AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿನಲ್ಲಿ ಹೇಗಿದ್ರು ಸಿಟಿ ರವಿನೇ ಗೆಲ್ಲೋದು ಸರ್..!: ಕಾಂಗ್ರೆಸ್​ ನಾಯಕನ ಆಡಿಯೋ ವೈರಲ್​​: ಪಕ್ಷದಿಂದ ಉಚ್ಚಾಟನೆ

ಚಿಕ್ಕಮಗಳೂರಿನಲ್ಲಿ ಹೇಗಿದ್ರು ಸಿ.ಟಿ ರವಿನೇ ಗೆಲ್ಲೋದು ಸರ್..! ಎನ್ನುವ ಕಾಂಗ್ರೆಸ್ ಮುಖಂಡ ರಸೂಲ್ ಖಾನ್ ಆಡಿಯೋ ವೈರಲ್​​​ ಆಗಿದೆ. ಆಡಿಯೋ ವೈರಲ್​ ಆಗುತ್ತಿದ್ದಂತೆ ರಸೂಲ್ ಖಾನ್​ ಅವರನ್ನು ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನದಿಂದ ಕಾಂಗ್ರೆಸ್​ ವಜಾ ಮಾಡಿದೆ.

ಚಿಕ್ಕಮಗಳೂರಿನಲ್ಲಿ ಹೇಗಿದ್ರು ಸಿಟಿ ರವಿನೇ ಗೆಲ್ಲೋದು ಸರ್..!: ಕಾಂಗ್ರೆಸ್​ ನಾಯಕನ ಆಡಿಯೋ ವೈರಲ್​​: ಪಕ್ಷದಿಂದ ಉಚ್ಚಾಟನೆ
ರಸೂಲ್​ ಖಾನ್​ (ಎಡಚಿತ್ರ) ವಜಾಗೊಳಿಸಿದ ಪ್ರತಿ (ಬಲಚಿತ್ರ)
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 05, 2023 | 5:27 PM

Share

ಮುಖ್ಯಾಂಶಗಳು

  • ಚಿಕ್ಕಮಗಳೂರಿನಲ್ಲಿ ಹೇಗಿದ್ದರು ಸಿ.ಟಿ ರವಿನೇ ಗೆಲ್ಲೋದು ಸರ್..! ಎನ್ನುವ ಕಾಂಗ್ರೆಸ್ ಮುಖಂಡ ರಸೂಲ್ ಖಾನ್ ಅವರ ಆಡಿಯೋ ವೈರಲ್​​​ ಆಗಿದೆ.
  • ರಸೂಲ್ ಖಾನ್​ ಅವರನ್ನು ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನದಿಂದ ಕಾಂಗ್ರೆಸ್​ ವಜಾ ಮಾಡಿದೆ.
  • ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಗುಬ್ಬಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಸನ್ನಕುಮಾರ್ ಅವರನ್ನು ವಜಾ ಮಾಡಲಾಗಿದೆ.

ಚಿಕ್ಕಮಗಳೂರು: ಚುನಾವಣೆ ಹತ್ತಿರವಾಗುತ್ತಿದ್ದು, ಚಿಕ್ಕಮಗಳೂರು (Chikkamagaluru) ವಿಧಾನಸಭಾ ಅಖಾಡ ಹೈವೋಲ್ಟೆಜ್​ನಿಂದ ಕೂಡಿದೆ. ಈ ನಡುವೆ ಕಾಂಗ್ರೆಸ್​ (Congress) ಮುಖಂಡರೊಬ್ಬರು ಆಡಿಯೋ ವೈರಲ್​ ಆಗಿದೆ. ಚಿಕ್ಕಮಗಳೂರಿನಲ್ಲಿ ಹೇಗಿದ್ದರು ಸಿ.ಟಿ ರವಿನೇ (CT Ravi) ಗೆಲ್ಲೋದು ಸರ್..! ಎನ್ನುವ ಕಾಂಗ್ರೆಸ್ ಮುಖಂಡ ರಸೂಲ್ ಖಾನ್ (Rasul Khan) ಅವರ ಆಡಿಯೋ ವೈರಲ್​​​ ಆಗಿದೆ. ಇನ್ನು ಆಡಿಯೋ ವೈರಲ್​ ಆಗುತ್ತಿದ್ದಂತೆ ರಸೂಲ್ ಖಾನ್​ ಅವರನ್ನು ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನದಿಂದ ಕಾಂಗ್ರೆಸ್​ ವಜಾ ಮಾಡಿದೆ. ಪಕ್ಷಕ್ಕೆ ಮುಜುಗರ ತರುವ ಹೇಳಿಕೆ ರಸೂಲ್ ಖಾನ್ ನೀಡಿದ್ದಾರೆಂದು ರಾಜ್ಯ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ಸಚಿನ್ ಮೀಗಾ ವಜಾ ಮಾಡಿದ್ದಾರೆ.

