AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು ಕಾಫಿ ಎಸ್ಟೇಟ್​​ನಲ್ಲಿ ಅನಾಥ ಮಹಿಳೆಯ ಹತ್ಯೆ, ಮರ್ಡರ್​​​ ಪ್ರಕರಣ ಬಯಲಾಗಲು 7 ದಿನದ ನಂತರ ಜಿಲ್ಲಾ ಎಸ್​​ಪಿಗೆ ಬಂದಿತ್ತು ಫೋನ್ ಕರೆ

Chikkamagaluru SP: ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ಗೆ ಏಳು ದಿನದ ಹಿಂದೆ ನಡೆದಿದ್ದ‌ ಮರ್ಡರ್ ಬಗ್ಗೆ ಬಂದ ಒಂದು ಫೋನ್ ಕಾಲ್ ಸುಳಿವು ನೀಡಿತ್ತು. ಮಲ್ಲಂದೂರು ಠಾಣಾ ವ್ಯಾಪ್ತಿಯ ಸಿದ್ದಾಪುರದ ಸುಪ್ರೀಂ ಕಾಫಿ ಎಸ್ಟೇಟ್ ನಲ್ಲಿ 7 ದಿನದ ಹಿಂದೆ ಮಹಿಳೆಯನ್ನ ಗುಂಡಿಕ್ಕಿ ಹತ್ಯೆ ಮಾಡಿದ್ದಾರಂತೆ ಎಂದು ಕಾಲ್ ಮಾಡಿದ ವ್ಯಕ್ತಿ ಮಾಹಿತಿ ಹೇಳಿದ್ದ.

ಚಿಕ್ಕಮಗಳೂರು ಕಾಫಿ ಎಸ್ಟೇಟ್​​ನಲ್ಲಿ ಅನಾಥ ಮಹಿಳೆಯ ಹತ್ಯೆ, ಮರ್ಡರ್​​​ ಪ್ರಕರಣ ಬಯಲಾಗಲು 7 ದಿನದ ನಂತರ ಜಿಲ್ಲಾ ಎಸ್​​ಪಿಗೆ ಬಂದಿತ್ತು ಫೋನ್ ಕರೆ
ಚಿಕ್ಕಮಗಳೂರು ಕಾಫಿ ಎಸ್ಟೇಟ್​​ನಲ್ಲಿ ಅನಾಥ ಮಹಿಳೆಯ ಹತ್ಯೆ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Jun 20, 2023 | 11:21 AM

Share

ಬಂದೂಕಿನಿಂದ ಗುಂಡಿಕ್ಕಿ ಕಾಫಿ ಎಸ್ಟೇಟ್ ಮನೆಯಲ್ಲಿ ದಲಿತ ಕೂಲಿ ಕಾರ್ಮಿಕ ಮಹಿಳೆಯ (woman) ಹತ್ಯೆ ಮಾಡಲಾಗಿತ್ತು. ಕಾಫಿ ತೋಟದ ಮಧ್ಯೆ ಶವ ಸುಟ್ಟು ಹಾಕಲಾಗಿತ್ತು. ಮರ್ಡರ್ ನಡೆದು ಏಳು ದಿನವಾದ್ರೂ ಹತ್ಯೆಯ ಬಗ್ಗೆ ಹಂತಕರು ಚಿಕ್ಕ ಸುಳಿವೂ ಬಿಟ್ಟಿರಲಿಲ್ಲ. ಇಲ್ಲೊಂದು ‌ಮಹಿಳೆಯ ಹತ್ಯೆಯಾಗಿದೆ ಎಂಬುದು ಅಕ್ಕಪಕ್ಕದ ಮನೆಯವರಿಗೂ ಗೊತ್ತಾಗಿರಲಿಲ್ಲ. ಕಾಫಿ ಎಸ್ಟೇಟ್ ನಲ್ಲಿ ನಡೆದಿದ್ದ ಮರ್ಡರ್ (murder) ಕಹಾನಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗೆ (chikkamagaluru SP) ಬಂದ ಒಂದು ಫೋನ್ ಕಾಲ್ ನಿಂದ ಹತ್ಯೆ ನಡೆದು 7 ದಿನದ ನಂತರ ಹೊರ ಬಂದಿದೆ.

