AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯಗೆ ಬೈದವರಿಗಿಲ್ಲ ಟಿಕೆಟ್, ಇದರಲ್ಲೇ ಇದೆ ಅಡ್ಜಸ್ಟ್ಮೆಂಟ್: ಸಿಟಿ ರವಿ ಬೆಂಬಲಿಗರ ಆಕ್ರೋಶ

ಚಿಕ್ಕಮಗಳೂರು ಉಡುಪಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್​ ಫೈಟ್ ಮೂರನೆಯವರಿಗೆ ಲಾಭ ತಂಡುಕೊತು. ಶೋಭಾ ಕರಂದ್ಲಾಜೆ ಮತ್ತು ಸಿಟಿ ರವಿ ನಡುವೆ ಭಾರೀ ಪೈಪೋಟಿ ನಡೆಯಿತಾದರೂ ಬಿಜೆಪಿ ಹೈಕಮಾಂಡ್ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಟಿಕೆಟ್ ಘೋಷಿಸಿದೆ. ಈ ಬಗ್ಗೆ ಅಸಮಾಧಾನಗೊಂಡಿರುವ ಸಿಟಿ ರವಿ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಸಿದ್ದರಾಮಯ್ಯಗೆ ಬೈದವರಿಗಿಲ್ಲ ಟಿಕೆಟ್, ಇದರಲ್ಲೇ ಇದೆ ಅಡ್ಜಸ್ಟ್ಮೆಂಟ್: ಸಿಟಿ ರವಿ ಬೆಂಬಲಿಗರ ಆಕ್ರೋಶ
ಸಿದ್ದರಾಮಯ್ಯಗೆ ಬೈದವರಿಗಿಲ್ಲ ಟಿಕೆಟ್: ಹೊಂದಾಣಿಕೆ ರಾಜಕೀಯದ ವಿರುದ್ಧ ಸಿಟಿ ರವಿ ಬೆಂಬಲಿಗರ ಆಕ್ರೋಶ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Mar 15, 2024 | 9:24 AM

Share

ಚಿಕ್ಕಮಗಳೂರು, ಮಾ.15: ಲೋಕಸಭಾ ಚುನಾವಣೆಗೆ ಕಣಕ್ಕಿಳಿಯುವ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಜೆಪಿ ಹೈಕಮಾಂಡ್ ಬಿಡುಗಡೆ ಮಾಡಿದೆ. ಅದರಂತೆ ಕರ್ನಾಟಕದಲ್ಲಿ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ. ಈ ಪೈಕಿ ಇಬ್ಬರ ಜಗಳದಲ್ಲಿ ಮೂರನೆಯವರಿಗೆ ಲಾಭ ತಂಡುಕೊಟ್ಟ ಚಿಕ್ಕಮಗಳೂರು ಉಡುಪಿ ಕ್ಷೇತ್ರವೂ ಒಂದು. ಶೋಭಾ ಕರಂದ್ಲಾಜೆ ಮತ್ತು ಸಿಟಿ ರವಿ (CT Ravi) ನಡುವೆ ಭಾರೀ ಪೈಪೋಟಿ ನಡೆಯಿತಾದರೂ ಬಿಜೆಪಿ ಹೈಕಮಾಂಡ್ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಟಿಕೆಟ್ ಘೋಷಿಸಿದೆ. ಈ ಬಗ್ಗೆ ಅಸಮಾಧಾನಗೊಂಡಿರುವ ಸಿಟಿ ರವಿ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣ ಆರೋಪ ಕೇಳಿಬರುತ್ತಿದೆ. ಸಿದ್ದರಾಮಯ್ಯ ವಿರುದ್ಧ ಹೇಳಿಕೆಗಳನ್ನು ನೀಡುವ ನಾಯಕರಿಗೆ ಬಿಜೆಪಿಯಲ್ಲಿ ಟಿಕೆಟ್ ಮಿಸ್ ಆಗುತ್ತಿದೆ ಎಂಬುದು ಕಾರ್ಯಕರ್ತರ, ಮುಖಂಡರ ಆರೋಪವಾಗಿದೆ. ಇದೇ ಆರೋಪವನ್ನು ಸಿಟಿ ರವಿ ಅವರ ಬೆಂಬಲಿಗರೂ ಮಾಡಿದ್ದಾರೆ.

