AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಫಿನಾಡಲ್ಲಿ ಮತ್ತೊಂದು ದರ್ಗಾ V/S ದೇವಾಲಯ ದಂಗಲ್; 200 ವರ್ಷ ಪುರಾತನ ದರ್ಗಾವನ್ನು ದೇವಾಲಯವೆಂದು ಹೋರಾಟಕ್ಕಿಳಿದ ಹಿಂದೂ ಸಂಘಟನೆಗಳು

ಹಿಂದೂ ಮುಸ್ಲಿಂರ ಭಾವೈಕ್ಯತೆಯ ಕೇಂದ್ರವಾಗಿರುವ ದರ್ಗಾದಲ್ಲಿ ಇಂದಿನಿಂದ ಉರುಸ್ ಆರಂಭವಾಗಲಿದೆ. ಇದರ ನಡುವೆ ಹಿಂದೂ ಸಂಘಟನೆಗಳ ವಿವಾದ ಎದ್ದಿದ್ದು ದರ್ಗಾದ ಸುತ್ತಮುತ್ತ ಪೋಲಿಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಕಾಫಿನಾಡಲ್ಲಿ ಮತ್ತೊಂದು ದರ್ಗಾ V/S ದೇವಾಲಯ ದಂಗಲ್; 200 ವರ್ಷ ಪುರಾತನ ದರ್ಗಾವನ್ನು ದೇವಾಲಯವೆಂದು ಹೋರಾಟಕ್ಕಿಳಿದ ಹಿಂದೂ ಸಂಘಟನೆಗಳು
ಹಜರತ್ ಸೈಯದ್ ಬಾದ್ ಷಾ ದರ್ಗಾ
ಆಯೇಷಾ ಬಾನು
|

Updated on:Mar 13, 2023 | 9:55 AM

Share

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮತ್ತೊಂದು ದರ್ಗಾ V/S ದೇವಾಲಯ ದಂಗಲ್ ಶುರುವಾಗಿದೆ(Dargah vs Temple Fight) . ಚಿಕ್ಕಮಗಳೂರು ತಾಲೂಕಿನ ಮಹಜಿದ್ ಗ್ರಾಮದಲ್ಲಿರುವ ಪುರಾತನ ದರ್ಗಾದ ವಿರುದ್ಧ ಹಿಂದೂ ಸಂಘಟನೆಗಳು ರೊಚ್ಚಿಗೆದ್ದಿದ್ದು ಇದು ದರ್ಗಾವಲ್ಲ, ದೇವಾಲಯ ಎಂದು ಹೋರಾಟಕ್ಕೆ ಇಳಿದಿದ್ದಾರೆ. ಇದು ದರ್ಗಾ ಅಲ್ಲ. ಚಂದ್ರಮೌಳೇಶ್ವರ ದೇವಾಲಯ ಎಂದು ಪಟ್ಟು ಹಿಡಿದಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಶ್ರೀಗುರು ದತ್ತಾತ್ರೇಯ ಬಾಬಾ ಬುಡನ್‌ ಗಿರಿ ಸ್ವಾಮಿ ದರ್ಗಾದ ವಿಚಾರದಲ್ಲೂ ಇದೇ ರೀತಿಯ ಆಕ್ರೋಶ ಭುಗಿಲೆದ್ದಿತ್ತು. ಈಗ ಅದೇ ಮಾದರಿಯಲ್ಲಿ ಮತ್ತೊಂದು ವಿವಾದ ಎದ್ದಿದೆ. ಮಹಜಿದ್ ಗ್ರಾಮದಲ್ಲಿರುವ ಪುರಾತನ ಹಜರತ್ ಸೈಯದ್ ಬಾದ್ ಷಾ ದರ್ಗಾ ಸಂಪೂರ್ಣ ಕಲ್ಲಿನಿಂದ ನಿರ್ಮಾಣವಾಗಿದೆ. ದರ್ಗಾದ ಒಳಗಿರುವ ಪುರಾತನ ಕಲ್ಲಿನ ಕಂಬದಲ್ಲಿ ಹೂವಿನ ಚಿತ್ರಗಳ ಕೆತ್ತನೆ ಮಾಡಲಾಗಿದೆ. ಇದು ನೋಡಲು ಸಂಪೂರ್ಣ ಹಿಂದೂ ದೇವಾಲಯದ ಮಾದರಿಯಲ್ಲಿದೆ. ಹೀಗಾಗಿ ದರ್ಗಾದ ನವೀಕರಣ, ಗುಂಬಜ್ ಕಾಮಗಾರಿಗೆ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಹಾಗೂ ಹಿಂದೂ ದೇವಾಲಯದ ಕುರುಹುಗಳಿರುವುದಾಗಿ ಶಂಕೆ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ದರ್ಗಾದ ಕಾಮಗಾರಿ ನಿಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಹಿಂದೂ ಸಂಘಟನೆಗಳು ಆಗ್ರಹಿಸಿವೆ.

