AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಜ್ಞಾನಿಕ ಲೋಕಕ್ಕೆ ಸವಾಲಾದ ಮಲೆನಾಡ 16 ಅಡಿ ಎತ್ತರದ ಹುತ್ತ; ಪ್ರತಿ ವರ್ಷ ಪೂಜೆ ವೇಳೆ ಇಲ್ಲಿ ನಡೆಯುತ್ತೆ ವಿಸ್ಮಯ

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಉಣ್ಣಕ್ಕಿ ಉತ್ಸವದ ಮಹಾಮಂಗಳಾರತಿ ವೇಳೆ ಇಲ್ಲೊಂದು ಹುತ್ತ 10 ರಿಂದ 15 ಡಿಗ್ರಿ ಅಂತರದಲ್ಲಿ ಅಲುಗಾಡುತ್ತೆ. ಈ ಚಮತ್ಕಾರ ನೋಡಲು ಜನ ಸಾಗರವೇ ಇಲ್ಲಿಗೆ ಹರಿದುಬರುತ್ತೆ. ದನ ಕಾಯೋ ಹುಡುಗರು ಕಟ್ಟಿದ ಮಣ್ಣಿನ ಗೂಡು ಇಂದು ಸಾವಿರಾರು ಭಕ್ತರ ಇಷ್ಟದೈವವಾಗಿದೆ. ಹೊಯ್ಸಳರ ಕಾಲದಿಂದಲೂ ನಡೆದು ಬರ್ತಿರೋ ಆಚರಣೆಗೆ 400 ವರ್ಷಗಳ ಇತಿಹಾಸವಿದೆ.

ವೈಜ್ಞಾನಿಕ ಲೋಕಕ್ಕೆ ಸವಾಲಾದ ಮಲೆನಾಡ 16 ಅಡಿ ಎತ್ತರದ ಹುತ್ತ; ಪ್ರತಿ ವರ್ಷ ಪೂಜೆ ವೇಳೆ ಇಲ್ಲಿ ನಡೆಯುತ್ತೆ ವಿಸ್ಮಯ
ಹುತ್ತ
TV9 Web
| Edited By: |

Updated on: Nov 27, 2023 | 12:23 PM

Share

ಚಿಕ್ಕಮಗಳೂರು, ನ.27: ಪ್ರಕೃತಿಯ ವೈಚಿತ್ರ್ಯವೇ ಹಾಗೆ. ಇಲ್ಲಿನ ಅದೆಷ್ಟೋ ಸತ್ಯಗಳಿಗೆ ಕಾರಣ ಹುಡುಕುತ್ತಾ ಹೊರಟ್ರೆ ಸೋಲು ಕಟ್ಟಿಟ್ಟ ಬುತ್ತಿ. ಭೂಗರ್ಭದ ಒಡಲಾಳದಲ್ಲಿ ಅಡಗಿರೋ ಒದೊಂದು ಸತ್ಯ ಹೊರಬಂದಾಗಲೂ ದೇವರಿರೋದು ಸತ್ಯ ಅನ್ಸತ್ತೆ. ಯಾಕಂದ್ರೆ, ಈ ಊರಿನ ಜಾತ್ರೆಯನ್ನ ನೀವು ನೋಡುದ್ರೆ ಪ್ರಕೃತಿಯ ವಿಚಿತ್ರವನ್ನ ಕಂಡು ಮೂಕವಿಸ್ಮಿತರಾಗ್ತಿರಾ. ಆ ಹುತ್ತಕ್ಕೆ ಸೂರಿಲ್ಲ. ತಡೆಗೋಡೆಗಳೂ ಇಲ್ಲ. ಆದರೂ ಮಳೆ-ಗಾಳಿಗೆ ಒಂದಿಂಚೂ ಕರಗಿಲ್ಲ. ಹುತ್ತದ ಸುತ್ತಲೂ ಕಲ್ಲು-ಸಿಮೆಂಟ್‍ಗಳಿಂದ ಬಂದೋಬಸ್ತ್ ಮಾಡಿದ್ರು ಕೂಡ ದೀಪಾವಳಿ ಅಮಾವಸ್ಯೆಯ (Deepavali Amavasya) ನಂತರದ ಮಕ್ಕಳ ಹುಣ್ಣೆಮೆಯ ದಿನ ಮಹಾಮಂಗಳಾರತಿ ವೇಳೆ ಇಲ್ಲಿ ನಡೆಯೋ ವಿಚಿತ್ರವನ್ನ ಕಂಡರೆ ಎಂತಹಾ ನಾಸ್ತಿಕರೂ ಕೂಡ ಆಸ್ತಿಕರಾಗದೆ ಇರರು.

