AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿನಲ್ಲಿ ಹೇಗಿದ್ರು ಸಿಟಿ ರವಿನೇ ಗೆಲ್ಲೋದು ಸರ್..!: ಕಾಂಗ್ರೆಸ್​ ನಾಯಕನ ಆಡಿಯೋ ವೈರಲ್​​: ಪಕ್ಷದಿಂದ ಉಚ್ಚಾಟನೆ

ಚಿಕ್ಕಮಗಳೂರಿನಲ್ಲಿ ಹೇಗಿದ್ರು ಸಿ.ಟಿ ರವಿನೇ ಗೆಲ್ಲೋದು ಸರ್..! ಎನ್ನುವ ಕಾಂಗ್ರೆಸ್ ಮುಖಂಡ ರಸೂಲ್ ಖಾನ್ ಆಡಿಯೋ ವೈರಲ್​​​ ಆಗಿದೆ. ಆಡಿಯೋ ವೈರಲ್​ ಆಗುತ್ತಿದ್ದಂತೆ ರಸೂಲ್ ಖಾನ್​ ಅವರನ್ನು ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನದಿಂದ ಕಾಂಗ್ರೆಸ್​ ವಜಾ ಮಾಡಿದೆ.

ಚಿಕ್ಕಮಗಳೂರಿನಲ್ಲಿ ಹೇಗಿದ್ರು ಸಿಟಿ ರವಿನೇ ಗೆಲ್ಲೋದು ಸರ್..!: ಕಾಂಗ್ರೆಸ್​ ನಾಯಕನ ಆಡಿಯೋ ವೈರಲ್​​: ಪಕ್ಷದಿಂದ ಉಚ್ಚಾಟನೆ
ರಸೂಲ್​ ಖಾನ್​ (ಎಡಚಿತ್ರ) ವಜಾಗೊಳಿಸಿದ ಪ್ರತಿ (ಬಲಚಿತ್ರ)
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 05, 2023 | 5:27 PM

Share

ಮುಖ್ಯಾಂಶಗಳು

  • ಚಿಕ್ಕಮಗಳೂರಿನಲ್ಲಿ ಹೇಗಿದ್ದರು ಸಿ.ಟಿ ರವಿನೇ ಗೆಲ್ಲೋದು ಸರ್..! ಎನ್ನುವ ಕಾಂಗ್ರೆಸ್ ಮುಖಂಡ ರಸೂಲ್ ಖಾನ್ ಅವರ ಆಡಿಯೋ ವೈರಲ್​​​ ಆಗಿದೆ.
  • ರಸೂಲ್ ಖಾನ್​ ಅವರನ್ನು ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನದಿಂದ ಕಾಂಗ್ರೆಸ್​ ವಜಾ ಮಾಡಿದೆ.
  • ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಗುಬ್ಬಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಸನ್ನಕುಮಾರ್ ಅವರನ್ನು ವಜಾ ಮಾಡಲಾಗಿದೆ.

ಚಿಕ್ಕಮಗಳೂರು: ಚುನಾವಣೆ ಹತ್ತಿರವಾಗುತ್ತಿದ್ದು, ಚಿಕ್ಕಮಗಳೂರು (Chikkamagaluru) ವಿಧಾನಸಭಾ ಅಖಾಡ ಹೈವೋಲ್ಟೆಜ್​ನಿಂದ ಕೂಡಿದೆ. ಈ ನಡುವೆ ಕಾಂಗ್ರೆಸ್​ (Congress) ಮುಖಂಡರೊಬ್ಬರು ಆಡಿಯೋ ವೈರಲ್​ ಆಗಿದೆ. ಚಿಕ್ಕಮಗಳೂರಿನಲ್ಲಿ ಹೇಗಿದ್ದರು ಸಿ.ಟಿ ರವಿನೇ (CT Ravi) ಗೆಲ್ಲೋದು ಸರ್..! ಎನ್ನುವ ಕಾಂಗ್ರೆಸ್ ಮುಖಂಡ ರಸೂಲ್ ಖಾನ್ (Rasul Khan) ಅವರ ಆಡಿಯೋ ವೈರಲ್​​​ ಆಗಿದೆ. ಇನ್ನು ಆಡಿಯೋ ವೈರಲ್​ ಆಗುತ್ತಿದ್ದಂತೆ ರಸೂಲ್ ಖಾನ್​ ಅವರನ್ನು ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನದಿಂದ ಕಾಂಗ್ರೆಸ್​ ವಜಾ ಮಾಡಿದೆ. ಪಕ್ಷಕ್ಕೆ ಮುಜುಗರ ತರುವ ಹೇಳಿಕೆ ರಸೂಲ್ ಖಾನ್ ನೀಡಿದ್ದಾರೆಂದು ರಾಜ್ಯ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ಸಚಿನ್ ಮೀಗಾ ವಜಾ ಮಾಡಿದ್ದಾರೆ.

