ಚಿಕ್ಕಮಗಳೂರು: ಕೊಪ್ಪದಲ್ಲಿ ಮಿತಿಮೀರಿದ ದನಗಳ್ಳರ ಹಾವಳಿ; ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳರ ಆಟಾಟೋಪ

ಕೊಪ್ಪ ಪಟ್ಟಣದ ಹುಲ್ಮಕ್ಕಿ ಸ್ವದೇಶಿ ಭಂಡಾರ ಅಂಗಡಿ ಮುಂಭಾಗದಿಂದ ದನ ಕಳ್ಳತನ ಆಗಿದ್ದು, ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಲಗಿದ್ದ ದನಗಳನ್ನು ಕಾರಿಗೆ ತುಂಬಿಸಿಕೊಂಡು ಕಳ್ಳರು ಪರಾರಿಯಾಗಿದ್ದಾರೆ. ಸ್ವದೇಶಿ ಭಂಡಾರದ ಎದುರು ಎರಡು ದನಗಳು ಮಲಗಿದ್ದು, ಅವುಗಳಿಗೆ ಹೊಂಚು ಹಾಕಿದ ಕಳ್ಳರು ತಿನ್ನಲು ಆಹಾರ ನೀಡಿ ಕದ್ದೊಯ್ದಿದ್ದಾರೆ.

ಚಿಕ್ಕಮಗಳೂರು: ಕೊಪ್ಪದಲ್ಲಿ ಮಿತಿಮೀರಿದ ದನಗಳ್ಳರ ಹಾವಳಿ; ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳರ ಆಟಾಟೋಪ
ದನಗಳ್ಳರ ಕೈಚಳಕ
Follow us
| Updated By: Skanda

Updated on: Jul 31, 2021 | 7:04 AM

ಚಿಕ್ಕಮಗಳೂರು: ಅಂಗಡಿ ಮುಂಭಾಗದಲ್ಲಿ ಮಲಗಿದ್ದ ದನಗಳನ್ನು ಕದ್ದ ಕಳ್ಳರು ಅವುಗಳನ್ನು ಕಾರಿಗೆ ತುಂಬಿಸಿಕೊಂಡು ಹೋದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣ ವ್ಯಾಪ್ತಿಯಲ್ಲಿ ನಡೆದಿದೆ. ಜಿಲ್ಲೆಯಲ್ಲಿ ಇತ್ತೀಚೆಗೆ ದನಗಳ್ಳರ ಹಾವಳಿ ಹೆಚ್ಚಾಗುತ್ತಿದ್ದು, ರಸ್ತೆ ಪಕ್ಕದಲ್ಲಿ ಮಲಗಿದ ದನಗಳನ್ನು, ಮನೆಯ ಸಮೀಪ ಕಟ್ಟಿದ ದನಗಳನ್ನೂ ಬಿಡದೇ ಕದ್ದೊಯ್ಯುತ್ತಿದ್ದಾರೆ. ಇದರಿಂದಾಗಿ ಗೋ ಸಾಕಾಣಿಕೆದಾರರಿಗೆ ಜಾನುವಾರುಗಳನ್ನು ಕಾಪಾಡಿಕೊಳ್ಳುವುದೇ ದೊಡ್ಡ ಸವಾಲಾಗಿದ್ದು, ಕೊಪ್ಪ ಪಟ್ಟಣದಲ್ಲೇ ಮರುಕಳಿಸಿರುವ ಈ ಘಟನೆ ಮತ್ತೆ ಆಕ್ರೋಶಕ್ಕೆ ಕಾರಣವಾಗಿದೆ.

ಕೊಪ್ಪ ಪಟ್ಟಣದ ಹುಲ್ಮಕ್ಕಿ ಸ್ವದೇಶಿ ಭಂಡಾರ ಅಂಗಡಿ ಮುಂಭಾಗದಿಂದ ದನ ಕಳ್ಳತನ ಆಗಿದ್ದು, ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಲಗಿದ್ದ ದನಗಳನ್ನು ಕಾರಿಗೆ ತುಂಬಿಸಿಕೊಂಡು ಕಳ್ಳರು ಪರಾರಿಯಾಗಿದ್ದಾರೆ. ಸ್ವದೇಶಿ ಭಂಡಾರದ ಎದುರು ಎರಡು ದನಗಳು ಮಲಗಿದ್ದು, ಅವುಗಳಿಗೆ ಹೊಂಚು ಹಾಕಿದ ಕಳ್ಳರು ತಿನ್ನಲು ಆಹಾರ ನೀಡಿ ಕದ್ದೊಯ್ದಿದ್ದಾರೆ. ಕಾರಿನಿಂದ ಇಳಿದು ಬಂದ ಒಬ್ಬಾತ ಮೊದಲು ದನಗಳಿಗೆ ತಿನ್ನಲ್ಲು ಕೊಟ್ಟು, ಅದನ್ನು ಬಿಗಿದು ಹಿಡಿದುಕೊಂಡರೆ, ಇನ್ನೊಬ್ಬಾತ ಹಗ್ಗ ಹಿಡಿದು ಓಡಿ ಬಂದಿದ್ದಾನೆ. ನಳಿಕ ಇಬ್ಬರೂ ಸೇರಿ ಅದನ್ನು ಬಂಧಿಸುವಷ್ಟರಲ್ಲಿ ಕಾರಿನಲ್ಲಿದ್ದಾತ ಕಾರನ್ನು ಹತ್ತಿರಕ್ಕೆ ಚಲಾಯಿಸಿಕೊಂಡು ಬಂದಿದ್ದಾನೆ.

