AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ದುರಸ್ಥಿಗೆ ಬೇರೆ ‘ದಾರಿ’ಗಾಣದೆ ನೇರವಾಗಿ ಸಿಎಂ ಬೊಮ್ಮಾಯಿಗೆ ಪತ್ರ, ಮನವಿಗೆ ಸ್ಪಂದಿಸದಿದ್ದರೆ ಗ್ರಾಮಸ್ಥರು ನೀಡಿದ ಎಚ್ಚರಿಕೆ ಏನು?

ನಮ್ಮ ಊರಿಗೆ ರಸ್ತೆ ಬೇಕಿದೆ. ಆದರೆ ಇದಕ್ಕೆ ಶಾಸಕರಿಂದ ಹಿಡಿದು ಸಂಬಂಧಪಟ್ಟ ಅಧಿಕಾರಿಗಳು, ಜಿಪಂ-ತಾಪಂ ಸದಸ್ಯರು ಯಾರೂ ಸ್ಪಂದಿಸುತ್ತಿಲ್ಲ. ಜನರು, ಮಕ್ಕಳ ಓಡಾಟಕ್ಕೆ ತೀವ್ರ ಸಮಸ್ಯೆಯಾಗಿದೆ. ನೀವಾದರೂ ನಮ್ಮ ಕಷ್ಟಕ್ಕೆ ಸ್ಪಂದಿಸಿ ಎಂದು ಸಿಎಂ ಬೊಮ್ಮಾಯಿಗೆ ಮನವಿ ಮಡಿಕೊಂಡಿದ್ದಾರೆ.

ರಸ್ತೆ ದುರಸ್ಥಿಗೆ ಬೇರೆ ‘ದಾರಿ’ಗಾಣದೆ ನೇರವಾಗಿ ಸಿಎಂ ಬೊಮ್ಮಾಯಿಗೆ ಪತ್ರ, ಮನವಿಗೆ ಸ್ಪಂದಿಸದಿದ್ದರೆ ಗ್ರಾಮಸ್ಥರು ನೀಡಿದ ಎಚ್ಚರಿಕೆ ಏನು?
ರಸ್ತೆ ದುರಸ್ಥಿಗೆ ಬೇರೆ ‘ದಾರಿ’ಗಾಣದೆ ನೇರವಾಗಿ ಸಿಎಂ ಬೊಮ್ಮಾಯಿಗೆ ಪತ್ರ, ಮನವಿಗೆ ಸ್ಪಂದಿಸದಿದ್ದರೆ ಗ್ರಾಮಸ್ಥರು ನೀಡಿದ ಎಚ್ಚರಿಕೆ ಏನು?
TV9 Web
| Updated By: ಸಾಧು ಶ್ರೀನಾಥ್​|

Updated on:Nov 12, 2021 | 2:51 PM

Share

ಚಿಕ್ಕಮಗಳೂರು: ರಸ್ತೆ ಸೇರಿದಂತೆ ಮೂಲ ಸೌಕರ್ಯ ಅಗತ್ಯಗಳನ್ನು ಪೂರೈಸಿಕೊಳ್ಳಲು ಸ್ಥಳೀಯ ಆಡಳಿತದ ಮುಂದೆ ಬೇಡಿಕೆಯಿಟ್ಟರೆ ಅದಕ್ಕೆ ಕಿಮ್ಮತ್ತಿನ ಬೆಲೆಯಿಲ್ಲವೆಂದು ಅರಿತ ರಾಜ್ಯ ದ ಜನ ನೇರವಾಗಿ ಜಿಲ್ಲಾಧಿಕಾರಿಗಳು ತಪ್ಪಿದರೆ, ಮುಖ್ಯಮಂತ್ರಿಗೇ ನೇರ ಅಹವಾಲು ಸಲ್ಲಿಸಲು ಮುಂದಾಗುತ್ತಿದ್ದಾರೆ. ಅಷ್ಟರಮಟ್ಟಿಗೆ ಸ್ಥಳೀಯ ಆಡಳಿತಗಳು ಜನರ ಸಮಸ್ಯೆಗೆ ಸ್ಪಂದಿಸದೆ ದಿವ್ಯ ನಿರ್ಲಕ್ಷ್ಯ ವಹಿಸುತ್ತಿವೆ. ಜನ ಬೇರೆ ‘ದಾರಿ’ಗಾಣದೆ ನೇರವಾಗಿ ಮುಖ್ಯಮಂತ್ರಿಯ ಮೊರೆಹೋಗಿದ್ದಾರೆ. ತಾಜಾ ಪ್ರಕರಣದಲ್ಲಿ ಊರಿನ ರಸ್ತೆ ದುರಸ್ತಿಗೆ ಆಗ್ರಹಿಸಿ ಅನಗೋಡು ಗ್ರಾಮಸ್ಥರು ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ.

ಇದು ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಅನಗೋಡು ಗ್ರಾಮಸ್ಥರ ದುಃಸ್ಥಿತಿಯಾಗಿದೆ. ಸ್ಥಳೀಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ರಸ್ತೆ ದುರಸ್ತಿ ಮಾಡಿಕೊಡುವಂತೆ ಮನವಿ ಮಾಡಲಾಗಿತ್ತು. ಆದರೆ ಯಾರೂ ರಸ್ತೆ ದುರಸ್ತಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ರಾಜ್ಯದ ಮುಖ್ಯಮಂತ್ರಿಗೆ ಗ್ರಾಮಸ್ಥರು ಅಧಿಕೃತವಾಗಿ ಪತ್ರ ರವಾನಿಸಿದ್ದಾರೆ. ನೀವಾದ್ರೂ ಸಮಸ್ಯೆ ಬಗೆಹರಿಸಿ ದೊರೆಯೇ ಎಂದು ಸಿಎಂ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ.

ಕಳಸ ತಾಲೂಕಿನ ಅನಗೋಡು ಗ್ರಾಮಸ್ಥರ ಪತ್ರದಲ್ಲಿನ ಅಹವಾಲು, ಅಳಲು ಹೀಗಿದೆ: ನಮ್ಮ ಊರಿಗೆ ರಸ್ತೆ ಬೇಕಿದೆ. ಆದರೆ ಇದಕ್ಕೆ ಶಾಸಕರಿಂದ ಹಿಡಿದು ಸಂಬಂಧಪಟ್ಟ ಅಧಿಕಾರಿಗಳು, ಜಿಪಂ-ತಾಪಂ ಸದಸ್ಯರು ಯಾರೂ ಸ್ಪಂದಿಸುತ್ತಿಲ್ಲ. ಜನರು, ಮಕ್ಕಳ ಓಡಾಟಕ್ಕೆ ತೀವ್ರ ಸಮಸ್ಯೆಯಾಗಿದೆ. ರಸ್ತೆಗೆ ಜಲ್ಲಿ ಹಾಕಿ ಹೋದವರು ಮತ್ತೆ ಈ ಕಡೆ ಬಂದಿಲ್ಲ. ವಾಹನ ಓಡಾಡುವಂತಿಲ್ಲ, ಕುಡಿಯೋಕೆ ನೀರಿಲ್ಲ. ಹತ್ತಾರು ಸಮಸ್ಯೆಗಳಿವೆ ನಮ್ಮ ಊರಲ್ಲಿ. ಆದರೆ ನಮ್ಮ ಕಷ್ಟಕ್ಕೆ ಯಾರೊಬ್ಬರೂ ಸ್ಪಂದಿಸುತ್ತಿಲ್ಲ. ನೀವಾದರೂ ನಮ್ಮ ಕಷ್ಟಕ್ಕೆ ಸ್ಪಂದಿಸಿ ಎಂದು ಸಿಎಂ ಬೊಮ್ಮಾಯಿಗೆ ಮನವಿ ಮಾಡಿದ್ದಾರೆ. ಒಂದು ವೇಳೆ ನಮ್ಮ ಮನವಿಗೆ ಸ್ಪಂದಿಸದಿದ್ದರೆ.. ಮುಂದಿನ ಎಲ್ಲಾ ಚುನಾವಣೆ ಬಹಿಷ್ಕಾರ ಮಾಡುವುದಾಗಿ ಅನಗೋಡು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ:

ಕೆಸರು ಗದ್ದೆಯಂತಿದ್ದ ರಸ್ತೆಯನ್ನ ಪುಟಾಣಿಗಳೇ ದುರಸ್ತಿ ಮಾಡಿದರು! ಅಧಿಕಾರಿಗಳ ಬೇಜವಾಬ್ದಾರಿಗೆ ನ್ಯಾಯಾಧೀಶರು ಗರಂ

(chikmagalur district anagodu village write letter to cm basavaraj bommai for road constrction)

Published On - 2:45 pm, Fri, 12 November 21

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?