ನಿನ್ನೆ (ಏ.4) ತುಮಕೂರಿನಲ್ಲಿ ರಸೂಲ್ ಖಾನ್ ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ, ಇತ್ತೀಚಿಗೆ ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿದ್ದ ಹೆಚ್‌.ಡಿ ತಮ್ಮಯ್ಯ ವಿರುದ್ಧ ಪತ್ರಿಕಾಗೋಷ್ಠಿ ನಡೆಸಿದ್ದರು. ಈ ವೇಳೆ ತಮ್ಮಯ್ಯ ಅವರಿಗೆ ಕೈ ಟಿಕೆಟ್ ನೀಡದಂತೆ ಮುಸ್ಲಿಂ ಸಮುದಾಯ ಒತ್ತಾಯ ಮಾಡಿತ್ತು. ಕಾಂಗ್ರೆಸ್ ಟಿಕೆಟ್ ತಮ್ಮಯ್ಯ ಅವರಿಗೆ ನೀಡಿದರೇ ಮತದಾನದಿಂದ ದೂರ ಉಳಿಯುವ ಎಚ್ಚರಿಕೆ ನೀಡಲಾಗಿತ್ತು. ಅಲ್ಲದೆ ಟಿಕೆಟ್​ಗೆ ಅರ್ಜಿ ಹಾಕಿರುವ ಆರು ಜನರಲ್ಲಿ ಒಬ್ಬರಿಗೆ ಟಿಕೆಟ್ ನೀಡುವಂತೆ ಮುಸ್ಲಿಂ ಸಮುದಾಯ ಒತ್ತಾಯ ಮಾಡಿತ್ತು.

ಇದನ್ನೂ ಓದಿ: ಟಿಕೆಟ್​​ಗಾಗಿ ಕುತ್ತಿಗೆಗೆ ನೇಣು ಕುಣಿಕೆ ಹಾಕಿಕೊಂಡು, ಕೈಯಲ್ಲಿ ಬಾಟಲಿ ಹಿಡಿದು ಬಿಜೆಪಿ ನಾಯಕನ ಹೈಡ್ರಾಮಾ

ಕಾಂಗ್ರೆಸ್​ ಮುಖಂಡ ಪ್ರಸನ್ನಕುಮಾರ್ ಪಕ್ಷದಿಂದ ವಜಾ

ಇನ್ನು ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಗುಬ್ಬಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಸನ್ನಕುಮಾರ್ ಅವರನ್ನು ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್​ಗೌಡ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.

ಗುಬ್ಬಿ ಕ್ಷೇತ್ರದ ಟಿಕೆಟ್​ ಆಕಾಂಕ್ಷಿ ಶ್ರೀನಿವಾಸ್,​ ಕಾಂಗ್ರೆಸ್​​ ಸೇರ್ಪಡೆಗೆ ಪ್ರಸನ್ನಕುಮಾರ್ ವಿರೋಧಿಸಿದ್ದರು. ತಾವೇ ಅಭ್ಯರ್ಥಿ ಎಂದು ಚುನಾವಣಾ ಪ್ರಚಾರ ಮಾಡಲು ನಿರ್ಧರಿಸಿದ್ದರು. ಈ ಹಿನ್ನೆಲೆ ಉಚ್ಚಾಟನೆ ಮಾಡಲಾಗಿದೆ ಎಂದು ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್​ಗೌಡ ಮಾಹಿತಿ ನೀಡಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:27 pm, Wed, 5 April 23

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್