ದನ ಕಾಯೋ ಹುಡುಗರು ಕಟ್ಟಿದ ಮಣ್ಣಿನ ಗೂಡು ಇಂದು ಸಾವಿರಾರು ಭಕ್ತರ ಇಷ್ಟದೈವವಾಗಿದೆ. ಹೊಯ್ಸಳರ ಕಾಲದಿಂದಲೂ ನಡೆದು ಬರ್ತಿರೋ ಆಚರಣೆಗೆ 400 ವರ್ಷಗಳ ಇತಿಹಾಸವಿದೆ. ಪ್ರತಿ ವರ್ಷ ದೀಪಾವಳಿ ಅಮಾವಸ್ಯೆಯ ನಂತರದ ಮಕ್ಕಳ ಹುಣ್ಣೆಮೆಯಂದು ನಡೆಯೋ ಉತ್ಸವದಲ್ಲಿ ಮಹಾಮಂಗಳಾರತಿ ವೇಳೆ ಈ ಹುತ್ತಾ 10 ರಿಂದ 15 ಡಿಗ್ರಿ ಅಂತರದಲ್ಲಿ ಅಲುಗಾಡುತ್ತೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಉಣ್ಣಕ್ಕಿ ಉತ್ಸವದಲ್ಲಿ ಈ ಚಮತ್ಕಾರ ನಡೆಯುತ್ತೆ. ಹುತ್ತ ಬರೀ ಮಣ್ಣಿನ ಗೂಡಲ್ಲ. ದೈವಿಶಕ್ತಿಯ ಗುಡಿ. 400 ವರ್ಷಗಳ ಹಿಂದೆ, ಚಿಕ್ಕದ್ದಿದ್ದ ಗೂಡು ಇಂದು 16 ಅಡಿಗೂ ಎತ್ತರ ಬೆಳೆದಿದೆ. ಈ ಹುತ್ತಕ್ಕೆ ಸೂರಿಲ್ಲ. ಮಳೆ-ಗಾಳಿಗೆ ಕರಗಿಲ್ಲ. ವರ್ಷಪೂರ್ತಿ ಮಣ್ಣಿನ ಗೊಂಬೆಯಂತೆ ನಿಂತ ಹುತ್ತ ವರ್ಷಕ್ಕೊಮ್ಮೆ ಭಕ್ತರನ್ನ ಮೂಕವಿಸ್ಮಿತರನ್ನಾಗಿಸುತ್ತೆ. ಈ ಪವಾಡವನ್ನ ನೋಡಲೆಂದು ಬಂದವರು ನಾಗಪ್ಪನ ಭಕ್ತರಾಗಿ ಪ್ರತಿ ವರ್ಷ ಬರ್ತಿದ್ದಾರೆ.

ಇದನ್ನೂ ಓದಿ: ಮಂಡ್ಯದ ದಂಡಿನ ಮಾರಮ್ಮ ದೇವಸ್ಥಾನದಲ್ಲಿ ಮತ್ತೆ ಕಳ್ಳತನ, ಗುಂಡಿಯನ್ನೇ ಹೊತ್ತೊಯ್ದ ಖದೀಮರು

