ಚಿಕ್ಕಮಗಳೂರಿನಲ್ಲಿ ಹೇಗಿದ್ರು ಸಿಟಿ ರವಿನೇ ಗೆಲ್ಲೋದು ಸರ್..!: ಕಾಂಗ್ರೆಸ್​ ನಾಯಕನ ಆಡಿಯೋ ವೈರಲ್​​: ಪಕ್ಷದಿಂದ ಉಚ್ಚಾಟನೆ

ಚಿಕ್ಕಮಗಳೂರಿನಲ್ಲಿ ಹೇಗಿದ್ರು ಸಿ.ಟಿ ರವಿನೇ ಗೆಲ್ಲೋದು ಸರ್..! ಎನ್ನುವ ಕಾಂಗ್ರೆಸ್ ಮುಖಂಡ ರಸೂಲ್ ಖಾನ್ ಆಡಿಯೋ ವೈರಲ್​​​ ಆಗಿದೆ. ಆಡಿಯೋ ವೈರಲ್​ ಆಗುತ್ತಿದ್ದಂತೆ ರಸೂಲ್ ಖಾನ್​ ಅವರನ್ನು ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನದಿಂದ ಕಾಂಗ್ರೆಸ್​ ವಜಾ ಮಾಡಿದೆ.

ಚಿಕ್ಕಮಗಳೂರಿನಲ್ಲಿ ಹೇಗಿದ್ರು ಸಿಟಿ ರವಿನೇ ಗೆಲ್ಲೋದು ಸರ್..!: ಕಾಂಗ್ರೆಸ್​ ನಾಯಕನ ಆಡಿಯೋ ವೈರಲ್​​: ಪಕ್ಷದಿಂದ ಉಚ್ಚಾಟನೆ
ರಸೂಲ್​ ಖಾನ್​ (ಎಡಚಿತ್ರ) ವಜಾಗೊಳಿಸಿದ ಪ್ರತಿ (ಬಲಚಿತ್ರ)
Follow us
|

Updated on:Apr 05, 2023 | 5:27 PM

ಚಿಕ್ಕಮಗಳೂರು: ಚುನಾವಣೆ ಹತ್ತಿರವಾಗುತ್ತಿದ್ದು, ಚಿಕ್ಕಮಗಳೂರು (Chikkamagaluru) ವಿಧಾನಸಭಾ ಅಖಾಡ ಹೈವೋಲ್ಟೆಜ್​ನಿಂದ ಕೂಡಿದೆ. ಈ ನಡುವೆ ಕಾಂಗ್ರೆಸ್​ (Congress) ಮುಖಂಡರೊಬ್ಬರು ಆಡಿಯೋ ವೈರಲ್​ ಆಗಿದೆ. ಚಿಕ್ಕಮಗಳೂರಿನಲ್ಲಿ ಹೇಗಿದ್ದರು ಸಿ.ಟಿ ರವಿನೇ (CT Ravi) ಗೆಲ್ಲೋದು ಸರ್..! ಎನ್ನುವ ಕಾಂಗ್ರೆಸ್ ಮುಖಂಡ ರಸೂಲ್ ಖಾನ್ (Rasul Khan) ಅವರ ಆಡಿಯೋ ವೈರಲ್​​​ ಆಗಿದೆ. ಇನ್ನು ಆಡಿಯೋ ವೈರಲ್​ ಆಗುತ್ತಿದ್ದಂತೆ ರಸೂಲ್ ಖಾನ್​ ಅವರನ್ನು ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನದಿಂದ ಕಾಂಗ್ರೆಸ್​ ವಜಾ ಮಾಡಿದೆ. ಪಕ್ಷಕ್ಕೆ ಮುಜುಗರ ತರುವ ಹೇಳಿಕೆ ರಸೂಲ್ ಖಾನ್ ನೀಡಿದ್ದಾರೆಂದು ರಾಜ್ಯ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ಸಚಿನ್ ಮೀಗಾ ವಜಾ ಮಾಡಿದ್ದಾರೆ.

ನಿನ್ನೆ (ಏ.4) ತುಮಕೂರಿನಲ್ಲಿ ರಸೂಲ್ ಖಾನ್ ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ, ಇತ್ತೀಚಿಗೆ ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿದ್ದ ಹೆಚ್‌.ಡಿ ತಮ್ಮಯ್ಯ ವಿರುದ್ಧ ಪತ್ರಿಕಾಗೋಷ್ಠಿ ನಡೆಸಿದ್ದರು. ಈ ವೇಳೆ ತಮ್ಮಯ್ಯ ಅವರಿಗೆ ಕೈ ಟಿಕೆಟ್ ನೀಡದಂತೆ ಮುಸ್ಲಿಂ ಸಮುದಾಯ ಒತ್ತಾಯ ಮಾಡಿತ್ತು. ಕಾಂಗ್ರೆಸ್ ಟಿಕೆಟ್ ತಮ್ಮಯ್ಯ ಅವರಿಗೆ ನೀಡಿದರೇ ಮತದಾನದಿಂದ ದೂರ ಉಳಿಯುವ ಎಚ್ಚರಿಕೆ ನೀಡಲಾಗಿತ್ತು. ಅಲ್ಲದೆ ಟಿಕೆಟ್​ಗೆ ಅರ್ಜಿ ಹಾಕಿರುವ ಆರು ಜನರಲ್ಲಿ ಒಬ್ಬರಿಗೆ ಟಿಕೆಟ್ ನೀಡುವಂತೆ ಮುಸ್ಲಿಂ ಸಮುದಾಯ ಒತ್ತಾಯ ಮಾಡಿತ್ತು.

ಇದನ್ನೂ ಓದಿ: ಟಿಕೆಟ್​​ಗಾಗಿ ಕುತ್ತಿಗೆಗೆ ನೇಣು ಕುಣಿಕೆ ಹಾಕಿಕೊಂಡು, ಕೈಯಲ್ಲಿ ಬಾಟಲಿ ಹಿಡಿದು ಬಿಜೆಪಿ ನಾಯಕನ ಹೈಡ್ರಾಮಾ

ಕಾಂಗ್ರೆಸ್​ ಮುಖಂಡ ಪ್ರಸನ್ನಕುಮಾರ್ ಪಕ್ಷದಿಂದ ವಜಾ

ಇನ್ನು ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಗುಬ್ಬಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಸನ್ನಕುಮಾರ್ ಅವರನ್ನು ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್​ಗೌಡ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.

ಗುಬ್ಬಿ ಕ್ಷೇತ್ರದ ಟಿಕೆಟ್​ ಆಕಾಂಕ್ಷಿ ಶ್ರೀನಿವಾಸ್,​ ಕಾಂಗ್ರೆಸ್​​ ಸೇರ್ಪಡೆಗೆ ಪ್ರಸನ್ನಕುಮಾರ್ ವಿರೋಧಿಸಿದ್ದರು. ತಾವೇ ಅಭ್ಯರ್ಥಿ ಎಂದು ಚುನಾವಣಾ ಪ್ರಚಾರ ಮಾಡಲು ನಿರ್ಧರಿಸಿದ್ದರು. ಈ ಹಿನ್ನೆಲೆ ಉಚ್ಚಾಟನೆ ಮಾಡಲಾಗಿದೆ ಎಂದು ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್​ಗೌಡ ಮಾಹಿತಿ ನೀಡಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:27 pm, Wed, 5 April 23

Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!