AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿಗೆ ವಿಷ ಹಾಕಿ ಕಳ್ಳತನ ಮಾಡುತ್ತಿದ್ದ ಗ್ಯಾಂಗ್​ನ ಇಬ್ಬರ ಸೆರೆ; ಒಂದು ಕೋಟಿ ಮೌಲ್ಯದ ಪುರಾತನ ರತ್ನ ವಶ

Crime News: ಈ ಗ್ಯಾಂಗ್ ನಾಯಿಗೆ ವಿಷ ಹಾಕಿ ಮನೆಗಳ್ಳತನ ಮಾಡುತ್ತಿದ್ದ ಗ್ಯಾಂಗ್ ಎಂದು ಕುಖ್ಯಾತಿ ಪಡೆದುಕೊಂಡಿದೆ. ಅಷ್ಟೇ ಅಲ್ಲದೆ, ಕೇರಳದ ಹೈಟೆಕ್ ವೇಶ್ಯಾವಾಟಿಕೆ ದಂಧೆಯಲ್ಲೂ ಭಾಗಿ ಆಗಿರುವ ಆರೋಪ ಈ ಗ್ಯಾಂಗ್ ಮೇಲಿದೆ.

ನಾಯಿಗೆ ವಿಷ ಹಾಕಿ ಕಳ್ಳತನ ಮಾಡುತ್ತಿದ್ದ ಗ್ಯಾಂಗ್​ನ ಇಬ್ಬರ ಸೆರೆ; ಒಂದು ಕೋಟಿ ಮೌಲ್ಯದ ಪುರಾತನ ರತ್ನ ವಶ
ಸಾಂದರ್ಭಿಕ ಚಿತ್ರ
TV9 Web
| Updated By: ganapathi bhat|

Updated on:Aug 23, 2021 | 11:02 PM

Share

ಚಿಕ್ಕಮಗಳೂರು: ವಿವಿಧ ಪ್ರಕರಣಗಳಲ್ಲಿ ಬೇಕಾಗಿದ್ದ ಕುಖ್ಯಾತ ದರೋಡೆಕೋರ ಗ್ಯಾಂಗ್‌ನ ಇಬ್ಬರ ಸೆರೆಯಾಗಿದೆ. ಚಿಕ್ಕಮಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ ಇಬ್ಬರ ಬಂಧನವಾಗಿದೆ. ಬಂದಿತರಿಂದ ಸುಮಾರು 1 ಕೋಟಿ ರೂಪಾಯಿ ಮೌಲ್ಯದ ಪುರಾತನ ರತ್ನ, 500 ಮತ್ತು 2 ಸಾವಿರ ಮುಖಬೆಲೆಯ ಖೋಟಾ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ. 3 ಕಾರು, 5 ಮೊಬೈಲ್, ಕಂಪ್ಯೂಟರ್, ಪ್ರಿಂಟರ್ ವಶಕ್ಕೆ ಕೊಳ್ಳಲಾಗಿದೆ. ಈ ಗ್ಯಾಂಗ್ ನಾಯಿಗೆ ವಿಷ ಹಾಕಿ ಮನೆಗಳ್ಳತನ ಮಾಡುತ್ತಿದ್ದ ಗ್ಯಾಂಗ್ ಎಂದು ಕುಖ್ಯಾತಿ ಪಡೆದುಕೊಂಡಿದೆ. ಅಷ್ಟೇ ಅಲ್ಲದೆ, ಕೇರಳದ ಹೈಟೆಕ್ ವೇಶ್ಯಾವಾಟಿಕೆ ದಂಧೆಯಲ್ಲೂ ಭಾಗಿ ಆಗಿರುವ ಆರೋಪ ಈ ಗ್ಯಾಂಗ್ ಮೇಲಿದೆ.

ಮೈಸೂರು: ಚಿನ್ನದ ಅಂಗಡಿ ಮಾಲೀಕ ಬಂಧನ ಕದ್ದ ಚಿನ್ನ ಖರೀದಿಸುತ್ತಿದ್ದ ಅಂಗಡಿ ಮಾಲೀಕನ ಬಂಧನವಾಗಿದೆ. ಮೈಸೂರು ಸಿಸಿಬಿ ಪೊಲೀಸರಿಂದ ಲೋಕೇಶ್ ಎಂಬಾತನನ್ನು ಬಂಧಿಸಲಾಗಿದೆ. ಲೋಕೇಶ್, ಚಾಮುಂಡೇಶ್ವರಿ ಚಿನ್ನದ ಅಂಗಡಿ ಮಾಲೀಕ ಆಗಿದ್ದು, ಚಾಮರಾಜನಗರದ ಭ್ರಮರಾಂಬ ಬಡಾವಣೆಯಲ್ಲಿರುವ ಅಂಗಡಿ ನಡೆಸುತ್ತಿದ್ದ. ಮೈಸೂರಿನಲ್ಲಿ ಕದ್ದಿದ್ದ ಚಿನ್ನ ಖರೀದಿಸುತ್ತಿದ್ದ ಎಂದು ತಿಳಿದುಬಂದಿದೆ. ಇದೀಗ ಮಾಲೀಕನ ಬಂಧನದಿಂದ ಲೋಕೇಶ್ ಬಳಿ ಚಿನ್ನಾಭರಣ ಗಿರವಿ ಇಟ್ಟವರಲ್ಲಿ ಆತಂಕ ಶುರುವಾಗಿದೆ.