ನಿನ್ನೆ (ಏ.4) ತುಮಕೂರಿನಲ್ಲಿ ರಸೂಲ್ ಖಾನ್ ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ, ಇತ್ತೀಚಿಗೆ ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿದ್ದ ಹೆಚ್‌.ಡಿ ತಮ್ಮಯ್ಯ ವಿರುದ್ಧ ಪತ್ರಿಕಾಗೋಷ್ಠಿ ನಡೆಸಿದ್ದರು. ಈ ವೇಳೆ ತಮ್ಮಯ್ಯ ಅವರಿಗೆ ಕೈ ಟಿಕೆಟ್ ನೀಡದಂತೆ ಮುಸ್ಲಿಂ ಸಮುದಾಯ ಒತ್ತಾಯ ಮಾಡಿತ್ತು. ಕಾಂಗ್ರೆಸ್ ಟಿಕೆಟ್ ತಮ್ಮಯ್ಯ ಅವರಿಗೆ ನೀಡಿದರೇ ಮತದಾನದಿಂದ ದೂರ ಉಳಿಯುವ ಎಚ್ಚರಿಕೆ ನೀಡಲಾಗಿತ್ತು. ಅಲ್ಲದೆ ಟಿಕೆಟ್​ಗೆ ಅರ್ಜಿ ಹಾಕಿರುವ ಆರು ಜನರಲ್ಲಿ ಒಬ್ಬರಿಗೆ ಟಿಕೆಟ್ ನೀಡುವಂತೆ ಮುಸ್ಲಿಂ ಸಮುದಾಯ ಒತ್ತಾಯ ಮಾಡಿತ್ತು.

ಇದನ್ನೂ ಓದಿ: ಟಿಕೆಟ್​​ಗಾಗಿ ಕುತ್ತಿಗೆಗೆ ನೇಣು ಕುಣಿಕೆ ಹಾಕಿಕೊಂಡು, ಕೈಯಲ್ಲಿ ಬಾಟಲಿ ಹಿಡಿದು ಬಿಜೆಪಿ ನಾಯಕನ ಹೈಡ್ರಾಮಾ

ಕಾಂಗ್ರೆಸ್​ ಮುಖಂಡ ಪ್ರಸನ್ನಕುಮಾರ್ ಪಕ್ಷದಿಂದ ವಜಾ

ಇನ್ನು ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಗುಬ್ಬಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಸನ್ನಕುಮಾರ್ ಅವರನ್ನು ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್​ಗೌಡ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.

ಗುಬ್ಬಿ ಕ್ಷೇತ್ರದ ಟಿಕೆಟ್​ ಆಕಾಂಕ್ಷಿ ಶ್ರೀನಿವಾಸ್,​ ಕಾಂಗ್ರೆಸ್​​ ಸೇರ್ಪಡೆಗೆ ಪ್ರಸನ್ನಕುಮಾರ್ ವಿರೋಧಿಸಿದ್ದರು. ತಾವೇ ಅಭ್ಯರ್ಥಿ ಎಂದು ಚುನಾವಣಾ ಪ್ರಚಾರ ಮಾಡಲು ನಿರ್ಧರಿಸಿದ್ದರು. ಈ ಹಿನ್ನೆಲೆ ಉಚ್ಚಾಟನೆ ಮಾಡಲಾಗಿದೆ ಎಂದು ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್​ಗೌಡ ಮಾಹಿತಿ ನೀಡಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:27 pm, Wed, 5 April 23

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