ಇದನ್ನೂ ಓದಿ: ವಿರೋಧ ಮಾಡುವವರಿಗೆ ಟಿಕೆಟ್ ಸಿಗಲ್ಲ: ಸಿಟಿ ರವಿ ವಿರುದ್ಧ ಶೋಭಾ ಕರಂದ್ಲಾಜೆ ಪರೋಕ್ಷ ವಾಗ್ದಾಳಿ

ಟಿಕೆಟ್ ಘೋಷಣೆಗೂ ಮುನ್ನ, ಕೇಂದ್ರ ಸಚಿವೆಯೂ ಆಗಿರುವ ಚಿಕ್ಕಮಳೂರು-ಉಡುಪಿ ಕ್ಷೇತ್ರದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಸಿಟಿ ರವಿ ಬೆಂಬಲಿಗರು ಸಿಡಿದೆದ್ದಿದ್ದರು. ಈ ಬಾರಿ ಶೋಭಾಗೆ ಟಿಕೆಟ್ ನೀಡದಂತೆ ಒತ್ತಾಯಿಸಿದ್ದರು. ಟ್ರೋಲ್​ಗಳನ್ನು ಕೂಡ ಮಾಡಿದ್ದರು. ಗೋ ಬ್ಯಾಕ್ ಅಭಿಯಾನವನ್ನೂ ನಡೆಸಿದ್ದರು. ಇದೀಗ ಸಿಟಿ ರವಿ ಅವರಿಗೆ ಟಿಕೆಟ್ ಮಿಸ್ ಆದ ಬೆನ್ನಲ್ಲೇ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ವಾಟ್ಸ್​ಆ್ಯಪ್, ಸಾಮಾಜಿಕ ಜಾಲದಲ್ಲಿ ಸಿಟಿ ರವಿ ಪರ ಅಭಿಯಾನ ನಡೆಸುತ್ತಿರುವ ಅಭಿಮಾನಿಗಳು, ಮೌನಿ ಕೋಟಗೆ ಟಿಕೆಟ್ ಕೊಟ್ಟು ಕಾರ್ಯಕರ್ತರನ್ನು ಸೈಲೆಂಟ್ ಮಾಡಿದರು. ಎಲ್ಲಿದೆ ನ್ಯಾಯ?ನಿಷ್ಠಾವಂತ ಕಾರ್ಯಕರ್ತರ ಕಗ್ಗೊಲೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಸಿದ್ದರಾಮಯ್ಯಗೆ ಯಾರೆಲ್ಲ ಬೈಯುತ್ತಾರೋ ಅವರಿಗೆ ಟಿಕೆಟ್ ಇಲ್ಲ. ಇದರಲ್ಲೇ ಇದೆ ಅಡ್ಜಸ್ಟ್ಮೆಂಟ್ ಎಂದು ಆಕ್ರೋಶ ಹೊರಹಾಕಿದ್ದಾರೆ.

“ನಮ್ಮವರಿಗೆ ಎಂಪಿ ಕೋಟಾ ಬೇಕು ಅಂದಿದ್ದನ್ನು ತಪ್ಪಾಗಿ ಅರ್ಥ ಮಾಡಿಕೊಂಡು ‘ಕೋಟ’ ಕೊಟ್ಟುಬಿಟ್ರಾಂತ”, “ಎಲ್ಲಿದೆ ಸಿದ್ಧಾಂತ? ಮೌನಿಯನ್ನು ಅಭ್ಯರ್ಥಿ ಮಾಡಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಸೈಲೆಂಟ್ ಮಾಡಿಬಿಟ್ಟರು”, “ಅಣ್ಣ ಇಲ್ಲಾ ಅಂದರೆ ಎಲ್ಲಾ ಪ್ರೋಗ್ರಾಂ ಕ್ಯಾನ್ಸಲ್ ಆಗುತ್ತದೆ. ರವಿಯ ತಾಕತ್ತು ಜಗತ್ತಿಗೆ ಗೊತ್ತು” ಎಂಬಿತ್ಯಾದಿ ಪೋಸ್ಟ್​ಗಳನ್ನು ಹಾಕಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:14 am, Fri, 15 March 24

Follow Us
Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್