ಚಿನ್ನದ ಸರದ ತುಂಡನ್ನು ನುಂಗಿದ ಕಳ್ಳ ಪೊಲೀಸರು ಬಂಧಿಸುತ್ತಾರೆ ಎಂಬ ಭಯದಲ್ಲಿ ಕಳ್ಳನೊಬ್ಬ ತಾನು ಕದ್ದಿದ್ದ ಚಿನ್ನದ ಸರದ ತುಂಡನ್ನು ನುಂಗಿದ್ದಾನೆ. ಈ ಘಟನೆ ಬೆಂಗಳೂರಿನ ಕೆ.ಆರ್.ಮಾರ್ಕೆಟ್ನಲ್ಲಿ (KR Market) ನಡೆದಿದೆ. ಎಂ.ಟಿ.ಸ್ಟ್ರೀಟ್ ಬಳಿ ಸರಗಳ್ಳತನ ಮಾಡಿ ಪರಾರಿಯಾಗಲು ಯತ್ನಿಸಿದ್ದ. ಆದರೆ ಸಾರ್ವಜನಿಕರ ಕೈಯಲ್ಲಿ ಸಿಕ್ಕಿಬಿದ್ದಿದ್ದ. ಈ ವೇಳೆ ಕೈಯಲ್ಲಿದ್ದ ಚಿನ್ನದ ಸರದ ತುಂಡನ್ನು ಆರೋಪಿ ನುಂಗಿದ್ದಾನೆ. ವಿಜಿ ಎಂಬುವವನು ಸರವನ್ನು ನುಂಗಿದ ಆರೋಪಿ. ಪೊಲೀಸರು ಠಾಣೆಗೆ ಕರೆದೊಯ್ದು ವಿಚಾರಣೆ ಮಾಡಿದಾಗ ಸರದ ತುಂಡು ನುಂಗಿರುವ ಬಗ್ಗೆ ಬಾಯಿಬಿಟ್ಟಿದ್ದಾನೆ.

ಸರಗಳ್ಳರು ಸಾರ್ವಜನಿಕರ ಕೈಯಲ್ಲಿ ತಗಲಾಕಿಕೊಂಡಿದ್ದರು. ಅದರಲ್ಲಿ ಓರ್ವ ಆರೋಪಿ ಕದ್ದ ಸರದ ಅರ್ಧ ತುಂಡನ್ನು ನುಂಗುತ್ತಾನೆ. ಪೊಲೀಸರು ವಿಚಾರಣೆ ನಡೆಸಿದ ಬಳಿಕ ತಾನು ಸರ ನುಂಗಿರುವ ಬಗ್ಗೆ ಬಾಯಿ ಬಿಡುತ್ತಾನೆ. ಆಸ್ಪತ್ರೆಗೆ ದಾಖಲಿಸಿ ಆರೋಪಿ ವಿಜಿಗೆ ಸ್ಕ್ಯಾನಿಂಗ್ ಮಾಡಿಸಿದಾಗ ಆತನ ಹೊಟ್ಟೆಯಲ್ಲಿ ಚಿನ್ನದ ತುಂಡುಗಳಿರುವುದು ಪತ್ತೆಯಾಗಿದೆ.

ಇದನ್ನೂ ಓದಿ: ಬೆಂಗಳೂರು: ರುಚಿಯಾಗಿ ಚಿಕನ್ ಫ್ರೈ ಮಾಡಿಕೊಟ್ಟಿಲ್ಲ ಎಂದು ಹೆಂಡತಿಯನ್ನೇ ಕೊಂದ ಗಂಡ

ರಕ್ಷಾಬಂಧನಕ್ಕಾಗಿ ಮುನ್ನಾದಿನವೇ ತವರು ಮನೆಗೆ ಬಂದ ಸೋದರಿಯರು; ಹಬ್ಬದ ದಿನ ಅಣ್ಣನ ಜೀವವಿಲ್ಲದ ಕೈಯಿಗೆ ರಾಖಿ ಕಟ್ಟುವಂತಾಯ್ತು

Published On - 11:00 pm, Mon, 23 August 21

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