ಇದನ್ನೂ ಓದಿ: ಮೈಕ್‌ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ? ಆಜಾನ್‌ ಬಗ್ಗೆ ಕೆ.ಎಸ್.ಈಶ್ವರಪ್ಪ ವಿವಾದಾತ್ಮಕ ಹೇಳಿಕೆ

ವಕ್ಫ್ ಬೋರ್ಡ್ ಅಧೀನದಲ್ಲಿರುವ ದರ್ಗಾದ ನವೀಕರಣಕ್ಕೆ 8 ಲಕ್ಷ ರೂಪಾಯಿ ಮಂಜೂರು ಮಾಡಿ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಹೀಗಾಗಿ ದರ್ಗಾದ ನವೀಕರಣಕ್ಕೆ ಸಿದ್ಧತೆ ನಡೆದಿದೆ. ಆದ್ರೆ ಹಿಂದೂ ಸಂಘಟನೆಗಳು ಇದು ದರ್ಗಾ ಅಲ್ಲ ದೇವಸ್ಥಾನ ಎಂದು ಹೋರಾಟಕ್ಕೆ ಇಳಿದಿವೆ. ಟಿಪ್ಪು ಸುಲ್ತಾನ್ ಕಾಲದಲ್ಲಿ ದೇವಾಲಯ ನಾಶ ಮಾಡಿ ದರ್ಗಾ ಮಾಡಲಾಗಿದೆ. ಕಟ್ಟೆಗದ್ದೆ ಹೆಸರನ್ನ ಮಹಜಿದ್ ಗ್ರಾಮವೆಂದು ಬದಲಾವಣೆ ಮಾಡಲಾಗಿದೆ ಎಂದು ಹಿಂದೂ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದ್ದಾರೆ. ಹಿಂದೂ ಮುಸ್ಲಿಂರ ಭಾವೈಕ್ಯತೆಯ ಕೇಂದ್ರವಾಗಿರುವ ದರ್ಗಾದಲ್ಲಿ ಇಂದಿನಿಂದ ಉರುಸ್ ಆರಂಭವಾಗಲಿದೆ. ಇದರ ನಡುವೆ ಇಂತಹದೊಂದು ವಿವಾದ ಎದ್ದಿದ್ದು ದರ್ಗಾದ ಸುತ್ತಮುತ್ತ ಪೋಲಿಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಚಿಕ್ಕಮಗಳೂರು ತಾಲೂಕಿನ ಕೂದುವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಜಿದ್ ಗ್ರಾಮವಿದೆ.

ದರ್ಗಾ ಕಮಿಟಿಯಿಂದ ಮೀಟಿಂಗ್

ಇನ್ನು ಹಿಂದೂ ಸಂಘಟನೆಗಳ ವಿವಾದ ಬೆನ್ನಲ್ಲೆ ಹಜರತ್ ಸೈಯದ್ ಬಾದ್ ಷಾ ದರ್ಗಾ ಕಮಿಟಿ ಮೀಟಿಂಗ್ ನಡೆಸಿದೆ. ದರ್ಗಾ ಕಮಿಟಿ ಅಧ್ಯಕ್ಷ ಫಾರೂಕ್ ನೇತೃತ್ವದಲ್ಲಿ ಸಭೆ ನಡೆದಿದೆ. ದೇವಾಲಯ ಎಂದು ಆರೋಪ ಮಾಡುವವರ ಬಳಿ ಸಾಕ್ಷಿ ಇದ್ರೆ ನೀಡಲಿ. ಕಿಡಿಗೇಡಿಗಳು ವಿವಾದವನ್ನು ಸೃಷ್ಟಿ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ. ಸರ್ಕಾರ ನೀಡಿರುವ ಅನುದಾನದಲ್ಲಿ ದರ್ಗಾ ನವೀಕರಣ ಮಾಡಲಾಗುತ್ತಿದೆ. ಈ‌ ದರ್ಗಾಕ್ಕೆ 200 ವರ್ಷಗಳ ಇತಿಹಾಸವಿದೆ. ದರ್ಗಾ ವಕ್ಫ್ ಬೋರ್ಡ್​ಗೆ ಸೇರಿದೆ. ವಕ್ಫ್ ಬೋರ್ಡ್ ವಿವಾದ ಸೃಷ್ಟಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಟಿವಿ9ಗೆ ದರ್ಗಾ ಕಮಿಟಿ ಅಧ್ಯಕ್ಷ ಫಾರೂಕ್ ಮನವಿ ಮಾಡಿದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:55 am, Mon, 13 March 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!