ಇಲ್ಲಿನ ನಾಗಪ್ಪನ ಮಹಿಮೆ ಅಪಾರ

ಉತ್ಸವದಂದು ಯಾವುದೇ ಗಾಯವಾಗದ ಕರುವಿನ ಕಿವಿಯನ್ನ ಕತ್ತರಿಸಿ ದೇವರ ಕರುವೆಂದು ಕಾಡಿಗೆ ಬಿಡ್ತಾರೆ. ಇದರಿಂದ ಊರಿನ ದನಕರುಗಳು ಆರೋಗ್ಯದಿಂದಿದ್ದು, ಯಾವುದೇ ಅನಾಹುತಗಳು ನಡೆಯೋದಿಲ್ಲ ಅನ್ನೋದು ನಂಬಿಕೆ. ದನ ಕಾಯೋ ಹುಡುಗರು ಕಟ್ಟಿದ ಹುತ್ತವಾದ್ರಿಂದ ಕರುವನ್ನ ಕಾಡಿಗೆ ಹೊಡೆಯೋ ಆಚರಣೆ ಬೆಳೆದು ಬಂದಿದೆ. ಉತ್ಸವದ ದಿನ ಕರುವನ್ನ ಹುತ್ತಕ್ಕೆ ಸುತ್ತಿಸುವ ವೇಳೆ ಕರುವಿನ ಮೇಲೆ ಮಂಡಕ್ಕಿ ಹಾಕ್ತೇವೆಂದು ಹರಕೆ ಕಟ್ಟಿಕೊಂಡ್ರೆ ಎಂತಹಾ ಕಷ್ಟವೂ ಕಳೆಯುತ್ತಂತೆ. ಪ್ರತಿವರ್ಷ ದೀಪಾವಳಿಯ ನಂತರದ ಮಕ್ಕಳ ಹುಣ್ಣಿಮೆಯ ಗುರುವಾರ ಅಥವಾ ಭಾನುವಾರ ಈ ಉತ್ಸವ ನಡೆಯಲಿದೆ. ಚರ್ಮರೋಗ, ಮಕ್ಕಳಾಗದವರು, ದನಕರು ಸಾಯ್ತಿದ್ರೆ ಅಥವಾ ಆರೋಗ್ಯ ಹದಗೆಟ್ತಿದ್ರೆ ಇಲ್ಲಿಗೆ ಹರಕೆ ಕಟ್ಟಿದ್ರೆ ಸಾಕು ವರ್ಷದೊಳಗೆ ಆ ಹರಕೆ ಈಡೇರೋದ್ರಿಂದ ಸುತ್ತಮುತ್ತಲಿನ ಜಿಲ್ಲೆಯ ಜನರು ಈ ನಾಗಪ್ಪನ ಮಾಯೆಗೆ ಬೆರಗಾಗಿದ್ದಾರೆ.

ಒಟ್ಟಾರೆ, ತರ್ಕಕ್ಕೆ ನಿಲುಕದ ಈ ಗ್ರಾಮದ ಉತ್ಸವ ಇಂದಿಗೂ ಪ್ರಶ್ನಾತೀತ. ಹುತ್ತ ಅಲುಗಾಡೋದ್ರ ಹಿಂದೆ ವೈಜ್ಞಾನಿಕ ಕಾರಣವಿದ್ಯೋ ಅಥವಾ ದೈವಿಶಕ್ತಿಯ ಪ್ರಭಾವವಿದ್ಯೋ ಅನ್ನೋದು ಇಂದಿಗೂ ನಿಗೂಢ. ದನಕಾಯೋ ಹುಡುಗರ ಭಕ್ತಿಯ ಹಿಂದಿರೋ ಈ ಹುತ್ತಾ ಅಲುಗಾಡುತ್ತ ಪವಾಡವನ್ನೇ ಸೃಷ್ಟಿಸಿದ್ರೆ, ಹುತ್ತ ಅಲುಗಾಡೋದ್ರ ಬಗ್ಗೆ ಆಸ್ತಿಕ ಹಾಗೂ ನಾಸ್ತಿಕರಲ್ಲಿ ಹಲವು ವಾದಗಳಿಗೆ. ಆದ್ರೆ, ನೋಡುಗರ ಕಣ್ಮುಂದೆ ನಡೆಯೋ ಈ ವಿಚಿತ್ರ ಹಾಗೂ ವಿಶಿಷ್ಠ ಪವಾಡ ಮಾತ್ರ ಎಲ್ಲರನ್ನು ಮಂತ್ರಮುಗ್ಧರನ್ನಾಗಿಸಿದೆ.

ಚಿಕ್ಕಮಗಳೂರು ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