AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು ನಗರ ಕೋಟೆ ದರ್ಗಾದಲ್ಲಿ ಭುಗಿಲೆದ್ದ ವಿವಾದ: ನೂರಾರು ಪೊಲೀಸರ ನಿಯೋಜನೆ

ಅದು ಚಿಕ್ಕಮಗಳೂರು ನಗರದ ವಿವಾದಿತ ದರ್ಗಾ. ಕಳೆದ ಒಂದು ದಶಕದಿಂದ ಒಂದಿಲ್ಲೊಂದು ವಿವಾದಕ್ಕೆ ಕಾರಣವಾಗುತ್ತಿರುವ ಜಾಮಿಯಾ ಮಸೀದಿ ಅಧೀನದಲ್ಲಿರುವ ದರ್ಗಾದಲ್ಲಿ ಮತ್ತೊಂದು ವಿವಾದ ಸೃಷ್ಟಿಯಾಗಿದೆ. ಅನುಮತಿ ಪಡೆಯದೆ ವಿವಾದಿತ ಸ್ಥಳದಲ್ಲಿ ಕಾಮಗಾರಿಗೆ ಹಿಂದೂ ಸಂಘಟನೆ, ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬಿಗಿವಿನ ವಾತವರಣ ಸೃಷ್ಟಿಯಾಗಿದ್ದು, ದರ್ಗಾದ ಸುತ್ತ ನೂರಾರು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಚಿಕ್ಕಮಗಳೂರು ನಗರ ಕೋಟೆ ದರ್ಗಾದಲ್ಲಿ ಭುಗಿಲೆದ್ದ ವಿವಾದ: ನೂರಾರು ಪೊಲೀಸರ ನಿಯೋಜನೆ
ಕೋಟೆ ದರ್ಗಾದಲ್ಲಿ ವಿವಾದ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Jan 04, 2025 | 11:29 AM

Share

ಚಿಕ್ಕಮಗಳೂರು, ಜನವರಿ 4: ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯಲ್ಲಿರುವ ಜಾಮಿಯಾ ಮಸೀದಿ ಅಧೀನದಲ್ಲಿರುವ ಹಜರತ್ ಸೈಯದ್ ಮೌಲಾನಾ ರೋಂ ಶಾಖಾದ್ರಿ ದರ್ಗಾ ಮತ್ತೆ ವಿವಾದಕ್ಕೆ ಕಾರಣವಾಗಿದೆ. ದರ್ಗಾದ ಆವರಣದಲ್ಲಿ ಟೈಲ್ಸ್ ಕಾಮಗಾರಿಗೆ ವಿರೋಧ ವ್ಯಕ್ತಪಡಿಸಿರುವ ಸ್ಥಳೀಯರು ಹಾಗೂ ಹಿಂದೂ ಸಂಘಟನೆ ಸದಸ್ಯರು ಕಾಮಗಾರಿ ನಡೆಸದಂತೆ ಶುಕ್ರವಾರ ಪ್ರತಿಭಟನೆ ನಡೆಸಿದ್ದಾರೆ. ವಿವಾದಿತ ಸ್ಥಳದಲ್ಲಿ ಕಾಮಗಾರಿ ನಡೆಸಲು ಅನುಮತಿ ನೀಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆ ಹೆಚ್ಚಾಗುತ್ತಿದ್ದಂತೆಯೇ ಕೋಟೆ ಬಡಾವಣೆಯಲ್ಲಿ ಚಿಕ್ಕಮಗಳೂರು ಡಿವೈಎಸ್​ಪಿ ಶೈಲೇಂದ್ರ ನೇತೃತ್ವದಲ್ಲಿ ನೂರಾರು ಪೊಲೀಸರ ಭದ್ರತೆ ನೀಡಲಾಗಿದೆ. ಸ್ಥಳಕ್ಕೆ ಬಂದ ಚಿಕ್ಕಮಗಳೂರು ನಗರ ಸಭೆ ಅಧ್ಯಕ್ಷೆ ಸುಜಾತಾ ಕಾಮಗಾರಿ ನಡೆಸದಂತೆ ಸೂಚನೆ ನೀಡಿದ್ದಾರೆ. ಜಾಮಿಯಾ ಮಸೀದಿ ನಾಳೆಯೊಳಗೆ ದರ್ಗಾಕ್ಕೆ ಸಂಬಂಧಿಸಿದ ದಾಖಲೆ ನೀಡುವಂತೆ ಸೂಚನೆ ನೀಡಿದ್ದಾರೆ.

ಹಿಂದೂ ಸಂಘಟನೆಗಳ, ಸ್ಥಳೀಯರ ಆಕ್ಷೇಪವೇನು?

ಒಂದೇ ಒಂದು ಮುಸ್ಲಿಂ ಮನೆಗಳೇ ಇಲ್ಲದ‌ ಕೋಟೆ ಬಡಾವಣೆಯಲ್ಲಿರುವ ಈ‌ ದರ್ಗಾದಲ್ಲಿರುವ ಗೋರಿಗಳು ನಕಲಿ. ಆಸ್ತಿ ಹೊಡೆಯುವ ಸಂಚು. ಜಾಮಿಯಾ ಮಸೀದಿ ಬಳಿ ಯಾವುದೇ ದಾಖಲೆಗಳಿಲ್ಲ. ದಾಖಲೆ ಇದ್ದರೆ ನೀಡಲಿ ಎಂಬುದೇ ಹಿಂದೂ ಸಂಘಟನೆಗಳು ಹಾಗೂ ಸ್ಥಳೀಯರ ವಾದ. ಇದೇ ಸಂಘರ್ಷ ವಿವಾದಿತ ದರ್ಗಾವಾಗಿ ಮಾರ್ಪಟ್ಟಿದೆ. ಕಳೆದ ವರ್ಷವೂ ಕಾಮಗಾರಿ ವಿರೋಧಿಸಿ ದರ್ಗಾದೊಳಗೆ ಗಲಾಟೆ ನಡೆದಿತ್ತು. ಇದೀಗ ಮತ್ತೆ ವಿವಾದ ಮುನ್ನೆಲೆಗೆ ಬಂದಿದ್ದು ನಾಳೆ ನಗರಸಭೆಯಲ್ಲಿ ಸಭೆ ಕರೆಯಲಾಗಿದೆ.

Police Security

ಸ್ಥಳಕ್ಕೆ ಪೊಲೀಸ್ ಭದ್ರತೆ

ಇದನ್ನೂ ಓದಿ: ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಾಂತವಾಗಿದ್ದ ಕಾಫಿ ನಾಡಿನಲ್ಲಿ ಮತ್ತೆ ಸಂಘರ್ಷಗಳು ದಿನದಿಂದ ದಿನಕ್ಕೆ ಸೃಷ್ಟಿಯಾಗುತ್ತಿದೆ. ಜಾಮಿಯಾ ಮಸೀದಿ ಅಧೀನದಲ್ಲಿರುವ ದರ್ಗಾ ಮತ್ತೊಂದು ವಿವಾದ ಸೃಷ್ಟಿ ಮಾಡಿದ್ದು, ದರ್ಗಾ ಬಳಿ ನೂರಾರು ಪೊಲೀಸರನ್ನ ಮುಂಜಾಗ್ರತಾ ಕ್ರಮವಾಗಿ ನಿಯೋಜನೆ ಮಾಡಲಾಗಿದೆ.‌ ಇಂದು ನಗರಸಭೆಯಲ್ಲಿ ಸಭೆ ನಡೆಯಲಿದ್ದು, ಬಳಿಕ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