AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿನಲ್ಲಿ ಹೇಗಿದ್ರು ಸಿಟಿ ರವಿನೇ ಗೆಲ್ಲೋದು ಸರ್..!: ಕಾಂಗ್ರೆಸ್​ ನಾಯಕನ ಆಡಿಯೋ ವೈರಲ್​​: ಪಕ್ಷದಿಂದ ಉಚ್ಚಾಟನೆ

ಚಿಕ್ಕಮಗಳೂರಿನಲ್ಲಿ ಹೇಗಿದ್ರು ಸಿ.ಟಿ ರವಿನೇ ಗೆಲ್ಲೋದು ಸರ್..! ಎನ್ನುವ ಕಾಂಗ್ರೆಸ್ ಮುಖಂಡ ರಸೂಲ್ ಖಾನ್ ಆಡಿಯೋ ವೈರಲ್​​​ ಆಗಿದೆ. ಆಡಿಯೋ ವೈರಲ್​ ಆಗುತ್ತಿದ್ದಂತೆ ರಸೂಲ್ ಖಾನ್​ ಅವರನ್ನು ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನದಿಂದ ಕಾಂಗ್ರೆಸ್​ ವಜಾ ಮಾಡಿದೆ.

ಚಿಕ್ಕಮಗಳೂರಿನಲ್ಲಿ ಹೇಗಿದ್ರು ಸಿಟಿ ರವಿನೇ ಗೆಲ್ಲೋದು ಸರ್..!: ಕಾಂಗ್ರೆಸ್​ ನಾಯಕನ ಆಡಿಯೋ ವೈರಲ್​​: ಪಕ್ಷದಿಂದ ಉಚ್ಚಾಟನೆ
ರಸೂಲ್​ ಖಾನ್​ (ಎಡಚಿತ್ರ) ವಜಾಗೊಳಿಸಿದ ಪ್ರತಿ (ಬಲಚಿತ್ರ)
ವಿವೇಕ ಬಿರಾದಾರ
|

Updated on:Apr 05, 2023 | 5:27 PM

Share

ಚಿಕ್ಕಮಗಳೂರು: ಚುನಾವಣೆ ಹತ್ತಿರವಾಗುತ್ತಿದ್ದು, ಚಿಕ್ಕಮಗಳೂರು (Chikkamagaluru) ವಿಧಾನಸಭಾ ಅಖಾಡ ಹೈವೋಲ್ಟೆಜ್​ನಿಂದ ಕೂಡಿದೆ. ಈ ನಡುವೆ ಕಾಂಗ್ರೆಸ್​ (Congress) ಮುಖಂಡರೊಬ್ಬರು ಆಡಿಯೋ ವೈರಲ್​ ಆಗಿದೆ. ಚಿಕ್ಕಮಗಳೂರಿನಲ್ಲಿ ಹೇಗಿದ್ದರು ಸಿ.ಟಿ ರವಿನೇ (CT Ravi) ಗೆಲ್ಲೋದು ಸರ್..! ಎನ್ನುವ ಕಾಂಗ್ರೆಸ್ ಮುಖಂಡ ರಸೂಲ್ ಖಾನ್ (Rasul Khan) ಅವರ ಆಡಿಯೋ ವೈರಲ್​​​ ಆಗಿದೆ. ಇನ್ನು ಆಡಿಯೋ ವೈರಲ್​ ಆಗುತ್ತಿದ್ದಂತೆ ರಸೂಲ್ ಖಾನ್​ ಅವರನ್ನು ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನದಿಂದ ಕಾಂಗ್ರೆಸ್​ ವಜಾ ಮಾಡಿದೆ. ಪಕ್ಷಕ್ಕೆ ಮುಜುಗರ ತರುವ ಹೇಳಿಕೆ ರಸೂಲ್ ಖಾನ್ ನೀಡಿದ್ದಾರೆಂದು ರಾಜ್ಯ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ಸಚಿನ್ ಮೀಗಾ ವಜಾ ಮಾಡಿದ್ದಾರೆ.

ನಿನ್ನೆ (ಏ.4) ತುಮಕೂರಿನಲ್ಲಿ ರಸೂಲ್ ಖಾನ್ ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ, ಇತ್ತೀಚಿಗೆ ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿದ್ದ ಹೆಚ್‌.ಡಿ ತಮ್ಮಯ್ಯ ವಿರುದ್ಧ ಪತ್ರಿಕಾಗೋಷ್ಠಿ ನಡೆಸಿದ್ದರು. ಈ ವೇಳೆ ತಮ್ಮಯ್ಯ ಅವರಿಗೆ ಕೈ ಟಿಕೆಟ್ ನೀಡದಂತೆ ಮುಸ್ಲಿಂ ಸಮುದಾಯ ಒತ್ತಾಯ ಮಾಡಿತ್ತು. ಕಾಂಗ್ರೆಸ್ ಟಿಕೆಟ್ ತಮ್ಮಯ್ಯ ಅವರಿಗೆ ನೀಡಿದರೇ ಮತದಾನದಿಂದ ದೂರ ಉಳಿಯುವ ಎಚ್ಚರಿಕೆ ನೀಡಲಾಗಿತ್ತು. ಅಲ್ಲದೆ ಟಿಕೆಟ್​ಗೆ ಅರ್ಜಿ ಹಾಕಿರುವ ಆರು ಜನರಲ್ಲಿ ಒಬ್ಬರಿಗೆ ಟಿಕೆಟ್ ನೀಡುವಂತೆ ಮುಸ್ಲಿಂ ಸಮುದಾಯ ಒತ್ತಾಯ ಮಾಡಿತ್ತು.

ಇದನ್ನೂ ಓದಿ: ಟಿಕೆಟ್​​ಗಾಗಿ ಕುತ್ತಿಗೆಗೆ ನೇಣು ಕುಣಿಕೆ ಹಾಕಿಕೊಂಡು, ಕೈಯಲ್ಲಿ ಬಾಟಲಿ ಹಿಡಿದು ಬಿಜೆಪಿ ನಾಯಕನ ಹೈಡ್ರಾಮಾ

ಕಾಂಗ್ರೆಸ್​ ಮುಖಂಡ ಪ್ರಸನ್ನಕುಮಾರ್ ಪಕ್ಷದಿಂದ ವಜಾ

ಇನ್ನು ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಗುಬ್ಬಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಸನ್ನಕುಮಾರ್ ಅವರನ್ನು ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್​ಗೌಡ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.

ಗುಬ್ಬಿ ಕ್ಷೇತ್ರದ ಟಿಕೆಟ್​ ಆಕಾಂಕ್ಷಿ ಶ್ರೀನಿವಾಸ್,​ ಕಾಂಗ್ರೆಸ್​​ ಸೇರ್ಪಡೆಗೆ ಪ್ರಸನ್ನಕುಮಾರ್ ವಿರೋಧಿಸಿದ್ದರು. ತಾವೇ ಅಭ್ಯರ್ಥಿ ಎಂದು ಚುನಾವಣಾ ಪ್ರಚಾರ ಮಾಡಲು ನಿರ್ಧರಿಸಿದ್ದರು. ಈ ಹಿನ್ನೆಲೆ ಉಚ್ಚಾಟನೆ ಮಾಡಲಾಗಿದೆ ಎಂದು ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್​ಗೌಡ ಮಾಹಿತಿ ನೀಡಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:27 pm, Wed, 5 April 23

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು