AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು ಜನರ ನಿದ್ದೆಗೆಡಿಸಿದ್ದ ‘ಕುಳ್ಳ’ ಕೊನೆಗೂ ಲಾಕ್‌, ನಾಲ್ಕು ದಿನದ ಆಪರೇಷನ್‌ ಬಳಿಕ ಕಾಡಾನೆ ಸೆರೆ

ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಆತಂಕ ಸೃಷ್ಟಿಸಿದ್ದ ಕುಳ್ಳ ಎಂಬ ಕಾಡಾನೆಯನ್ನು ನಾಲ್ಕು ದಿನಗಳ ಕಾರ್ಯಾಚರಣೆಯ ನಂತರ ಸೆರೆಹಿಡಿಯಲಾಗಿದೆ. ಮೂಡಿಗೆರೆ ತಾಲೂಕಿನಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಭೀಮ ಮತ್ತು ಏಕಲವ್ಯ ತಂಡಗಳು ಭಾಗವಹಿಸಿದ್ದವು. ಕುಳ್ಳನ ದಾಳಿಯಿಂದ ಆತಂಕಗೊಂಡಿದ್ದ ಸ್ಥಳೀಯರು ಈಗ ನಿಟ್ಟುಸಿರು ಬಿಟ್ಟಿದ್ದಾರೆ.

ಚಿಕ್ಕಮಗಳೂರು ಜನರ ನಿದ್ದೆಗೆಡಿಸಿದ್ದ ‘ಕುಳ್ಳ’ ಕೊನೆಗೂ ಲಾಕ್‌, ನಾಲ್ಕು ದಿನದ ಆಪರೇಷನ್‌ ಬಳಿಕ ಕಾಡಾನೆ ಸೆರೆ
Wild Elephant
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಗಂಗಾಧರ​ ಬ. ಸಾಬೋಜಿ|

Updated on:May 14, 2025 | 9:36 AM

Share

ಚಿಕ್ಕಮಗಳೂರು, ಮೇ 14: ಕಾಡಾನೆಯೊಂದು ಮಲೆನಾಡು ಭಾಗದಲ್ಲಿ ಆತಂಕ ಸೃಷ್ಟಿಸಿತ್ತು. ಆ ಕಾಡಾನೆ (Wild elephant) ಕುಳ್ಳ ಅಂತಾನೇ ಫೇಮಸ್ ಆಗಿತ್ತು. ಇಂದು ಈ ಊರಲ್ಲಿ ಇದ್ದರೆ, ನಾಳೆ ಮತ್ತೊಂದು ಊರಲ್ಲಿ ಕಾಣಿಸಿಕೊಂಡು ದಾಂಧಲೆ ಮಾಡುತ್ತಿದ್ದ ಕುಳ್ಳ ಕಾಡಾನೆ ಕೊನೆಗೂ ಲಾಕ್ (Captured) ಆಗಿದೆ. ನಾಲ್ಕು ದಿನಗಳಿಂದ ನಡೆದ ಆಪರೇಷನ್ ಕೊನೆಗೂ ಯಶಸ್ವಿಯಾಗಿದ್ದೆ ರಣ ರೋಚಕ.

ಹಾಸನ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಅವನು ಕುಳ್ಳು ಅಂತಾನೆ ಖ್ಯಾತಿ ಪಡೆದಿದ್ದ ಒಂಟಿ ಸಲಗ, ಅವನು ಊರಿಗೆ ಎಂಟ್ರಿ ಕೊಟ್ರೆ ಇಡೀ ಊರಲ್ಲೇ ದಾಂಧಲೆ ಮಾಡಿ ಆತಂಕ ಸೃಷ್ಟಿ ಮಾಡುತ್ತಿದ್ದ. ಜನರು ಸಿಕ್ಕಿದ್ದರೆ ದಾಳಿಗೆ ಬರ್ತಿದ್ದ ಕುಳ್ಳ ಕೊನೆಗೂ ಲಾಕ್ ಆಗಿದ್ದಾನೆ.

ಇದನ್ನೂ ಓದಿ: ಚಿಕ್ಕಮಗಳೂರು: ಕಡೂರು ತಮ್ಮಿಹಳ್ಳಿಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿ ದುಷ್ಕರ್ಮಿಗಳು ಪರಾರಿ

ಇದನ್ನೂ ಓದಿ
Image
ಗದಗಿನಲ್ಲಿ ಫಕಿರೇಶ್ವರನ ಭಾವೈಕ್ಯತೆಯ ಜಾತ್ರೆ: ಹಿಂದೂ, ಮುಸ್ಲಿಮರು ಭಾಗಿ
Image
ಮಳೆ ಪರಿಣಾಮ ಬೆಂಗಳೂರಿನ ಹಲವೆಡೆ ಮುಂಜಾನೆಯೇ ಟ್ರಾಫಿಕ್ ಜಾಮ್: ಎಲ್ಲೆಲ್ಲಿ?
Image
ಕಡೂರು ತಮ್ಮಿಹಳ್ಳಿಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿ ದುಷ್ಕರ್ಮಿಗಳು ಪರಾರಿ
Image
ರಸ್ತೆ ಮಧ್ಯೆ ಗೋಪುರ:ದೇವಾಲಯದ ಆಡಳಿತ ಮಂಡಳಿ ವರ್ಸಸ್ ಸ್ಥಳೀಯರ ಮಧ್ಯೆ ಜಟಾಪಟಿ