ಏಳು ದಿನದ ಹಿಂದೆ ಕಾಫಿ ಎಸ್ಟೇಟ್ ಮನೆಯಲ್ಲಿ ನಡೆದಿದ್ದ‌ ಮರ್ಡರ್ ಕಹಾನಿಗೆ ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ಗೆ ಬಂದ ಒಂದು ಫೋನ್ ಕಾಲ್ ಸುಳಿವು ನೀಡಿತ್ತು. ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದಾಪುರದ ಸುಪ್ರೀಂ ಕಾಫಿ ಎಸ್ಟೇಟ್ ನಲ್ಲಿ ದಲಿತ ಕೂಲಿ ‌ಕಾರ್ಮಿಕ ಮಹಿಳೆಯನ್ನ 7 ದಿನದ ಹಿಂದೆ ಬಂದೂಕಿನಿಂದ ಗುಂಡಿಕ್ಕಿ ಹತ್ಯೆ ಮಾಡಿ ಸುಟ್ಟು ಹಾಕಿದ್ದಾರಂತೆ ಎಂದು ಕಾಲ್ ಮಾಡಿದ ವ್ಯಕ್ತಿ ಮಾಹಿತಿ ಹೇಳಿದ್ದ.

ಮಾಹಿತಿಯ ಮೂಲ ಹುಡುಕಿದ್ದ ಪೊಲೀಸರಿಗೆ ನಿರ್ಜನ ಕಾಫಿ ತೋಟದ ಮಧ್ಯೆ ಮಹಿಳೆಯನ್ನ ಸಂಪೂರ್ಣ ಸುಟ್ಟು ಹಾಕಿರುವುದು ಕನ್ಫರ್ಮ್ ಆಗಿತ್ತು. ಹೌದು 7 ದಿನದ ಹಿಂದೆ ಚಿಕ್ಕ ಸುಳಿವು ಇಲ್ಲದೆ ಸಿದ್ದಾಪುರ ಗ್ರಾಮದ ಸುಪ್ರೀಂ ಕಾಫಿ ಎಸ್ಟೇಟ್ ನಲ್ಲಿ ದಲಿತ ಕೂಲಿ ಕಾರ್ಮಿಕ ಮಹಿಳೆ 55 ವರ್ಷದ ಜಯಮ್ಮ ಅವರನ್ನ ಬಂದೂಕಿನಿಂದ ಗುಂಡಿಕ್ಕಿ ಹತ್ಯೆ ಮಾಡಿದ್ದ ಹಂತಕರು ಎಸ್ಟೇಟ್ ಮನೆಯಿಂದ 2 ಕಿಮೀ ದೂರದ ನಿರ್ಜನ ಕಾಫಿ ತೋಟದಲ್ಲಿ ಮಹಿಳೆಯ ಶವ ಸಂಪೂರ್ಣ ಸುಟ್ಟು ಬೂದಿ ಮಾಡಿದ್ದರು.

Also Read:   ಮುದ್ದಿನ ತಂಗಿ ಪ್ರೀತಿಯ ಬಲೆಗೆ ಬಿದ್ದಳು, ಅದರಿಂದ ಹೆಣ ಬಿದ್ದಿದ್ದು ಎಂಜಿನಿಯರಿಂಗ್ ಓದಿಸುತ್ತಿದ್ದ​​ ಅಣ್ಣನದು!

ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದಾಪುರ ಗ್ರಾಮದ ಸುಪ್ರೀಂ ಕಾಫಿ ಎಸ್ಟೇಟ್ ಮಾಲೀಕ ಹೆಗಡೆ ಗೌಡ ಅವರ ಕಾಫಿ ತೋಟದಲ್ಲಿ‌ ಎರಡು ವರ್ಷಗಳಿಂದ ಕೂಲಿ ಕೆಲಸ ಮಾಡುತ್ತಿದ್ದ ದಲಿತ ಮಹಿಳೆ ಜಯಮ್ಮ ಅನಾಥೆ ಎಂದು ಹೇಳಲಾಗುತ್ತಿದ್ದು, ಜಯಮ್ಮ ಹತ್ಯೆ ಸಂಬಂಧ ಎಸ್ಟೇಟ್ ಮಾಲೀಕ ಸೇರಿದಂತೆ ಮಾಲೀಕನ ಮಗನ ಮೇಲೆ ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಸ್ಟೇಟ್ ಮಾಲೀಕ ಹೆಗಡೆ ಗೌಡ, ಮಗ ಸುಪ್ರೀಂ, ಕಾರ್ಮಿಕ ನಾಗಪ್ಪನನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. 7 ದಿನದ ಹಿಂದೆ ಚಿಕ್ಕ ಸುಳಿವು ಸಹ ನೀಡದೆ ಮಹಿಳೆಯ ಹತ್ಯೆ ಮಾಡಿ ಕಾಫಿ ತೋಟದಲ್ಲಿ ಸುಟ್ಟು ಹಾಕಿರುವ ಹಂತಕ ಯಾರು, ಮಹಿಳೆಯ ಹತ್ಯೆಯ ಹಿಂದಿನ ಕಾರಣ ಏನು ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?