Image
ಹಿರಿ ಜೀವಗಳಿಗೆ  ಮರುಮದುವೆ ಮಾಡಿಸಿದ ಮೊಮ್ಮಕ್ಕಳು
Image
ರಾತ್ರಿಯ ರೊಮ್ಯಾ‌ನ್ಸ್ ವಿಡಿಯೋ ಶೇರ್‌ ಮಾಡಿದ ನವಜೋಡಿ
Image
ಕೋಪದಲ್ಲಿ ಗಂಡನ ನಾಲಿಗೆ ಕಚ್ಚಿ ತುಂಡರಿಸಿದ ಹೆಂಡತಿ
Image
ಯಾವ ಲಾಭದಾಯಕ ಉದ್ದಿಮೆಗೂ ಕಮ್ಮಿಯಿಲ್ಲ ಈ ಚೇಳು ಸಾಕಾಣಿಕೆ

ಈ ಹಿಂದೆಯೂ ಪಕ್ಕದ ಊರಿನಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಪಾತ್ರೆ ನೀಡಿದ್ದೆ. ಆದರೆ, ಅಂದು ತಪ್ಪಾಗಿರಲಿಲ್ಲ. ಈಗ ನಾನು ಪಾತ್ರೆ ನೀಡಿರುವುದು ತಪ್ಪಾಗಿದ್ದು, ಹರೀಶ್, ಪುಟ್ಟಸ್ವಾಮಿ, ಮಂಜುನಾಥ್, ಸತೀಶ್, ಗಿರೀಶ್ ಹಾಗೂ ಪುಟ್ಟಸ್ವಾಮಿ ಎಂಬ ಆರು ಜನರು ಸೇರಿಕೊಂಡು ಗ್ರಾಮಸ್ಥರ ಸಮ್ಮುಖದಲ್ಲಿ ದಂಡ ವಿಧಿಸಿ, ಬಹಿಷ್ಕಾರ ಹಾಕಿದ್ದಾರೆ ಎಂದು ಆರೋಪಿಸಿ, ಜಿಲ್ಲಾಧಿಕಾರಿ ಹಾಗೂ ಆಲ್ದೂರು ಪೊಲೀಸರಿಗೂ ದೂರು ನೀಡಿದ್ದಾರೆ. ಆದರೆ ಇಲ್ಲಿಯವರೆಗೂ ಯಾವುದೇ ಕ್ರಮವಾಗಿಲ್ಲ. ನನಗೆ ನ್ಯಾಯ ಕೊಡಿಸಿ ಎಂದು ಭೈರಪ್ಪ ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಭಾರತದ ಮೊದಲ ಕಾಫಿ ತೋಟ ತಾಣದ ಕಥೆಯನ್ನು ಹಂಚಿಕೊಂಡ ಆನಂದ್‌ ಮಹೀಂದ್ರಾ

ಒಟ್ಟಿನಲ್ಲಿ ಚಿಕ್ಕ ವಿಚಾರಕ್ಕೆ ಗ್ರಾಮಸ್ಥರು ಸೇರಿಕೊಂಡು ಗ್ರಾಮದ ಮುಖ್ಯಸ್ಥನನ್ನೇ ಗ್ರಾಮದಿಂದ ಬಹಿಷ್ಕರಿಸಿ ದಂಡ ಹಾಕಿರುವುದು ಮಾತ್ರ ವಿಪರ್ಯಾಸವಾಗಿ. ಈ ಶತಮಾನದಲ್ಲೂ ಬಹಿಷ್ಕಾರ ಎಂಬ ಅನಿಷ್ಠ ಪದ್ಧತಿ ಜೀವಂತವಾಗಿರುವುದಕ್ಕೆ ಚಿಕ್ಕಮಗಳೂರು ಸಾಕ್ಷಿಯಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