AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪ ಶಿಕಾರಿಪುರದ ಅನಭಿಷಿಕ್ತ ದೊರೆ: ಬಿರುದು ಕೊಟ್ಟ ಕಾಂಗ್ರೆಸ್ ಶಾಸಕ ತಮ್ಮಯ್ಯ

ಚಿಕ್ಕಮಗಳೂರು ನಗರದ ಕುವೆಂಪು ಕಲಾಮಂದಿರದಲ್ಲಿ ನಡೆದ ಉರ್ದು ಸಮ್ಮೇಳನದಲ್ಲಿ ಕಾಂಗ್ರೆಸ್ ಶಾಸಕ ತಮ್ಮಯ್ಯ ಅವರು ಬಿಜೆಪಿ ಹಿರಿಯ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಶಿಕಾರಿಪುರದ ಅನಭಿಷಿಕ್ತ ದೊರೆ ಎಂದು ಕರೆದಿದ್ದಾರೆ. ಅಲ್ಲದೆ, ಯಡಿಯೂರಪ್ಪ ಕುರಿತು ಹೊಗಳಿಕೆಯ ಮಾತುಗಳನ್ನಾಡಿದ್ದಾರೆ.

ಯಡಿಯೂರಪ್ಪ ಶಿಕಾರಿಪುರದ ಅನಭಿಷಿಕ್ತ ದೊರೆ: ಬಿರುದು ಕೊಟ್ಟ ಕಾಂಗ್ರೆಸ್ ಶಾಸಕ ತಮ್ಮಯ್ಯ
ಯಡಿಯೂರಪ್ಪ ಅವರನ್ನು ಶಿಕಾರಿಪುರದ ಅನಭಿಷಿಕ್ತ ದೊರೆ ಎಂದು ಕರೆದ ಕಾಂಗ್ರೆಸ್ ಶಾಸಕ ತಮ್ಮಯ್ಯ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Mar 09, 2024 | 3:26 PM

Share

ಚಿಕ್ಕಮಗಳೂರು, ಮಾ.9: ಕಾಂಗ್ರೆಸ್ ಶಾಸಕ ತಮ್ಮಯ್ಯ (Thammaiah) ಅವರು ಬಿಜೆಪಿ ಹಿರಿಯ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಅವರನ್ನು ಶಿಕಾರಿಪುರದ (Shikharipura) ಅನಭಿಷಿಕ್ತ ದೊರೆ ಎಂದು ಕರೆದಿದ್ದಾರೆ. ಚಿಕ್ಕಮಗಳೂರು (Chikkamagaluru) ನಗರದ ಕುವೆಂಪು ಕಲಾಮಂದಿರದಲ್ಲಿ ನಡೆದ ಉರ್ದು (Urdu) ಸಮ್ಮೇಳನದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರ ಕುರಿತು ಹೊಗಳಿಕೆಯ ಮಾತುಗಳನ್ನಾಡಿದ್ದಾರೆ.

ಯಡಿಯೂರಪ್ಪ ಅವರು ಎಂದಿಗೂ ಯಾವ ಧರ್ಮವನ್ನ ವಿರೋಧಿಸಲಿಲ್ಲ. ದೇಶದಲ್ಲಿ ಮುಸ್ಲಿಮರು ಸಾರಾಸಗಟಾಗಿ ಬಿಜೆಪಿಗೆ ಮತ ಹಾಕುರುವುದು ಶಿಕಾರಿಪುರದಲ್ಲಿ ಮಾತ್ರ. ಅವರು ಕೆಜೆಪಿ ಕಟ್ಟಿದಾಗ ಮಸೀದಿಯಲ್ಲಿ ಟೋಪಿ ಹಾಕಿದರು. ಆ ಫೋಟೋ ಹಾಕಿ ತುಂಬಾ ಕಿಂಡಲ್ ಮಾಡಿದರು. ವ್ಯಕ್ತಿ ತನ್ನ ಧರ್ಮದ ಜೊತೆ ಎಲ್ಲಾ ಧರ್ಮವನ್ನ ಪ್ರೀತಿಸಬೇಕು. ಆತನನ್ನ ಎಲ್ಲಾ ಸಂದರರ್ಭದಲ್ಲೂ ಎಲ್ಲರೂ ಒಪ್ಪುತ್ತಾರೆ ಎಂದರು.

ಇದನ್ನೂ ಓದಿ: ಮುನಿಸು ಮರೆತು ಒಂದಾದ ಬಿ.ಎಸ್ ಯಡಿಯೂರಪ್ಪ, ವಿ.ಸೋಮಣ್ಣ

ಯಡಿಯೂರಪ್ಪ ಅವರ ಆಡಳಿತ ಮತ್ತು ನಡೆಯನ್ನು ಸ್ವಪಕ್ಷದವರು ಮಾತ್ರವಲ್ಲದೆ, ವಿರೋಧಿ ಪಕ್ಷ ಕಾಂಗ್ರೆಸ್ ನಾಯಕರು ಕೂಡ ಈ ಹಿಂದೆ ಮುಕ್ತ ಕಂಠದಿಂದ ಹೊಗಳಿದ್ದರು. ಯಡಿಯೂರಪ್ಪ ಅವರ ಸಾಮರಸ್ಯ, ಸೌಹಾರ್ದಯುತ ನಡೆಯ ಕುರಿತು ಜಮೀರ್ ಅಹ್ಮದ್ ಖಾನ್ ಹೊಗಳಿಕೆಯ ಮಾತುಗಳನ್ನಾಡಿದ್ದರು. ಶಿಕಾರಿಪುರದಲ್ಲಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಈ ಹಿಂದೆ ಕಾಂಗ್ರೆಸ್​ನ ಬಿಕೆ ಸಂಗಮೇಶ್ವರ್ ಕೂಡ ಹೊಗಳಿದ್ದರು. ಹೀಗೆ ಅನೇಕರು ಹೊಗಳಿಕೆಗೆ ಪಾತ್ರರಾಗಿರುವ ಯಡಿಯೂರಪ್ಪ ಅವರು ರೈತ ನಾಯಕ ಎಂದೂ ಕರೆಯಲ್ಪಡುತ್ತಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!