ಹೌದು.. ಹಾಸನ ಜಿಲ್ಲೆಯ ಸಕಲೇಶಪುರ, ಬೇಲೂರು ಮತ್ತು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಸಂಚಾರ ಮಾಡಿ ಆತಂಕ ಸೃಷ್ಟಿ ಮಾಡಿದ ಕಾಡಾನೆ ಕುಳ್ಳ ಕೊನೆಗೂ ಲಾಕ್‌ ಆಗಿದೆ. ಕುಳ್ಳನ ಸೆರೆಗಾಗಿ ಕಳೆದ ನಾಲ್ಕು ದಿನದಿಂದ ಮೂಡಿಗೆರೆ ತಾಲೂಕಿನಲ್ಲಿ ಕಾರ್ಯಚರಣೆ ನಡೆದಿತ್ತು. ತನ್ನ ಹಿಡಿಯಲು ಭೀಮಾ ಟೀಮ್ ಎಂಟ್ರಿ ಯಾಗಿದೆ ಎಂಬ ಚಿಕ್ಕ ಸುಳಿವು ಸಿಗುತ್ತಿದ್ದಂತೆ ಎಸ್ಕೇಪ್ ಆಗಿದ್ದ ಕುಳ್ಳ ಕುಮ್ಕಿ ಆನೆ ಭೀಮ, ಏಕಲವ್ಯ ಟೀಮ್ ‌ನಡೆಸಿದ ಕಾರ್ಯಚರಣೆಯಲ್ಲಿ ಕೊನೆಗೂ ಸಿಕ್ಕಿಬಿದ್ದಿದ್ದಾನೆ.

ಮೂಡಿಗೆರೆ ತಾಲೂಕಿನಲ್ಲಿ ಕಳೆದ‌‌ ನಾಲ್ಕು ದಿನದಿಂದ ಭೀಮ ಟೀಮ್ ನೇತೃತ್ವದಲ್ಲಿ ಕುಳ್ಳ ಒಂಟಿ ಸಲಗದ‌ ಸೆರೆಗಾಗಿ ಕಾರ್ಯಚರಣೆ ನಡೆದಿತ್ತು. ನಿರಂತರವಾಗಿ ನಡೆದ ಕಾರ್ಯಚರಣೆಯಲ್ಲಿ ಕುಳ್ಳ ಮೂಡಿಗೆರೆ ತಾಲೂಕಿನ ಹಾಂದಿ ಬಳಿ‌ ಲಾಕ್‌ ಆಗಿದ್ದಾನೆ.

ಕುಳ್ಳ ಅಂತಾನೆ ಖ್ಯಾತಿ ಪಡೆದಿದ್ದ ಕಾಡಾನೆ, ಮಾನವರ ಮೇಲೆ ದಾಳಿಗೆ ಯತ್ನಿಸಿ ಆತಂಕದ ವಾತಾವರಣ ಸೃಷ್ಟಿ ಮಾಡಿದ್ದ. ಹೆಚ್ಚು ಸಂಚಾರ ಮಾಡುತ್ತಿದ್ದ ಗ್ರಾಮಗಳಿಂದ ಕುಳ್ಳನ ಸೆರೆಗಾಗಿ ರಾಜ್ಯ ಸರ್ಕಾರಕ್ಕೆ ಚಿಕ್ಕಮಗಳೂರು ಅರಣ್ಯ ಇಲಾಖೆಯ ಅಧಿಕಾರಿಗಳು ಮನವಿ ಮಾಡಿದ್ದರು. ಹಾಗಾಗಿ ಸರ್ಕಾರದಿಂದ ಸೆರೆ ಕಾರ್ಯಚರಣೆಗೆ ಅನುಮತಿ ಪಡೆದ ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಚರಣೆ ನಡೆಸಿ ಕೊನೆಗೂ ಕುಳ್ಳ ನನ್ನ ಸೆರೆ ಹಿಡಿದಿದ್ದಾರೆ.

ಇದನ್ನೂ ಓದಿ: ರಸ್ತೆ ಮಧ್ಯೆ ಗೋಪುರ ನಿರ್ಮಿಸಿ ಓಡಾಟಕ್ಕೆ ತಡೆ: ಅನ್ನಪೂರ್ಣೇಶ್ವರಿ ದೇವಾಲಯದ ಆಡಳಿತ ಮಂಡಳಿ ನಡೆಗೆ ಬೇಸರ, ರಾಜ್ಯಪಾಲರಿಗೆ ಪತ್ರ

ಎರಡು ಜಿಲ್ಲೆಗಳ ಮೂರು ತಾಲೂಕಿನಲ್ಲಿ ಆತಂಕ ಸೃಷ್ಟಿ ಮಾಡಿದ್ದ ಕುಳ್ಳ ಕೊನೆಗೂ ಲಾಕ್ ಆಗಿದ್ದಾನೆ. ಕುಳ್ಳನ ದಾಳಿಯ ಆತಂಕದಲ್ಲಿದ್ದ ಜನರು, ಲಾಕ್ ಆಗುತ್ತಿದ್ದಂತೆ ನಿಟ್ಟುಸಿರು ಬಿಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:00 am, Wed, 14 May 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!