ಈ ಘಟನೆಯ ಸಂಪೂರ್ಣ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ದನಗಳ್ಳರು ಎಲ್ಲೆಡೆ ಉಪಯೋಗಿಸುವ ತಂತ್ರವನ್ನೇ ಇವರೂ ಅನುಸರಿಸಿದ್ದಾರೆ. ಬಿಳಿ ಬಣ್ಣದ ಸ್ವಿಫ್ಟ್​ ಕಾರಿನಲ್ಲಿ ಬಂದ ಖದೀಮರು ದನಗಳನ್ನು ಕದ್ದೊಯ್ದಿದ್ದು, ಇಕ್ಕಟ್ಟಾದ ಕಾರಿಗೆ ಅವುಗಳನ್ನು ಹಿಂಸಿಸಿ ತುಂಬುವುದು ಕರುಳು ಹಿಂಡುವಂತಿದೆ.

ಮಲೆನಾಡು ಭಾಗದಲ್ಲಿ ಇತ್ತೀಚಿನ ವರ್ಷಗಳಲ್ಲಿ ಕಾರಿನಲ್ಲಿ ಬಂದು ದನ ಕದಿಯುವ ಪ್ರಕರಣಗಳು ಸಾಮಾನ್ಯ ಎಂಬಂತಾಗಿದ್ದು, ಪದೇಪದೇ ಇಂತಹ ಘಟನೆಗಳು ಮರುಕಳಿಸುತ್ತಲೇ ಇವೆ. ಕಳೆದ ಬಾರಿ ಹೀಗೆಯೇ ಕಾರಿಗೆ ದನ ತುಂಬಿಕೊಂಡು ಹೋಗುತ್ತಿದ್ದ ವೇಳೆ ಕಾರು ಪಲಟ್ಇ ಹೊಡೆದ ಘಟನೆ ದಕ್ಷಿಣ ಕನ್ನಡದಲ್ಲಿ ವರದಿಯಾಗಿತ್ತು.

ಮಿತಿಮೀರುತ್ತಿರುವ ದನಗಳ್ಳರ ಹಾವಳಿಗೆ ಕಡಿವಾಣ ಹಾಕಲೇಬೇಕೆಂದು ಗೋ ಪ್ರಿಯರು ಎಷ್ಟೇ ಒತ್ತಾಯಿಸಿದರೂ ಅದು ಸಾಧ್ಯವಾಗುತ್ತಿಲ್ಲ. ರಾತ್ರಿ ವೇಳೆ ಜನ ಸಂಚಾರ ಇಲ್ಲದ ಪ್ರದೇಶಗಳಲ್ಲಿ ಮಲಗಿದ ಜಾನುವಾರುಗಳಿಗೇ ಹೊಂಚು ಹಾಕುವ ಕಳ್ಳರು ಅವುಗಳನ್ನು ಚಾಣಾಕ್ಷತನದಿಂದ ಕದ್ದೊಯ್ಯುತ್ತಿದ್ದು, ಅವರನ್ನು ನಿಯಂತ್ರಿಸುವುದೇ ದೊಡ್ಡ ಸವಾಲಾಗಿದೆ.

ಇದನ್ನೂ ಓದಿ: ಶಿರಸಿ: ಐಷಾರಾಮಿ ವಾಹನಗಳಲ್ಲಿ ದನಗಳನ್ನು ಕಳುವು ಮಾಡುತ್ತಿದ್ದ ಅಂತರ್​ಜಿಲ್ಲಾ ಕಳ್ಳರ ಬಂಧನ 

ಹಸುಗಳ ಕಳ್ಳ ಸಾಗಾಣಿಕೆ ಶಂಕೆ: ರಾಜಸ್ಥಾನದಲ್ಲಿ ಗುಂಪು ಹಲ್ಲೆಗೆ ವ್ಯಕ್ತಿ ಬಲಿ

(Cow theft in Koppa Chikkamagaluru District caught on camera)

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